ಗ್ರಾಮಸ್ಥರಿಟ್ಟ ಬೋನಿಗೆ ಬಿತ್ತು ಚಿರತೆ
Team Udayavani, Feb 12, 2018, 6:15 AM IST
ತರೀಕೆರೆ: ಗ್ರಾಮಸ್ಥರೇ ಇರಿಸಿದ್ದ ಬೋನಿನಲ್ಲಿ ಚಿರತೆಯೊಂದು ಶನಿವಾರ ತಡರಾತ್ರಿ ಬಂಧಿಯಾದ ಘಟನೆ ಅಜ್ಜಂಪುರ ಬಳಿಯ
ಗರಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಒಂದು ಚಿರತೆ ಬಿದ್ದಿತ್ತು.
ಈಗ ಮತ್ತೂಂದು ಚಿರತೆ ಸೆರೆ ಸಿಕ್ಕಿದೆ.
ಗ್ರಾಮದ ಸುತ್ತಮುತ್ತ ಸುಮಾರು ನಾಲ್ಕೈದು ಚಿರತೆಗಳು ಓಡಾಡುತ್ತಿದ್ದವು.ಕಾಡಿನಿಂದ ಆಗಾಗ ಸುತ್ತಮುತ್ತಲಿನ
ಗ್ರಾಮಗಳ ಹತ್ತಿರ ಇವು ಬರುತ್ತಿದ್ದವು. ಇದರಿಂದ ಗ್ರಾಮಸ್ಥರು ಕಂಗಾಲಾಗಿದ್ದರು.
ಗ್ರಾಮಕ್ಕೆ ಹತ್ತಿರವಿರುವ ಕಾಡಿನಲ್ಲಿ ಹಾಗೂ ಊರಿನ ಸಮೀಪವೇ ಚಿರತೆ ಸಂಚರಿ ಸುತ್ತಿರುವುದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದ ಕೆಲವರು ಇದನ್ನು ಸೆರೆ ಹಿಡಿ ಯುವಂತೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಆದರೆ ಅರಣ್ಯ ಇಲಾಖೆ ಯವರು ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ. ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಪದೇಪದೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿರಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತ ಗರಗದ ಹಳ್ಳಿ ಗ್ರಾಮಸ್ಥರು ಅಜ್ಜಂಪುರಲ್ಲಿರುವ ಅರಣ್ಯ ಇಲಾಖೆ ಕಚೇರಿಗೆ ತೆರಳಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಬೋನು ಪಡೆದು ಊರಿಗೆ ತಂದಿದ್ದರು. ನಂತರ ಅದನ್ನು ಚಿರತೆಗಳು ಓಡಾಡುವ ಅರಣ್ಯ ಪ್ರದೇಶದಲ್ಲಿ ಇರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ
Bidar; ಪತ್ನಿ ಜತೆ ಅನೈತಿಕ ಸಂಬಂಧ:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.