![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 23, 2023, 7:02 PM IST
ಕೊಟ್ಟಿಗೆಹಾರ: ಕೊಟ್ಟಿಗೆಹಾರದಲ್ಲಿ ಹಲವು ಸಮಯದಿಂದ ಬೀಡಾಡಿ ದನಗಳು ರಸ್ತೆಯಲ್ಲಿ ಸಂಚರಿಸಿ ವಾಹನ ಸವಾರರಿಗೆ ತೊಂದರೆ ನೀಡುತ್ತಿವೆ. ರಾತ್ರಿಯಂತೂ ಈ ಬೀಡಾಡಿ ದನಗಳು ರಸ್ತೆಯಲ್ಲಿ ಇದ್ದರೂ ಕಾಣದೇ ಅನೇಕ ಅಪಘಾತಗಳು ಸಂಭವಿಸಿವೆ. ಆದರೂ ಬೀಡಾಡಿ ದನಗಳ ಸಂಚಾರಕ್ಕೆ ಕಡಿವಾಣ ಬಿದ್ದಿಲ್ಲ.
ರಾತ್ರಿ ಹಲವು ದನಗಳು ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಮುಂದೆ ಆಶ್ರಯಿಸಿ ಸಗಣಿ ಗಂಜಲ ಹಾಕಿ ಪರಿಸರ ಕಲುಷಿತಗೊಳಿಸುತ್ತವೆ. ರಸ್ತೆಯಲ್ಲಿ ದನಗಳ ಹಿಂಡು ಕಂಡು ಬರುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಗಳು ದ್ವನಿವರ್ಧಕ ಮೂಲಕ ದನಗಳ ಮಾಲೀಕರು ದನಗಳ ನಿಗಾವಹಿಸಿ ಎಂದರೂ ಮಾಲೀಕರು ಗಮನ ಹರಿಸುತ್ತಿಲ್ಲ. ಇದರಿಂದ ಬೀಡಾಡಿ ದನಗಳ ಸಮಸ್ಯೆ ಗ್ರಾಮ ಪಂಚಾಯಿತಿ ತಲೆನೋವಾಗಿ ಹೋಗಿದೆ.
ಶನಿವಾರ ಬಣಕಲ್ ಪೇಟೆಯಲ್ಲಿ ಬೀಡಾಡಿ ಹಸುವೊಂದು ತನ್ನ ಕಂದಮ್ಮನಿಗೆ ಜನ್ಮ ನೀಡಿದೆ. ಕರು ಕೂಡ ರಸ್ತೆಯಲ್ಲಿಯೇ ತಾಯಿಯನ್ನು ಹಿಂಬಾಲಿಸುವ ದೃಶ್ಯ ಕಂಡು ಬಂತು. ಕರುವನ್ನು ಸಮಾಜ ಸೇವಕ ಆರೀಫ್ ಹಿಡಿದು ಅದರ ಪೋಟೋ ತೆಗೆದು ಸಾಮಾಜಿಕ ತಾಣದಲ್ಲಿ ವೈರಲ್ ಮಾಡಿ ದನದ ಮಾಲೀಕರು ಹಸು ಮತ್ತು ಕರುವನ್ನು ತೆಗೆದುಕೊಂಡು ಹೋಗಿ ಎಂದು ಸಂದೇಶ ಹಾಕಿರುವುದು ವೈರಲ್ ಆಗಿದೆ.
ಇದನ್ನೂ ಓದಿ: Asian Games ಅತ್ಯಾಕರ್ಷಕ ಉದ್ಘಾಟನೆ: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.