![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 14, 2021, 9:12 AM IST
ಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ವ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
ರಾಜೇಶ್ವರಿ ಅವರು ಪತಿ ಪೂರ್ಣಚಂದ್ರ ತೇಜಸ್ವಿ ನಿಧನ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದಲ್ಲಿ ಒಬ್ಬರೇ ವಾಸವಾಗಿದ್ದರು. ಕಳೆದ ಕೆಲ ದಿನದ ಹಿಂದೆ ಬೆಂಗಳೂರಿನ ಮಗಳ ಮನೆಗೆ ಹೋಗಿದ್ದರು.
ಇದನ್ನೂ ಓದಿ:ಶತ್ರುರಾಷ್ಟ್ರದ 51 ಟ್ಯಾಂಕರ್ಗಳನ್ನು ನಾಶಪಡಿಸಿದ ಡೆಲ್ಟಾ ಕಂಪೆನಿ
ರಾಜೇಶ್ವರಿ ತೇಜಸ್ವಿ ಅವರು ‘ನನ್ನ ತೇಜಸ್ವಿ’ ಮತ್ತು ‘ನಮ್ಮ ಮನೆಗೂ ಬಂದರು ಗಾಂಧೀಜಿ’ ಪುಸ್ತಕಗಳನ್ನು ಬರೆದಿದ್ದಾರೆ.
ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನ ಪುತ್ರಿಯ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಜೆ 5-30 ರ ವರೆಗೆ ಅಂತಿಮ ದರ್ಶನ ಇರಲಿದೆ. ಆಸ್ಪತ್ರೆಗೆ ದೇಹದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.