ಶಿಕ್ಷಕರಿಲ್ಲದೆ ಸಂಸ್ಕೃತ ಕಲಿಕೆಗೆ ಕುತ್ತು


Team Udayavani, Jul 17, 2021, 10:47 AM IST

ಶಿಕ್ಷಕರಿಲ್ಲದೆ ಸಂಸ್ಕೃತ ಕಲಿಕೆಗೆ ಕುತ್ತು

ಶೃಂಗೇರಿ: ಶ್ರೀ ಶಾರದೆಯ ನೆಲೆವೀಡು ಶೃಂಗೇರಿಯಲ್ಲಿ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಯಲು ಶಿಕ್ಷಕರಿಲ್ಲದೆ ಬೇರೆ ಐಚ್ಛಿಕ ವಿಷಯ ತೆಗೆದುಕೊಳ್ಳಬೇಕಾದ ಅನಿವಾರ್ಯ ಸ್ಥಿತಿ ತಲೆದೋರಿದೆ.

ತಾಲೂಕಿನ ತೊರೆಹಡ್ಲು ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಸ್ಕೃತ ಶಿಕ್ಷಕರಿಲ್ಲದೆ ಸಂಸ್ಕೃತ ಭಾಷೆ ಕಲಿಯಲುವಿದ್ಯಾರ್ಥಿಗಳಿಗೆ ಕಷ್ಟವಾಗಿದೆ. ಇಲ್ಲಿ ಹಂಗಾಮಿಸಂಸ್ಕೃತ ಶಿಕ್ಷಕಿಯಾಗಿ ಪುಷ್ಪಾ ಹೆಗ್ಡೆ ಎಂಬುವವರು ತುಮಕೂರಿನಿಂದ ಕಳೆದ ಎರಡು ವರ್ಷದಿಂದ ಸೇವೆಸಲ್ಲಿಸುತ್ತಿದ್ದರು. ಸರ್ಕಾರ ಬೇರೆ ಶಾಲೆಯಿಂದ ಇಲ್ಲಿಗೆನಿಯೋಜನೆ ಮಾಡಿರುವುದರಿಂದ ಅಲ್ಲಿನ ಶಾಲೆಗೆ ಈಗ ನಿಯುಕ್ತಿಗೊಂಡಿದ್ದಾರೆ. ಇದರಿಂದಾಗಿ ಶಾಲೆಯಲ್ಲಿ ಸಂಸ್ಕೃತ ಶಿಕ್ಷಕರಿಲ್ಲದಂತಾಗಿದೆ.

ಈ ಸಾಲಿನಲ್ಲಿ 8 ನೇ ತರಗತಿಗೆ ಸಂಸ್ಕೃತ ವಿಷಯವನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಲ್ಲಿನ 9 ನೇ ತರಗತಿಯಲ್ಲಿ 9 ವಿದ್ಯಾರ್ಥಿಗಳು ಸಂಸ್ಕೃತ ಕಲಿಯುತ್ತಿದ್ದು ಇದರಲ್ಲಿ ಈಗಾಗಲೇ 4 ವಿದ್ಯಾರ್ಥಿಗಳು ತಮ್ಮ ಸ್ವ ಇಚ್ಛೆಯಿಂದ ಹಿಂದೆ ಭಾಷೆಯನ್ನು ಆಯ್ಕೆಮಾಡಿಕೊಂಡಿದ್ದಾರೆ. ಈಗ ಉಳಿದಿರುವ ವಿದ್ಯಾರ್ಥಿಗಳು 5 ಮಂದಿ ಮಾತ್ರ. 10 ನೇ ತರಗತಿಯಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಸ್ಕೃತ ಕಲಿಯುತ್ತಿದ್ದು 8 ನೇ ತರಗತಿಯಿಂದಲೇ ಈ ವಿದ್ಯಾರ್ಥಿಗಳು ಸಂಸ್ಕೃತ ಐಚ್ಛಿಕ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದರು. ಸರ್ಕಾರ ಸಂಸ್ಕೃತ ಶಿಕ್ಷಕರನ್ನು ನೇಮಿಸದೇ ವಿದ್ಯಾರ್ಥಿಗಳು ಸಂಸ್ಕೃತ ಭಾಷೆಯನ್ನು ಕಲಿಯಲು ವಂಚಿತರಾಗುತ್ತಿದ್ದಾರೆ. ಈ ಶಾಲೆಯಲ್ಲಿ 9 ಶಿಕ್ಷಕರಿದ್ದು 5 ಶಿಕ್ಷಕರ ಕೊರತೆ ಇದೆ ಕನ್ನಡ ಭಾಷೆಗೆ ಒಬ್ಬರು ಕಲಾ ವಿಭಾಗಕ್ಕೆ ಇಬ್ಬರು ಶಿಕ್ಷಕರ ಕೊರತೆ ಇದೆ ಮತ್ತು ದೈಹಿಕ ಶಿಕ್ಷಕರ ಕೊರತೆಯೂ ಇಲ್ಲಿದೆ.

