![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Feb 8, 2020, 12:25 PM IST
ಚಿಕ್ಕಮಗಳೂರು: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.
ಶನಿವಾರ ನಗರಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಅಶಾಂತಿ ಸೃಷ್ಟಿಸಿ ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದರು.
ದೆಹಲಿ ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವಪೌರತ್ವ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಹೋರಾಟಕ್ಕೆ ಜನರನ್ನು ಹಣ ಕೊಟ್ಟು ಕರೆ ತಂದಿದ್ದಾರೆ ಎಂದರು.
ಜಿಲ್ಲೆಯಲ್ಲಿ ಕರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕೇರಳದಿಂದ ಜಿಲ್ಲೆಗೆ ಬರುವ ವಾಹನಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದರು.
ದೆಹಲಿ ವಿಧಾನಸಭೆಗೆ ಇಂದು ಮತದಾನ ನಡೆಯುತ್ತಿದೆ. ಫೆ.11ರಂದು ಮತ ಎಣಿಕೆ ನಡೆಯಲಿದೆ.
You seem to have an Ad Blocker on.
To continue reading, please turn it off or whitelist Udayavani.