![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 16, 2023, 8:33 AM IST
ಕೊಟ್ಟಿಗೆಹಾರ: ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತಿದ್ದ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು ಪರಿಣಾಮ ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಶುಕ್ರವಾರ ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ತುಂಬಿದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಆವರಿಸಿದ ದಟ್ಟ ಮಂಜಿನಿಂದ ದಾರಿ ಕಾಣದೆ 100 ಅಡಿ ಪ್ರಪಾತಕ್ಕೆ ಬಿದ್ದಿದೆ ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಯಾವುದೇ ಪ್ರಾಣಪಾಯವಿಲ್ಲದೆ ಪಾರಾಗಿದ್ದಾರೆ.
ಇಬ್ಬರ ಪ್ರಾಣ ಉಳಿಸಿದ ಮರ:
ಲಾರಿ ತಡೆಗೋಡೆಗೆ ಡಿಕ್ಕಿ ಹೊಡೆದು ನೂರು ಅಡಿ ಪ್ರಪಾತಕ್ಕೆ ಉರುಳಿದೆ ಈ ವೇಳೆ ಅಲ್ಲಿ ಇದ್ದ ದೈತ್ಯ ಮರಕ್ಕೆ ಲಾರಿ ಸಿಲುಕಿಕೊಂಡ ಪರಿಣಾಮ ಸಂಭವನೀಯ ಅವಘಡ ತಪ್ಪಿದೆ ಒಂದು ವೇಳೆ ಲಾರಿ ಮರಕ್ಕೆ ಸಿಕ್ಕಿಕೊಳ್ಳದಿದ್ದಲ್ಲಿ ಸಾವಿರ ಅಡಿ ಪ್ರಪಾತಕ್ಕೆ ಹೋಗಿ ಬೀಳುತ್ತಿತ್ತು ಎನ್ನಲಾಗಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Daily Horoscope: ದಿಟ್ಟ ನಿರ್ಧಾರ ಕೈಗೊಂಡು ಮುನ್ನಡೆದರೆ ಯಶಸ್ಸು ಖಂಡಿತ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.