ಮಳೆ ಕೊರತೆ: ಮಂಕಾಯ್ತು ಕೃಷಿ ಚಟುವಟಿಕೆ

ಕಳೆದ ವರ್ಷ 5,897 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ•ಪ್ರಸಕ್ತ ವರ್ಷ 1,234 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆ

Team Udayavani, May 17, 2019, 12:11 PM IST

17-MAY-13

ಚಿಕ್ಕಮಗಳೂರು: ಮುಂಗಾರು ಪೂರ್ವದಲ್ಲಿ ಬೆಳೆದಿರುವ ಕೂಳೆ ಕಬ್ಬು.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಶೇ.46ರಷ್ಟು ಕಡಿತಗೊಂಡಿರುವುದರಿಂದ ಪ್ರಸಕ್ತ ವರ್ಷದಲ್ಲಿ ಕೈಗೊಳ್ಳಬೇಕಾದ ಕೃಷಿ ಚಟುವಟಿಕೆ ಹಾಗೂ ಬಿತ್ತನೆ ಕಾರ್ಯ ಮಂಕಾಗಿದೆ.

ಕೃಷಿ ಇಲಾಖೆ ಮೂಲಗಳ ಪ್ರಕಾರ ಕಳೆದ ವರ್ಷ ಮೇ ತಿಂಗಳ 3ನೇ ವಾರಕ್ಕೆ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದರಿಂದ 5,897 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಮೇ.14ರವರೆಗೆ ಕಳೆದ ವರ್ಷ 990 ಹೆಕ್ಟೇರ್‌ನಲ್ಲಿ ಎಳ್ಳು ಬಿತ್ತನೆ ಆಗಿದ್ದರೆ, 1900 ಹೆಕ್ಟೇರ್‌ನಲ್ಲಿ ಹೆಸರು, 250 ಹೆಕ್ಟೇರ್‌ನಲ್ಲಿ ಉದ್ದು, ಅಲಸಂದೆ ಬಿತ್ತನೆಯಾಗಿ ಕೃಷಿ ಭೂಮಿ ಸಿದ್ಧಗೊಳಿಸುವ ಕಾರ್ಯ ಆರಂಭಗೊಂಡಿತ್ತು. ಕಬ್ಬು ಬೆಳೆಯುವವರು ಕೂಳೆ ಕಬ್ಬು ಬೆಳೆಯಲು ಮುಂದಾಗಿದ್ದರು.

ಆದರೆ ಈ ವರ್ಷ ಮೇ.16ರ ವರೆಗೂ ಬಿತ್ತನೆಯಾಗಿರುವುದು ಒಟ್ಟು 1,248 ಹೆಕ್ಟೇರ್‌ನಲ್ಲಿ ಮಾತ್ರ. ಹೋದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಮಳೆ ಕೊರತೆಯಿಂದ ಅತಿ ಕಡಿಮೆ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಕೃಷಿ ಇಲಾಖೆ ಮೂಲಗಳ ಪ್ರಕಾರ 180 ಹೆಕ್ಟೇರ್‌ನಲ್ಲಿ ಎಳ್ಳು, 350 ಹೆಕ್ಟೇರ್‌ನಲ್ಲಿ ಹೆಸರು ಮತ್ತು 538 ಹೆಕ್ಟೇರ್‌ನಲ್ಲಿ ಕೂಳೆ ಕಬ್ಬು ಬಿತ್ತನೆ ಆಗಿದೆ.