ಸಂಸ್ಕೃತ ಭಾಷೆ ಕಲಿಸಲು ಮೆಣಸೆಯಲ್ಲಿರುವ ರಾಜೀವ್‌ ಗಾಂಧಿ ಸಂಸ್ಕೃತ ಕಾಲೇಜಿನಿಂದ ಪ್ರಾಧ್ಯಾಪಕರು ಇಲ್ಲಿ ಹಂಗಾಮಿಯಾಗಿ ಬಂದು ಬೋಧನೆ ಮಾಡುತ್ತಿದ್ದರು. ಅವರಿಗೆ ಸರ್ಕಾರದಿಂದ ಸರಿಯಾದ ವೇತನ ಸಿಗದೆ ವಂಚಿತರಾಗಿದ್ದಾರೆ. ಶಾಲೆಯ ಆಡಳಿತ ಮಂಡಳಿಯೇ ಇವರಿಗೆ ವೇತನ ನೀಡಿ ಕರೆಸಿಕೊಳ್ಳುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಶಾಲೆಗೆ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿಯಾಗುತ್ತಿದ್ದು ಉತ್ತಮ ಬೋಧನೆ, ಶಿಸ್ತುಬದ್ಧ ಶಿಕ್ಷಕರಿಂದ ಉತ್ತಮ ಫಲಿತಾಂಶ ಬರುತ್ತಿದೆ. ಆದರೆ ಶಾಲೆಗೆ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಸರ್ಕಾರ ಕೂಡಲೇ ಶಿಕ್ಷಕರನ್ನು ನೇಮಿಸಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕಿದೆ.

ಶಾಲೆಗೆ ಸಂಸ್ಕೃತ ಶಿಕ್ಷಕರು ಬೆಂಗಳೂರಿನಿಂದ ಇಲ್ಲಿಗೆ ಹಂಗಾಮಿಯಾಗಿ ನಿಯೋಜನೆಗೊಂಡಿದ್ದರು. ಅವರ ಅವಧಿ ಮೇ 31ಕ್ಕೆ ಕೊನೆಗೊಂಡಿತು. ಅದರಿಂದಾಗಿ ಈಗ ಶಾಲೆಯಲ್ಲಿ ಸಂಸ್ಕೃತ ಶಿಕ್ಷಕರಿಲ್ಲ. ವಿದ್ಯಾರ್ಥಿಗಳು ಸಂಸ್ಕೃತ ಕಲಿಯಲು ಸೇರ್ಪಡೆಯಾದಲ್ಲಿ ಸರ್ಕಾರಿ ಜೂನಿಯರ್‌ ಕಾಲೇಜಿನಲ್ಲಿ ಸಂಸ್ಕೃತ ಶಿಕ್ಷಕರಿದ್ದಾರೆ. ಅವರನ್ನು ವಾರದಲ್ಲಿ 3 ದಿನ ಅಲ್ಲಿಗೆ ನಿಯೋಜನೆ ಮಾಡಲಾಗುತ್ತದೆ. ಅಲ್ಲದೇ ಈ ಸಾಲಿನಲ್ಲಿ ವರ್ಗಾವಣೆಗೆ ಅವಕಾಶವಿರುವುದರಿಂದ ಇಲ್ಲಿಗೆ ಶಿಕ್ಷಕರು ಬರುವ ಸಾಧ್ಯತೆ ಇದೆ. ಎನ್‌. ಜಿ. ರಾಘವೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶೃಂಗೇರಿ

