![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 24, 2020, 5:04 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶೃಂಗೇರಿ: ಕೋವಿಡ್-19 ನಮಗೆ ಶಿಸ್ತಿನ ಪಾಠ ಕಲಿಸಿದೆ. ಇದರಿಂದ ನಮ್ಮ ಸೇವಾ ಚಟುವಟಿಕೆ ಕುಂಠಿತಗೊಂಡಿದ್ದರೂ ನಮಗಿರುವ ಸೇವಾ ಅವಕಾಶ ಬಳಸಿಕೊಂಡು ಸೇವೆ ಮಾಡಲಾಗಿದೆ ಎಂದು ಲಯನ್ಸ್ ರಾಜ್ಯಪಾಲ ರೊನಾಲ್ಡ್ ಗೋಮ್ಸ್ ಹೇಳಿದರು.
ಪಟ್ಟಣದ ಹೊರವಲಯದ ಶಾರದಾ ಕಂಫರ್ಟ್ಸ್ ನಲ್ಲಿ ಲಯನ್ಸ್ ಕ್ಲಬ್ ಏರ್ಪಡಿಸಿದ್ದ ಲಯನ್ಸ್ ರಾಜ್ಯಪಾಲರ ಅಧಿಕೃತ ಭೇಟಿ ಸಂದರ್ಭದಲ್ಲಿ ಮಾತನಾಡಿದರು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕ್ಲಬ್ನಿಂದ 90 ಲಕ್ಷ ರೂ.ವೆಚ್ಚದ ವೆಂಟಿಲೇಟರ್ ಸಹಿತ ವೈದ್ಯಕೀಯ ಉಪಕರಣ ನೀಡಲಾಗಿದೆ. ಜಿಲ್ಲೆಯಲ್ಲೂ ಕ್ಲಬ್ನಿಂದ ಅನೇಕ ಸೇವಾ ಕಾರ್ಯ ಮಾಡಲಾಗಿದೆ ಎಂದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಬೇಗಾನೆ ವಿವೇಕ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯಪಾಲರು ಇದಕ್ಕೂ ಮೊದಲು ಪಟ್ಟಣದ ವಿವಿಧೆಡೆ ಮಾರ್ಗಸೂಚಿ ಫಲಕ,ನವೀಕರಿಸಿದ ಬಸ್ ನಿಲ್ದಾಣ ಉದ್ಘಾಟಿಸಿದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ರೋಗಿಗೆ ಧನಸಹಾಯ ಮಾಡಲಾಯಿತು. ವೇದಿಕೆಯಲ್ಲಿ ಎಚ್.ಜಿ.ವೆಂಕಟೇಶ್, ಅನಿತಾ ಗೋಮ್ಸ್, ಸಂದೀಪ್ ಶೆಟ್ಟಿ, ವಸಂತಕುಮಾರ ಶೆಟ್ಟಿ, ಜಗದೀಶ ನಾಯ್ಕ, ಡಾ| ಸೀತಾರಾಮ, ಉಮೇಶ್ ಪುದುವಾಳ್, ಎಚ್.ಕೆ.ಸುಬ್ರಹ್ಮಣ್ಯ ಮತ್ತಿತರರು ಇದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.