ಬಿತ್ತನೆ ಕಾರ್ಯ ಚುರುಕುಗೊಳಿಸಲು ಮುಂಗಾರು ಮಳೆ ಆರಂಭವಾಗುವವರೆಗೂ ಕಾಯಬೇಕಾಗಬಹುದು ಎಂದು ಹೇಳಲಾಗುತ್ತಿದೆ. ಮುಂಗಾರು ಮಳೆ ಬರುವವರೆಗೂ ಮುಂಗಾರು ಪೂರ್ವ ಮಳೆ ಬರದಿದ್ದರೆ ಎಳ್ಳು ಬಿತ್ತನೆ ವ್ಯಾಪ್ತಿ ಇಳಿಮುಖವಾಗುವ ಸಂಭವವಿದೆ. ಜಿಲ್ಲೆಯಲ್ಲಿ ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಮುಂಗಾರು ಪೂರ್ವ ಮಳೆ ಬರುವುದು ವಾಡಿಕೆ. ಮಳೆ ಆರಂಭವಾದಾಕ್ಷಣ, ರೈತರು ಬಿತ್ತನೆಗೆ ಬೀಜ ಸಿದ್ಧಪಡಿಸಿಕೊಂಡು ಕೃಷಿ ಚಟುವಟಿಕೆ ಆರಂಭಿಸುತ್ತಾರೆ. ಎಳ್ಳು ಸೇರಿದಂತೆ ಕೆಲವು ಬೆಳೆಗಳ ಬಿತ್ತನೆಯೂ ಆಗುತ್ತದೆ. ಮುಂಗಾರು ಆರಂಭ ವಿಳಂಬವಾದರೂ ಮೋಡಗಟ್ಟಿದ ವಾತಾವರಣವಿರುವುದರಿಂದ ಬಿತ್ತಿದ ಬೆಳೆಗಳು ಮಂಕಾಗಲು ಆಸ್ಪದವಿರುವುದಿಲ್ಲ ಎಂದು ಕೃಷಿ ತಜ್ಞರು ಹೇಳುತ್ತಾರೆ.

ಮುಂಗಾರು ಪೂರ್ವ ಮಳೆ ಈ ವರ್ಷ ಅಗತ್ಯ ಪ್ರಮಾಣದಲ್ಲಿ ಬರದಿರುವುದರಿಂದ ಎಳ್ಳು ಹೊರತು, ಉಳಿದ ಬೆಳೆಗಳ ಬಿತ್ತನೆ ಮಾಡಬಹುದು. ಆದರೆ ಮುಂಗಾರು ಮಳೆ ಆರಂಭ ಹೆಚ್ಚು ವಿಳಂಬವಾದರೆ ಬಿತ್ತಿದ ಬೆಳೆಗಳ ಮೇಲೆ ಸ್ವಲ್ಪ ಮಟ್ಟಿನ ವ್ಯತಿರಿಕ್ತ ಪರಿಣಾಮ ಉಂಟಾಗಬಹುದೆಂಬ ಆತಂಕವಿದೆ.

ಕಳೆದ‌ ವರ್ಷ ಹಾಗೂ ಈ ವರ್ಷದಲ್ಲಿ ಮೇ.14ರ ವರೆಗೆ ಬಂದಿರುವ ಮುಂಗಾರು ಪೂರ್ವ ಮಳೆ ವಿವರವನ್ನು ಹೋಲಿಸಿದರೆ ಈ ವರ್ಷ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಮಳೆ ಕೊರತೆ ಉಂಟಾಗಿದೆ. ಕಳೆದ ವರ್ಷ ಬಂದ ಮಳೆ ಪ್ರಮಾಣಕ್ಕಿಂತ ಈ ವರ್ಷ ಮಳೆ ತೀವ್ರವಾಗಿ ಕ್ಷೀಣಿಸಿರುವುದು ಕಂಡು ಬರುತ್ತದೆ. ಚಿಕ್ಕಮಗಳೂರು ತಾಲೂಕಿನಲ್ಲಿ ಮೇ.14ರ ವರೆಗೆ 139 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಈ ವೇಳೆಗೆ ತಾಲೂಕಿನಲ್ಲಿ 203.7 ಮಿ.ಮೀ. ಮಳೆಯಾಗಿತ್ತು. ಈ ವರ್ಷ ಶೇ.37 ರಷ್ಟು ಮಳೆ ಕೊರತೆ ಉಂಟಾಗಿದೆ.

