ಧರ್ಮಸ್ಥಳ ಯಾತ್ರಿಗಳಿಗೆಸಳೀಯರ ಸೇವೆ

ಪಾದಯಾತ್ರಿಗಳಿಗೆ ವಿಶ್ರಾಂತಿ ತಾಣ-ಅನ್ನಸಂತರ್ಪಣೆ ವ್ಯವಸ್ಥೆ

Team Udayavani, Feb 19, 2020, 3:18 PM IST

19-February-18

ಮೂಡಿಗೆರೆ: ಧರ್ಮಸ್ಥಳದಲ್ಲಿ ಶುಕ್ರವಾರದಂದು ನಡೆಯುವ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಸಾವಿರಾರು ಭಕ್ತರು ಪಾದಯಾತ್ರೆ ಕೈಗೊಂಡಿದ್ದು, ಈ ಯಾತ್ರಿಕರಿಗಾಗಿ ತಾಲೂಕಿನ ವಿವಿಧೆಡೆ ಸ್ಥಳೀಯರು ವಿಶ್ರಾಂತಿ ತಾಣ ಹಾಗೂ ಅನ್ನಸಂತರ್ಪಣೆ ಸೇವೆ ಕಲ್ಪಿಸುತ್ತಿದ್ದಾರೆ.

ಉತ್ತರ ಕರ್ನಾಟಕದ ಬಳ್ಳಾರಿ, ಗದಗ, ಹೊಸಪೇಟೆ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು, ಕೋಲಾರ, ತುಮಕೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದ್ದು, ದಾರಿಯುದ್ದಕ್ಕೂ ಭಕ್ತರ ದಂಡು ಕಾಣಸಿಗುತ್ತಿದೆ.

ಧರ್ಮಸ್ಥಳಕ್ಕೆ ತೆರಳುವ ಮಾರ್ಗಮಧ್ಯೆ ಮೂಡಿಗೆರೆ ತಾಲೂಕು ಪ್ರವೇಶಿಸುವ ಯಾತ್ರಾರ್ಥಿಗಳಿಗೆ ಕಸ್ಕೇಬೈಲಿನಿಂದ ಕೊಟ್ಟಿಗೆಹಾರದವೆರೆಗೂ ಅಲ್ಲಲ್ಲಿ ವಿಶ್ರಾಂತಿ ತಾಣಗಳು, ಅನ್ನಸಂತರ್ಪಣೆ ಕೇಂದ್ರಗಳು, ಆರೋಗ್ಯ ತಪಾಸಣೆ ಕೇಂದ್ರಗಳನ್ನು ತೆರೆದು ಯಾತ್ರಾರ್ಥಿಗಳ ಯೋಗಕ್ಷೇಮ ವಿಚಾರಿಸಿಕೊಳ್ಳಲಾಗುತ್ತಿದೆ. ಸ್ಥಳೀಯ ಸ್ವಯಂಸೇವಕರು, ದಾನಿಗಳು ಯಾತ್ರಾರ್ಥಿಗಳಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಹಲವೆಡೆ ಉಚಿತ ಆರೋಗ್ಯ ತಪಾಸಣೆ ಕೇಂದ್ರಗಳನ್ನು ತೆರೆದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ಕಸ್ಕೆಬೈಲ್‌, ಹ್ಯಾಂಡ್‌ಪೋಸ್ಟ್‌, ಜನ್ನಾಪುರ ಗ್ರಾಮದಲ್ಲಿ ರಸ್ತೆ ಪಕ್ಕದಲ್ಲಿ ಉಚಿತವಾಗಿ ಪಾನಕ, ಮಜ್ಜಿಗೆ, ಕಾಫಿ, ಟೀ, ಹಾಲು ನೀಡಿ ಯಾತ್ರಾರ್ಥಿಗಳ ಸೇವೆ ಮಾಡಲಾಗುತ್ತಿದೆ. ಪಾದಯಾತ್ರಿಗಳಿಗಾಗಿ ದಾರಿಯುದ್ದಕ್ಕೂ ತಾತ್ಕಾಲಿಕ ಅಂಗಡಿಗಳನ್ನು ತೆರೆಯಲಾಗಿದ್ದು, ವ್ಯಾಪಾರದ ಭರಾಟೆ ಜೋರಾಗಿದೆ. ಸಂಜೆ ವೇಳೆಗೆ ಸುತ್ತಮುತ್ತಲ ಗ್ರಾಮಗಳಲ್ಲಿ ಉಳಿದುಕೊಳ್ಳುತ್ತಿರುವ ಪಾದಯಾತ್ರಿಗಳಿಗೆ ಸ್ಥಳೀಯರು ತಮ್ಮ ಮನೆಗಳ ಬಳಿ ಸ್ಥಳಾವಕಾಶ ಒದಗಿಸುತ್ತಿದ್ದು, ಊಟೋಪಚಾರ ಸೇರಿದಂತೆ, ಬಿಸಿ ನೀರಿನ ಸ್ನಾನಕ್ಕೆ ವ್ಯವಸ್ಥೆ ಮಾಡಿಕೊಡುತ್ತಿರುವುದು ಯಾತ್ರಾತ್ರಿಗಳ ಮನ ಗೆದ್ದಿದೆ.

