ನೊಂದ ಮಹಿಳೆಯರಿಗೆ ಸಾಂತ್ವನ ಹೇಳಿ: ಶೋಭಾ ಶ್ರೀನಿವಾಸ್


Team Udayavani, Mar 15, 2022, 4:26 PM IST

woman

ಕಡೂರು: ಕೆಲವು ಕುಟುಂಬಗಳಲ್ಲಿ ಮಹಿಳೆಯರು ಮಾನಸಿಕವಾಗಿ ನೆಮ್ಮದಿ ಕಾಣದೆ ಇರುವವರು ಇದ್ದಾರೆ. ಅಂತಹವರನ್ನು ಗುರುತಿಸಿ ಸಾಂತ್ವನ ಹೇಳಬೇಕಾಗಿದೆ ಎಂದು ಜಿಲ್ಲಾ ಮಾದಿಗ ದಂಡೋರ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಶ್ರೀನಿವಾಸ್‌ ಹೇಳಿದರು.

ಪಟ್ಟಣದ ಕಸಾಪ ಸಭಾಂಗಣದಲ್ಲಿ ಕರ್ನಾಟಕ ಮಾದಿಗ ದಂಡೂರ ಸಮಿತಿಯ ಜಿಲ್ಲಾ ಮತ್ತು ತಾಲೂಕು ಘಟಕವು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಸಮಾಜವು ಸೇರಿದಂತೆ ಇತರೆ ಸಮಾಜಗಳಲ್ಲಿಯೂ ಸಹ ಮಹಿಳೆ ಇಂದಿಗೂ ಶೋಷಣೆಗೊಳಗಾಗುತ್ತಿದ್ದು ಹೇಳಿಕೊಳ್ಳಲಾಗದೆ ಮಾನಸಿಕವಾಗಿ ಕುಗ್ಗುತ್ತಿದ್ದಾಳೆ. ಅಂತಹ ಮಹಿಳೆಯರನ್ನು ಮೊದಲು ಗುರುತಿಸಿ ಅವರಿಗೆ ಸಾಂತ್ವನ ಹೇಳುವುದರ ಮೂಲಕ ನೆಮ್ಮದಿಯ ಬದುಕನ್ನು ಕಟ್ಟಿಕೊಡುವಂತಹ ಕೆಲಸವಾಗಬೇಕಾಗಿದೆ ಎಂದರು.

ತಂಗಲಿ ಗ್ರಾಪಂ ಅಧ್ಯಕ್ಷೆ ಆರತಿ ಗೋವಿಂದಪ್ಪ ಮಾತನಾಡಿ, ಮಾದಿಗ ದಂಡೋರ ಸಮಿತಿಯಿಂದ ಪ್ರಥಮವಾಗಿ ಮಹಿಳಾ ದಿನಾಚರಣೆಯನ್ನು ಆಯೋಜಿಸಿ ಸಮಾಜದ ಮಹಿಳೆಯರನ್ನು ಗುರುತಿಸಿ ಒಂದೆಡೆ ಸೇರುವ ಕಾರ್ಯ ಮಾಡಿರುವುದು ಶ್ಲಾಘನೀಯ. ಮುಂದೆ ಇದೇ ರೀತಿ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಸಮಾಜದಲ್ಲಿರುವ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕಾಗಿದೆ ಎಂದರು.

ನೂತನ ತಾಲೂಕು ಅಧ್ಯಕ್ಷೆ ಮರವಂಜಿ ಮಂಜುಳಾ ನರಸಿಂಹಪ್ಪ ಮಾತನಾಡಿದರು. ನಿವೃತ್ತ ಶಿಕ್ಷಕ ಆರ್‌.ಜಿ. ಕೃಷ್ಣಸ್ವಾಮಿ ಮಹಿಳೆಯರ ಕುರಿತು ಮಾತನಾಡಿದರು. ಕಡೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ ಶುಭ ಹಾರೈಸಿದರು. ಬೀರೂರಿನ ಮಂಜುಳಾ ವಿಶ್ವನಾಥ್‌, ಸೀತಾಲಕ್ಷ್ಮಿ, ನೇತ್ರಾವತಿ, ಸೌಂದರ್ಯ ಜಗದೀಶ್‌, ಸವಿತಾ ರಾಜಕುಮಾರ್‌, ಸುಜಾತ ಲಕ್ಷ್ಮಮ್ಮ, ಅಂಬಿಕಾ, ಲತಾ, ಪಾರ್ವತಮ್ಮ, ಶಾರದ, ವಿದ್ಯಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

3-chikkamagaluru

Chikkamagaluru: ಟಾಟಾ ಏಸ್ ಆಟೋ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು

4-chikkamagaluru

Chikkamagaluru: ಸ್ಕಿಡ್ ಆಗಿ 20 ಅಡಿ ಎತ್ತರಿಂದ ಕೆಳಗೆ ಬಿದ್ದ ಗೂಡ್ಸ್ ವಾಹನ

Kottigehara: ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಪಂಚಾಯತ್ ಬಾಗಿಲಿಗೆ ಕಸ ಸುರಿದ ಭೂಪ

Kottigehara: ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಪಂಚಾಯತ್ ಬಾಗಿಲಿಗೆ ಕಸ ಸುರಿದ ಭೂಪ

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.