ಫೋಟೋಗ್ರಫಿಗೆ ಕಲಾತ್ಮ ಕತೆ ಅಗತ್ಯ


Team Udayavani, Dec 14, 2020, 7:07 PM IST

ಫೋಟೋಗ್ರಫಿಗೆ ಕಲಾತ್ಮ ಕತೆ ಅಗತ್ಯ

ಕೊಟ್ಟಿಗೆಹಾರ: ಛಾಯಾಗ್ರಾಹಕನಿಗೆ ತಾಂತ್ರಿಕ ಜ್ಞಾನದ ಜೊತೆಗೆ ಕಲಾತ್ಮಕತೆ ಇದ್ದಾಗ ಒಂದು ಪರಿಪೂರ್ಣ ಛಾಯಾಚಿತ್ರ ಮೂಡಿ ಬರಲು ಸಾಧ್ಯ ಎಂದು ಖ್ಯಾತಚಿತ್ರ ಕಲಾವಿದ ಸುರೇಶ್‌ಚಂದ್ರ ದತ್ತ ಹೇಳಿದರು.

ಕೊಟ್ಟಿಗೆಹಾರದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಫೋಟೋಗ್ರಫಿ ಸೊಸೈಟಿ ವತಿಯಿಂದ ನಡೆದ ಎರಡು ದಿನಗಳ ಫೋಟೋಗ್ರಫಿ ಕಾರ್ಯಾಗಾರಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೋರ್ವ ವ್ಯಕ್ತಿಯು ಆಸಕ್ತಿಯಿಂದ ತೆಗೆದ ಚಿತ್ರವು ಆಳವಾಗಿ ಕಥೆ ಹೇಳುವಂತಿರಬೇಕು. ತೇಜಸ್ವಿ ಅವರು ಅಪಾರ ತಾಳ್ಮೆ ಹಾಗೂ ಶ್ರದ್ದೆಯಿಂದ ಹಕ್ಕಿಗಳ ಚಿತ್ರಗಳನ್ನು ತೆಗೆಯುತ್ತಿದ್ದರು. ಇಂತಹ ಕ್ರೀಯಾಶೀಲತೆಯಮನೋಭಾವ ಮೈಗೂಡಿಸಿಕೊಂಡು ಉತ್ತಮ ಛಾಯಾಗ್ರಾಹಕರಾಗಲು ಸಾಧ್ಯ ಎಂದರು.

ಮೂಡಬಿದಿರೆಯ ಖ್ಯಾತ ಛಾಯಾಗ್ರಾಹಕ ಡಾ| ಕೃಷ್ಣಮೋಹನ್‌ ಮಾತನಾಡಿ, ಆಸಕ್ತಿ ಹುಡುಕಾಟವು ನಮ್ಮಲ್ಲಿದ್ದರೆ ಎಂತಹ ಚಿತ್ರಗಳನ್ನಾದರೂ ನಾವು ತೆಗೆಯಬಹುದು. ನಮ್ಮ ಸುತ್ತಮುತ್ತಲಿನ ಪರಿಸರಗಳೇ ನಮಗೆ ಸ್ಫೂರ್ತಿದಾಯಕ ತಾಣಗಳಾಗಿವೆ ಎಂದರು.

ಚಿಕ್ಕಮಗಳೂರು ಸಹಮತ ಸಂಸ್ಥೆಯ ಸ್ಥಾಪಕ ಐವನ್‌ ಡಿಸಿಲ್ವ, ಪೂರ್ಣಚಂದ್ರ ಪ್ರತಿಷ್ಠಾನದನಿರ್ದೇಶಕ ಬಾಪು ದಿನೇಶ್‌, ಸಾಹಿತಿ ಪೂರ್ಣೇಶ್‌ ಮತ್ತಾವರ, ಅತುಲ್‌ ರಾವ್‌, ಕುಲದೀಪ್‌ ಮಾಕೋನಹಳ್ಳಿ, ಉದಯಪ್ರಸಾದ್‌, ಪತ್ರಕರ್ತ ಸತೀಶ್‌, ನವೀನ್‌, ಆಕರ್ಷ್‌ ಇದ್ದರು.