ಬಿಳಗುಳದ ಗಜೇಂದ್ರ ಅವರು ತಮ್ಮ ಮನೆಯ ಬಳಿ ಯಾತ್ರಾರ್ಥಿಗಳಿಗೆ ಉಳಿದುಕೊಳ್ಳಲು ಹಾಗೂ ಭಜನೆ ಕಾರ್ಯಗಳನ್ನು ನಡೆಸಲು ವ್ಯವಸ್ಥೆ ಕಲ್ಪಿಸಿರುವುದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಇತ್ತ ನೀರುಗಂಡಿಯ ಯೋಗೇಶ್‌ ಅವರ ಕಾಫಿ ಕ್ಯೂರಿಂಗ್‌ ಆವರಣದಲ್ಲಿ ಧರ್ಮಸ್ಥಳ ಯಾತ್ರಿಗಳ ಸಮಾಜ ಸೇವಾ ಸಂಘದ ವತಿಯಿಂದ ಬೃಹತ್‌ ಶಿಬಿರವನ್ನು ತೆರೆಯಲಾಗಿದೆ. ಶಿಬಿರದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ, ಸದ್ವಿದ್ಯಾ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಆಯುರ್ವೇದ ಚಿಕಿತ್ಸೆ, ಪಾದಯಾತ್ರಿಗಳಿಗೆ ಸ್ನಾನದ ವ್ಯವಸ್ಥೆ, ಅನ್ನಸಂತರ್ಪಣೆ, ಪಾದ ಮಜ್ಜನ ಸೇರಿದಂತೆ ಹತ್ತು ಹಲವು ಸೇವೆಗಳನ್ನು ನೀಡಲಾಗುತ್ತಿದೆ.

ಹೆಸಗಲ್‌, ಚಿನ್ನಿಗಾ, ಗೋಣಿಬೀಡು, ಬಿದಿರಹಳ್ಳಿ, ಬಾಳೂರು, ಕೂವೆ, ತರುವೆ, ಬಣಕಲ್‌ ಮುಂತಾದ ಗ್ರಾಮ ಪಂಚಾಯತಿಗಳಿಂದ ಯಾತ್ರಿಗಳಿಗೆ ದಾರಿಯುದ್ದಕ್ಕೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಯಲ್ಲಿ ಹೆದ್ದಾರಿಯುದ್ದಕ್ಕೂ ವಾಹನಗಳ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಹಾಗಾಗಿ, ಪಾದಯಾತ್ರಿಗಳು ಎಚ್ಚರಿಕೆಯಿಂದ ಚಲಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಶಿವರಾತ್ರಿಗೆ ಇನ್ನು ಕೇವಲ 2 ದಿನಗಳು ಬಾಕಿ ಇದ್ದು, ಹೆಚ್ಚಿನ ಯಾತ್ರಿಕರ ಆಗಮನದ ನಿರೀಕ್ಷೆ ಇರುವುದರಿಂದ ತಾಲೂಕು ಆಡಳಿತ ಹಾಗೂ ಸ್ಥಳೀಯ ಸ್ವಯಂಸೇವಕರು ಸೇವೆಗೆ ಸಕಲ ರೀತಿಯಿಂದ ಸಜ್ಜಾಗಿದ್ದಾರೆ.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.