![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 15, 2020, 6:14 AM IST
ಮೂಡಿಗೆರೆ: ಕರ್ನಾಟಕ ಸರ್ಕಾರ ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಕೂಡಲೇ ವಾಪಸ್ಸು ಪಡೆಯಬೇಕು ಎಂದು ಕೇಂದ್ರ ಮಾಜಿ ಸಚಿವೆ ಡಿಕೆ ತಾರಾದೇವಿ ಆಗ್ರಹಿಸಿದ್ದಾರೆ.
ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಮೊದಲು ರೈತರುಗಳ ಉತ್ಪನ್ನಗಳ ಬೆಲೆಗಳ ಮೇಲೆ ಆಗುವ ದುಷ್ಪರಿಣಾಮಗಳನ್ನು ಪಟ್ಟಿಮಾಡಿ ಸಾಧಕ ಬಾಧಕಗಳನ್ನು ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ರೈತ ಪ್ರತಿನಿಧಿ ಗಳು, ರೈತ ಸಂಘಟನೆಗಳು, ಕೃಷಿ ಉತ್ಪನ್ನ ವ್ಯಾಪಾರಸ್ಥರ ಸಂಘಟನೆ, ಸಹಕಾರ ಕ್ಷೇತ್ರದ ಧುರೀಣರು, ಎಪಿಎಂಸಿ ಅಧಿಕಾರಿಗಳು ಹಾಗೂ ಪ್ರತಿನಿ ಧಿಗಳು ಮತ್ತು ಎಲ್ಲಾ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರನ್ನು ಕರೆದು ಚರ್ಚಿಸಬೇಕಿತ್ತು.
ಕರ್ನಾಟಕ ಸರ್ಕಾರ ಆತುರಾತುರವಾಗಿ ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತರುವ ಕ್ರಮ ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿರುವುದು ಸುಳ್ಳಲ್ಲ. ಈ ತಿದ್ದುಪಡಿ ಕಾರ್ಪೋರೇಟ್ ಹಾಗೂ ಬಹುರಾಷ್ಟ್ರೀಯ ಕಂಪನಿಗಳು ಕೃಷಿ ಉತ್ಪನ್ನ ಮಾರಾಟ ಕ್ಷೇತ್ರಕ್ಕೆ ಕಾಲಿರಿಸಲು ಅನುವು ಮಾಡಿಕೊಡುವ ಒಂದೇ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಳ್ಳು ಮುಂದಾಗಿದೆ ಎಂಬ ಗಂಭೀರ ಆರೋಪ ಸರ್ಕಾರದ ಮೇಲಿದೆ ಎಂದಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.