![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 29, 2023, 8:21 PM IST
ಚಿಕ್ಕಮಗಳೂರು: ತುಂಗಾ ನದಿ ನಡು ಗಡ್ಡೆಯಲ್ಲಿ ಸಿಲುಕಿದ್ದ ಇಬ್ಬರನ್ನು ಅಗ್ನಿಶಾಮಕ ದಳದ ಸಿಬಂದಿಗಳು ರಕ್ಷಣೆ ಮಾಡಿ ಸುರಕ್ಷಿತವಾಗಿ ಕರೆತಂದಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ತುಂಗಾ ನದಿಯಲ್ಲಿ ಸ್ನಾನ ಮಾಡಿದ ಇಬ್ಬರು ಬಟ್ಟೆ ಒಣಗಿಸಲು ನದಿ ಮಧ್ಯದ ಕಲ್ಲು ಬಂಡೆ ಮೇಲೆ ಉಳಿದಿದ್ದರು.
ತಾಲೂಕಿನ ಕೆರೆಕಟ್ಟೆ ಸುತ್ತಮುತ್ತ ಭಾಗದಲ್ಲಿ ಬಾರಿ ಮಳೆಯಾಗಿದ್ದು ತುಂಗಾ ನದಿ ನೀರಿನ ಮಟ್ಟ ಸ್ವಲ್ಪಮಟ್ಟಿಗೆ ಏರಿಕೆಯಾಗಿದೆ. ಇದರಿಂದ ಇಬ್ಬರು ನದಿಯ ನಡು ಗಡ್ಡೆಯಲ್ಲಿ ಸಿಲುಕಿದ್ದರು.
ನದಿಯ ನಡು ಗಡ್ಡೆಯಲ್ಲಿ ಇಬ್ಬರು ವ್ಯಕ್ತಿಗಳು ಸಿಲುಕಿರುವ ವಿಚಾರವನ್ನು ತಿಳಿಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ನದಿಯ ನಡು ಗಡ್ಡೆಯಲ್ಲಿ ಸಿಲುಕಿದ್ದ ಇಬ್ಬರು ವ್ಯಕ್ತಿಯನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ.
ಶೃಂಗೇರಿ ಯಲ್ಲಿ ತೋಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ಮೂಲದವರು ಇಬ್ಬರು ವ್ಯಕ್ತಿಗಳು ಎಂದು ಗುರುತಿಸಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.