![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Feb 18, 2022, 10:42 AM IST
ಚಿಕ್ಕಮಗಳೂರು: ಕಾಡುಹಂದಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ನಡೆದಿದೆ.
ಹೆಡದಾಳು ಗ್ರಾಮದ ಮಧುಕುಮಾರ್, ಈರೇಶ ಜಯಪ್ಪ, ಕೃಷ್ಣ, ವಿಜಯ ಕುಮಾರ್ ಬಂಧಿತ ಆರೋಪಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಕ್ಷ್ಮೀಪುರ ಸಮೀಪದ ಲಕ್ಯಾ ಕ್ರಾಸ್ ಬಳಿ ಆಲ್ಟೋ ಕಾರನ್ನು ತಡೆದು ಶೋಧಿಸಿದಾಗ ಕಾಡು ಹಂದಿ ಮಾಂಸ ಪತ್ತೆಯಾಗಿದ್ದು, ಬಂಧಿತರಿಂದ 23 ಕೆಜಿ ಮಾಂಸ, ಬಂದೂಕು, ಸಜೀವ ಗುಂಡುಗಳು, ಕತ್ತಿ ಇತರೆ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ಬಿಜೆಪಿಯವರಿಗೆ ರಾಷ್ಟ್ರ ಧ್ವಜ ಅಂದ್ರೆ ಏನು ಎಂದು ಗೊತ್ತಿಲ್ಲ: ಡಿಕೆಶಿ
ಅರಣ್ಯ ಅಧಿಕಾರಿ ವೆಂಕಟೇಶ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
You seem to have an Ad Blocker on.
To continue reading, please turn it off or whitelist Udayavani.