ನಾಳೆ 54ನೇ ರಾಜ್ಯಮಟ್ಟದ ಗುಡ್ಡಗಾಡು ಓಟ ಸ್ಪರ್ಧೆ

ಅಥ್ಲೆಟಿಕ್ಸ್‌ ಸಂಸ್ಥೆ ರಾಜ್ಯ ಹಿರಿಯ ಉಪಾಧ್ಯಕ್ಷ ಅಜಯ್‌ಕುಮಾರ್‌ ಮಾಹಿತಿ

Team Udayavani, Nov 30, 2019, 4:06 PM IST

Udayavani Kannada Newspaper

ಚಿಕ್ಕಮಗಳೂರು: ಜಿಲ್ಲಾ ಅಥ್ಲೆಟಿಕ್ಸ್‌ ಸಂಸ್ಥೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಡಿ.1ರಂದು 54ನೇ ರಾಜ್ಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆ ನಡೆಯಲಿದೆ ಎಂದು ಸಂಸ್ಥೆಯ ರಾಜ್ಯ ಹಿರಿಯ ಉಪಾಧ್ಯಕ್ಷ ಅಜಯ್‌ ಕುಮಾರ್‌ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರುಷ, ಮಹಿಳೆ, ಬಾಲಕ, ಬಾಲಕಿಯರು ಸೇರಿ ಒಟ್ಟು 8 ವಿಭಾಗಗಳಿಂದ ತಲಾ 6 ಜನರಂತೆ
48 ಮಂದಿ ಸ್ಪರ್ಧಿಗಳು ಪ್ರತಿ ಜಿಲ್ಲೆಯಿಂದ ಆಗಮಿಸಲಿದ್ದಾರೆ. 14 ವರ್ಷದೊಳಗಿನವರಿಗೆ ಅವಕಾಶವಿಲ್ಲ. ಎಂಇಜಿ, ಪೊಲೀಸ್‌ ತಂಡ, ರೈಲ್ವೆ ಮತ್ತಿತರೆ ತಂಡಗಳು ಭಾಗವಹಿಸಲಿವೆ ಎಂದರು.

ರಾಜ್ಯ ಮಟ್ಟದ ಗುಡ್ಡಗಾಡು ಸ್ಪರ್ಧೆಯ ಪುರುಷ ಮತ್ತು ಮಹಿಳೆಯರ ತಂಡ ಡಿ.1 ರಂದು ಬೆ. 6.45 ಕ್ಕೆ ಮಳಲೂರಮ್ಮ ದೇವಸ್ಥಾನದಿಂದ ಹೊರಟು 10 ಕಿ.ಮೀ. ಕ್ರಮಿಸಿ ಸುಭಾಷ್‌ಚಂದ್ರ ಬೋಸ್‌ ಆಟದ ಮೈದಾನ ತಲುಪಲಿದೆ. 20 ವರ್ಷದ ಬಾಲಕರ ತಂಡ ಬೆ.7.30ಕ್ಕೆ ಸಿರಾಗಪುರ ಶಾಲೆಯಿಂದ ಹೊರಟು 8 ಕಿ.ಮೀ. ಕ್ರಮಿಸಿ ಆಟದ ಮೈದಾನ ಸೇರಲಿದೆ. ಬಾಲಕಿಯರ ತಂಡ ಬೆ.8ಕ್ಕೆ ಬೆಟ್ಟದ ಆಂಜನೇಯ ದೇವಸ್ಥಾನದಿಂದ ಹೊರಟು 6 ಕಿ.ಮೀ. ಸಾಗಿ ಆಟದ ಮೈದಾನ ತಲುಪಲಿದೆ ಎಂದು ತಿಳಿಸಿದರು.

18 ವರ್ಷ ವಯೋಮಾನದ ಬಾಲಕರ ತಂಡ ಬೆಳಗ್ಗೆ 8ಕ್ಕೆ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದಿಂದ, ಬಾಲಕಿಯರ ತಂಡ ಸ್ವರ್ಣಭೂಮಿ ಸಿಲ್ವರ್‌ ಪ್ಲಾಂಟೇಶನ್‌ನಿಂದ ಬೆ.6.45 ಕ್ಕೆ ಹೊರಟು ಗುರಿ ತಲುಪಲಿವೆ. 16ರ ವಯೋಮಾನದ ಬಾಲಕರ ತಂಡ ಬೆ.8 ಕ್ಕೆ ಮತ್ತು ಬಾಲಕಿಯರ ತಂಡ 7.30 ಕ್ಕೆ ಕೋಟೆಯ ಎಂ.ಎಲ್‌. ಮೂರ್ತಿ ಮನೆ ಆವರಣದಿಂದ 2 ಕಿ.ಮೀ. ಕ್ರಮಿಸಿ ಜಿಲ್ಲಾ ಆಟದ ಮೈದಾನ ತಲುಪಲಿದೆ ಎಂದರು.