ಫೋಟೋಗ್ರಫಿ ಕಾರ್ಯಾಗಾರದ ಎರಡನೇ ದಿನ ಸಮಾರೋಪ ಸಮಾರಂಭದಲ್ಲಿ ಲೇಖಕ ಹಾಗೂ ತೇಜಸ್ವಿ ಪ್ರತಿಷ್ಠಾನದ ಸದಸ್ಯ ಪ್ರದೀಪ್‌ ಕೆಂಜಿಗೆ ಮಾತನಾಡಿ, ತೇಜಸ್ವಿ ಅವರ ಕರ್ವಾಲೊ ಕಾದಂಬರಿಯಲ್ಲಿ ಒಂದು ದೃಶ್ಯದಲ್ಲಿ ಕೊಳ್ಳವೊಂದರ ಹಿನ್ನಲೆಯಲ್ಲಿ ಹಠಾತನೇ ಕಾಣಿಸಿಕೊಳ್ಳುವ ಮಿಂಚುಳ್ಳಿಯೊಂದರ ವರ್ಣನೆಯನ್ನು ಪಂಚಭೂತಗಳನ್ನು ಸಮೀಕರಿಸಿ ಅದ್ಬುತವಾಗಿ ಕಟ್ಟಿಕೊಟ್ಟಿದ್ದಾರೆ. ಆದರೆ ಛಾಯಾಗ್ರಾಹಕರೂ ಆಗಿದ್ದ ತೇಜಸ್ವಿ ಅವರು ಆ ದೃಶ್ಯವನ್ನು ಕ್ಯಾಮರಾ ಕಣ್ಣಿನಲ್ಲಿ ಕಟ್ಟಿಕೊಡಲು ಪ್ರಯತ್ನಿಸಿರಬಹುದು. ಆದರೆ ವಿಜ್ಞಾನ, ತಂತ್ರಜ್ಞಾನದ ಮಿತಿಯನ್ನು ಅರಿತು ಸಾಹಿತ್ಯದಲ್ಲಿ ಆ ದೃಶ್ಯವನ್ನು ಕಟ್ಟಿಕೊಟ್ಟಿರಬಹುದು ಎಂಬುದು ನನ್ನ ಅನಿಸಿಕೆಯಾಗಿದೆ ಎಂದರು. ಚಿಕ್ಕಮಗಳೂರು ಸಹಮತ ಸಂಸ್ಥೆಯ ಸ್ಥಾಪಕ ಐವನ್‌ ಡಿಸಿಲ್ವ ಮಾತನಾಡಿ, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಫೋಟೋಗ್ರಫಿ ಸೊಸೈಟಿ ವತಿಯಿಂದ ನಡೆಯುವ ಮೂರನೇ ಕಾರ್ಯಕ್ರಮ ಇದಾಗಿದೆ. ಮುಂದಿನ ದಿನಗಳಲ್ಲಿ ಪ್ರೇಕ್ಷಣಿಯ ಸ್ಥಳಗಳಿಗೆ ಬೇಟಿ ನೀಡಿ ಅಲ್ಲಿಯೇ ವಿಷಯತಜ್ಞರನ್ನು ಕರೆಸಿ ಕಾರ್ಯಾಗಾರ ನಡೆಸಲಾಗುವುದು ಎಂದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

7-gp-protest

Kottigehara: ಗ್ರಾ.ಪಂ.ಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ

Kottigehara: ಮಾವನ ಮನೆಗೆ ಪಿತೃ ಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

Kottigehara: ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

13-chikkamagalur

Chikkamagaluru: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

9-Chikkamagaluru

Chikkamagaluru:ಅನಾರೋಗ್ಯ ಪೀಡಿತ ವೃದ್ಧೆಯನ್ನು 3 ಕಿ.ಮೀ. ಹೊತ್ತುಕೊಂಡು ಸಾಗಿದ ಗ್ರಾಮಸ್ಥರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.