ಸದಾ ಕ್ಷಾಮಕ್ಕೆ ತುತ್ತಾಗುವ ಕಡೂರು ತಾಲೂಕಿನಲ್ಲಿ 2019ರ ಮೇ.14ರ ವರೆಗೆ ಬಂದಿರುವ ಮಳೆ ಪ್ರಮಾಣ 75 ಮಿ.ಮೀ ಮಾತ್ರ. ಕಳೆದ ವರ್ಷ ಈ ಅವಧಿಯಲ್ಲಿ 134.9 ಮಿ.ಮೀ. ಮಳೆ ಬಂದಿತ್ತು. ಹಾಗಾಗಿ ಈ ವರ್ಷ ಈ ತಾಲೂಕು ಶೇ.42ರಷ್ಟು ಮಳೆ ಕೊರತೆಯನ್ನು ಅನುಭವಿಸಿದೆ.

ಹೆಚ್ಚಿನ ಬಯಲು ಭಾಗ ಹೊಂದಿರುವ ತರೀಕೆರೆ ತಾಲೂಕಿನಲ್ಲಿ 2019ರ ಮೇ.14ರ ವರೆಗೆ ಬಂದಿರುವ ಮಳೆ ಪ್ರಮಾಣ 73 ಮಿ.ಮೀ. ಮಾತ್ರ. ಕಳೆದ ವರ್ಷ ಈ ವೇಳೆಗೆ ಬಂದಿರುವ ಮಳೆ ಪ್ರಮಾಣ 132.7 ಮಿ.ಮೀ. ಹಾಗಾಗಿ ಈ ವರ್ಷ ಶೇ.48ರಷ್ಟು ಮಳೆ ಕೊರತೆಯಾಗಿದೆ.

ಮಲೆನಾಡು ತಾಲೂಕುಗಳಾದ ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿಗಳಲ್ಲೂ ಈ ವರ್ಷ ಮಳೆ ಕೊರತೆ ಕಂಡು ಬಂದಿದೆ. ಕೊಪ್ಪ ತಾಲೂಕಿನಲ್ಲಿ ಈ ವರ್ಷ ಮೇ.14ರ ವರೆಗೆ ಬಿದ್ದಿರುವ ಮಳೆ ಪ್ರಮಾಣ 135 ಮಿ.ಮೀ., ಕಳೆದ ವರ್ಷ ಈ ಅವಧಿಯಲ್ಲಿ 254.9 ಮಿ.ಮೀ. ಮಳೆಯಾಗಿತ್ತು. ಈ ವರ್ಷ ಈವರೆಗೆ ಶೇ.50ರಷ್ಟು ಮಳೆ ಕೊರತೆಯಾಗಿದೆ.

ಮೂಡಿಗೆರೆ ತಾಲೂಕಿನಲ್ಲಿ 2019ರ ಮೇ.14ರ ವರೆಗೆ ಬಂದ ಮಳೆ ಪ್ರಮಾಣ 143 ಮಿ.ಮೀ. ಆದರೆ 2018ರಲ್ಲಿ ಈ ಅವಧಿಯಲ್ಲಿ 243.3 ಮಿ.ಮೀ. ಮಳೆ ಬಂದಿತ್ತು. ಹಾಗಾಗಿ ಈ ವರ್ಷ ತಾಲೂಕು ಶೇ.46ರಷ್ಟು ಮಳೆ ಕೊರತೆ ಅನುಭವಿಸಿದೆ.

ನರಸಿಂಹರಾಜಪುರ ತಾಲೂಕು ಮೇ.14ರ ವರೆಗೆ ಪಡೆದ ಮಳೆ ಪ್ರಮಾಣ ಒಟ್ಟು 111 ಮಿ.ಮೀ., 2018ರಲ್ಲಿ ಇದೇ ಅವಧಿಯಲ್ಲಿ ತಾಲೂಕಿನಲ್ಲಿ ಬಿದ್ದ ಮಳೆ ಪ್ರಮಾಣ 210.5 ಮಿ.ಮೀ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಈ ವರ್ಷ ಈ ಅವಧಿಯಲ್ಲಿ ಶೇ.54 ರಷ್ಟು ಮಳೆ ಕೊರತೆ ಕಂಡು ಬಂದಿದೆ.

