ಚಿಕ್ಕಮಗಳೂರು: ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಠಾಣಾಧಿಕಾರಿ?


Team Udayavani, May 23, 2021, 10:34 AM IST

ಚಿಕ್ಕಮಗಳೂರು: ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಠಾಣಾಧಿಕಾರಿ?

ಚಿಕ್ಕಮಗಳೂರು: ಮೂಡಿಗೆರೆ ಕಿರುಗುಂದ ಗ್ರಾಮದ ದಲಿತ ಯುವಕನ ಮೇಲೆ ಗೋಣಿ ಬೀಡು ಠಾಣಾಧಿಕಾರಿ ದೌರ್ಜನ್ಯ ಎಸಗಿರುವ ಪ್ರಕರಣ ನಡೆದಿದ್ದು, ಯುವಕನಿಗೆ ಮಾತ್ರ ಕುಡಿಸಿದ ಅಮಾನವೀಯ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ಅಮಾನವೀಯ ಕೃತ್ಯ ಎಸಗಿದ್ದಾರೆಂದು ನೊಂದ ಯುವಕ ಹೇಳಿಕೆ ನೀಡಿದ್ದಾರೆ.

ಕಿರುಗುಂದ ಗ್ರಾಮದ ವಿವಾಹಿತ ಮಹಿಳೆ ಆಕೆಯ ಪತಿಯ ನಡುವಿನ ಜಗಳ ವಿಚಾರಕ್ಕೆ ಗೋಣಿಬೀಡು ಪೋಲಿಸ್ ಠಾಣೆಯ ಪಿಎಸ್‌ಐ ಅರ್ಜುನ್ ಯಾವುದೇ ದೂರು ಇಲ್ಲದೇ ಗ್ರಾಮದ ದಲಿತ ಯುವಕ ಪುನೀತ್ (22) ಯುವಕನನ್ನು ಶಂಕೆಯ ಮೇಲೆ ಮೇ.10 ರಂದು ಠಾಣೆಗೆ ಕರೆತಂದಿದ್ದು ಮಹಿಳೆಯೊಂದಿಗೆ ಅನೈತಿಕ ಸಂಬಂಧ ಮತ್ತು ಆಕೆಯನ್ನು ಬಚ್ಚಿಟ್ಟಿರುವುದಾಗಿ ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಯುವಕ ಆರೋಪಿಸಿದ್ದಾನೆ.

ಇದನ್ನೂ ಓದಿ:ಮೂರು ಮದುವೆ, ಒಂದು ಅಂತ್ಯಸಂಸ್ಕಾರ: ಈ ಗ್ರಾಮದಲ್ಲಿ ಒಂದೇ ದಿನ 95 ಜನರಿಗೆ ಕೋವಿಡ್ ಪಾಸಿಟಿವ್

ಇದಕ್ಕೆ ಒಪ್ಪಿಕೊಳ್ಳದಿದ್ದಾಗ ಪಿಎಸ್‌ಐ ಅರ್ಜುನ್ ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಕುಡಿಯಲು ನೀರು ಕೇಳಿದ್ದಕ್ಕೆ ಮೂತ್ರವನ್ನು ಕುಡಿಸಿದ್ದಾರೆ ಎಂದು ಯುವಕ ಆರೋಪಿಸಿದ್ದು, ನೊಂದ ಯುವಕ ಎಸ್.ಪಿ, ಐಜಿ, ಡಿಐಜಿಗೆ ಪತ್ರ ಬರೆದು ತನಗೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದ್ದಾನೆ. ಯುವಕನ ದೂರಿನ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿವೈಎಸ್ ಪಿ ಒಬ್ಬರನ್ನು ನೇಮಿಸಿದ್ದರು.

ಬಳಿಕ ಗೋಣಿಬೀಡು ಠಾಣಾಧಿಕಾರಿ ಅರ್ಜುನ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಕಚೇರಿಗೆ ವರ್ಗಾವಣೆ ಮಾಡಿ ಗೋಣಿಬೀಡು ಠಾಣೆಗೆ ಮಹಿಳಾ ಪಿಎಸ್‌ಐ ಒಬ್ಬರನ್ನು ನೇಮಿಸಿದ್ದರು. ಈ ಕ್ರಮವನ್ನು ಮೂಡಿಗೆರೆ ದಲಿತಪರ ಸಂಘಟನೆಗಳು ಮತ್ತು ರಾಜಕೀಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರು. ಪಿಎಸ್‌ಐ ಅರ್ಜುನ್ ಅವರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿದ್ದರು. ಪಿಎಸ್‌ಐ ದಲಿತ ಅರ್ಜುನ್ ದೌರ್ಜನ್ಯ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಅರ್ಜುನ್ ಮೇಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಲುಣಿಸುವ ತಾಯಂದಿರಿಗೆ ವ್ಯಾಕ್ಸಿನೇಶನ್‍ನಲ್ಲಿ ಆದ್ಯತೆ ನೀಡಿ;ತಜ್ಞರ ಸಮಿತಿ ಶಿಫಾರಸ್ಸು

‘ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಗೋಣಿಬೀಡು ಠಾಣಾಧಿಕಾರಿ ದೌರ್ಜನ್ಯ ಎಸಗಿರುವ ಬಗ್ಗೆ ದೂರು ಬಂದಿದೆ. ಈ ಸಂಬಂಧ ತನಿಖೆಗೆ ಡಿವೈಎಸ್‌ಪಿ ಒಬ್ಬರನ್ನು ನೇಮಕ ಮಾಡಲಾಗಿದೆ. ತನಿಖಾ ವರದಿ ಆಧರಿಸಿ ಕ್ರಮಕೈಗೊಳ್ಳಲಾಗುವುದು.’

-ಎಂ.ಎಚ್.ಅಕ್ಷಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1-adsdasd

America; ಮಕ್ಕಳ ಆಸ್ಪತ್ರೆಗಾಗಿ ನಿಧಿ ಸಂಗ್ರಹಕ್ಕೆ ನಾಟ್ಯ ಸೇವಾ ಕಾರ್ಯಕ್ರಮ

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.