ಶಾಲೆಗೆ ಸಂಸ್ಕೃತ ಕಲಿಯಲು ಬರುವ ವಿದ್ಯಾರ್ಥಿಗಳಿಗೆ ಬೇರೆ ಐಚ್ಛಿಕ ಭಾಷೆ ತೆಗೆದುಕೊಳ್ಳುವಂತೆ ಹೇಳಲಾಗುತ್ತಿಲ್ಲ. ಆದರೆಶಾಲೆಯಲ್ಲಿ ಸಂಸ್ಕೃತ ಕಲಿಯಲು ಶಿಕ್ಷಕರ ಕೊರತೆ ಇದೆ. ಇರುವ ಒಬ್ಬ ಶಿಕ್ಷಕಿ ಹಂಗಾಮಿಯಾಗಿ ಇಲ್ಲಿಗೆ ನಿಯೋಜನೆಗೊಂಡವರಾಗಿದ್ದು ಇವರು ಯಾವಾಗ ಬರುತ್ತಾರೆ ಯಾವಾಗ ಇಲ್ಲಿಂದ ಹೊರಡುತ್ತಾರೆ ಎಂಬುದು ತಿಳಿಯುವುದಿಲ್ಲ. ಸರ್ಕಾರ ಕಾಯಂ ಆಗಿ ಇಲ್ಲಿಗೆ ಶಿಕ್ಷಕರನ್ನು ನಿಯೋಜಿಸಿದರೆ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವುದಿಲ್ಲ.ದತ್ತಾತ್ರೆಯ ಯಾಜಿ, ಮುಖ್ಯ ಶಿಕ್ಷಕ, ಸರ್ಕಾರಿ ಪ್ರೌಢ ಶಾಲೆ, ತೊರೆಹಡ್ಲು

ವಿದ್ಯಾರ್ಥಿಗಳು ಸಂಸ್ಕೃತ ಕಲಿಯಬಾರದೆಂದು ನಮ್ಮಒತ್ತಾಯವಲ್ಲ. ನಾವು ಸಂಸ್ಕೃತ ವಿರೋ ಧಿಗಳಲ್ಲ. ಸರ್ಕಾರ ಸಂಸ್ಕೃತ ಶಿಕ್ಷಕರನ್ನು ಇಲ್ಲಿಗೆ ನೀಡಿದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿಲ್ಲ. ಗುರುಮೂರ್ತಿ, ಸಹ ಶಿಕ್ಷಕ, ಸರ್ಕಾರಿ ಪ್ರೌಢಶಾಲೆ, ತೊರೆಹಡ್ಲು

ನಮ್ಮ ಮಕ್ಕಳು ಸಂಸ್ಕೃತ ಕಲಿತು ಸುಸಂಸ್ಕೃತರಾಗಬೇಕು. ಈ ಶಾಲೆಗೆ ಸಂಸ್ಕೃತ ಶಿಕ್ಷಕರನ್ನು ಸರ್ಕಾರ ನೇಮಿಸಿ ಮಕ್ಕಳಿಗೆ ಸಂಸ್ಕೃತ ಕಲಿಯಲು ಅವಕಾಶ ಮಾಡಿಕೊಡಬೇಕು.ಶಾರದೆಯ ಆವಾಸಸ್ಥಾನದಲ್ಲಿ ಸಂಸ್ಕೃತಕ್ಕೆ ಅವಕಾಶವಿಲ್ಲದಿರುವುದು ತುಂಬಾ ವ್ಯಥೆಯಾಗಿದೆ.ಹೆಸರು ಹೇಳಲು ಇಚ್ಛಿಸದ ಸಂಸ್ಕೃತ ಅಧ್ಯಾಪಕರು, ಶೃಂಗೇರಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.