ಮಳೆ ದೇವರು ಕಿಗ್ಗದ ಋಷ್ಯಶೃಂಗನನ್ನು ಹೊಂದಿರುವ ಶೃಂಗೇರಿ ತಾಲೂಕಿನಲ್ಲಿ ಮೇ.14ರ ವರೆಗೆ ಬಂದಿರುವ ಮಳೆ 127ಮಿ.ಮೀ. ಇದೇ ಅವಧಿಯಲ್ಲಿ 2018ರಲ್ಲಿ ಈ ತಾಲೂಕು ಪಡೆದಿದ್ದ ಮಳೆ ಪ್ರಮಾಣ 181 ಮಿ.ಮೀ. ಹಾಗಾಗಿ ಈ ವರ್ಷ ಈವರೆಗೆ ಶೇ.58ರಷ್ಟು ಮಳೆ ಕೊರತೆ ಉಂಟಾಗಿದೆ.

ಜಿಲ್ಲೆಯಲ್ಲಿ 2019ರಲ್ಲಿ ಮೇ.14ರ ವರೆಗೆ ಒಟ್ಟು 112 ಮಿ.ಮೀ. ಸರಾಸರಿ ಮಳೆ ಬಂದಿದೆ. 2018ರಲ್ಲಿ ಈ ಪ್ರಮಾಣ ಸರಾಸರಿ 187.7 ಮಿ.ಮೀ. ಆಗಿತ್ತು. ಹೀಗಾಗಿ ಜಿಲ್ಲೆ ಈ ವರ್ಷ ಶೇ.46ರಷ್ಟು ಮಳೆ ಕೊರತೆಯನ್ನು ಈವರೆಗೂ ಅನುಭವಿಸಿದೆ. ಕಳೆದ ವರ್ಷಕ್ಕಿಂತ 75 ಮಿ.ಮೀ. ಒಟ್ಟು ಮಳೆ ಪ್ರಮಾಣದಲ್ಲಿ ಕಡಿಮೆಯಾಗಿದೆ. ಜಿಲ್ಲೆಯ ಬಯಲು ತಾಲೂಕುಗಳಲ್ಲಿ ಕೆರೆಕಟ್ಟೆಗಳು ಖಾಲಿಯಾಗಿವೆ. ಬಿತ್ತನೆಯ ಚಟುವಟಿಕೆ ಹಾಗೂ ಕೃಷಿ ಆರಂಭ ಮಂಕಾಗಿದೆ. ಮುಂಗಾರು ಮಳೆ ಬರುವುದು ವಿಳಂಬವಾದಷ್ಟು ಪರಿಸ್ಥಿತಿ ಮತ್ತಷ್ಟು ತೀವ್ರವಾಗಲಿದೆ. ಜೂ.6 ರಂದು ಕೇರಳವನ್ನು ಬಂದು ಮುಟ್ಟುವ ಮುಂಗಾರು ಮಳೆ ಜಿಲ್ಲೆಗೆ ಬರಲು ಕನಿಷ್ಠ 6 ರಿಂದ 8 ದಿನವಾದರೂ ಬೇಕು. ಅಷ್ಟರೊಳಗೆ ಒಂದು ಹದ ಮಳೆ ಬಂದರೆ ಬಯಲು ಸೀಮೆಯಲ್ಲಿ ಕೃಷಿ ಚಟುವಟಿಕೆ ಸ್ವಲ್ಪಮಟ್ಟಿನ ಚುರುಕು ಪಡೆಯಬಹುದು ಎಂದು ರೈತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.