ಗುಡ್ಡಗಾಡು ಓಟಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಜಿಲ್ಲೆಯ 14 ವಯೋಮಿತಿಯ ಬಾಲಕರ ತಂಡ ಬೆ.8.45ಕ್ಕೆ ಹಾಗೂ ಬಾಲಕಿಯರ ತಂಡಗಳಿಗೆ ಬೆ.9 ಕ್ಕೆ ನಗರದ ಹನುಮಂತಪ್ಪ ವೃತ್ತದಿಂದ ಜಿಲ್ಲಾ ಆಟದ ಮೈದಾನದವರೆಗೆ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.

ರಾಜ್ಯ ಮಟ್ಟದ ಪುರುಷ ಮತ್ತು ಮಹಿಳಾ ವಿಭಾಗದ ವಿಜೇತರಿಗೆ ಪ್ರಥಮ 5 ಸಾವಿರ ರೂ., ದ್ವಿತೀಯ 3 ಸಾವಿರ, ತೃತೀಯ 2ಸಾವಿರ, 4, 5 ಮತ್ತು 6 ನೇ ಬಹುಮಾನವಾಗಿ ತಲಾ 1 ಸಾವಿರ ರೂ. ನೀಡಲಾಗುವುದು. 20 ವರ್ಷದ ಬಾಲಕ, ಬಾಲಕಿಯರ ವಿಭಾಗದಲ್ಲಿ ಪ್ರಥಮ 5 ಸಾವಿರ ರೂ., ದ್ವಿತೀಯ 3 ಸಾವಿರ, ತೃತೀಯ 2 ಸಾವಿರ, 4, 5, 6 ನೇ ಬಹುಮಾನವಾಗಿ ತಲಾ 1 ಸಾವಿರ ರೂ. ನೀಡಲಾಗುವುದು. 18 ವರ್ಷದ ಬಾಲಕ, ಬಾಲಕಿಯರ ವಿಭಾಗದಲ್ಲಿ ಪ್ರಥಮ 4 ಸಾವಿರ ರೂ., ದ್ವಿತೀಯ 3 ಸಾವಿರ, ತೃತೀಯ 2 ಸಾವಿರ, 4ನೇ ಬಹುಮಾನವಾಗಿ 1 ಸಾವಿರ, 16 ವರ್ಷ ವಯೋಮಾನದ ಬಾಲಕ, ಬಾಲಕಿಯರ ವಿಭಾಗದಲ್ಲಿ ಪ್ರಥಮ 4 ಸಾವಿರ, ದ್ವಿತೀಯ 3ಸಾವಿರ, ತೃತೀಯ 2 ಸಾವಿರ ಹಾಗೂ 4 ನೇ ಬಹುಮಾನವಾಗಿ 1 ಸಾವಿರ ರೂ. ನೀಡಲಾಗುವುದು. ಜಿಲ್ಲಾ ಮಟ್ಟದ 14 ವರ್ಷದ ಬಾಲಕ, ಬಾಲಕಿಯರ ಸ್ಪರ್ಧೆಯಲ್ಲಿ ಪ್ರಥಮ 3 ಸಾವಿರ, ದ್ವಿತೀಯ 2 ಸಾವಿರ, ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ವಿವರಿಸಿದರು.

ಈಗಾಗಲೇ ಆನ್‌ ಲೈನ್‌ನಲ್ಲಿ ನೋಂದಣಿ ನಡೆಯುತ್ತಿದೆ. ಜಿಲ್ಲೆಯವರಿಗೆ 30 ರವರೆಗೆ ಅವಕಾಶವಿದೆ. ಬಹುಮಾನ ನೀಡಲು ಜಿಆರ್‌ಬಿ ಮತ್ತು ಸಿರಿ ಕೆಫೆ ಉದ್ದಿಮೆಗಳು ಹಣಕಾಸಿನ ನೆರವು ನೀಡಿವೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಅಥ್ಲೆಟಿಕ್ಸ್‌ ಸಂಸ್ಥೆ ಅಧ್ಯಕ್ಷ ಉದಯ್‌ ಪೈ, ಕಾರ್ಯದರ್ಶಿ ಮಂಜುನಾಥ್‌, ಉಪಾಧ್ಯಕ್ಷರಾದ ಯಶೋಧಾ, ಲಕ್ಷ¾ಣಕುಮಾರ, ತರಬೇತುದಾರ ಫ್ರಾನ್ಸಿಸ್‌ ಹಾಜರಿದ್ದರು.

ಈಗಾಗಲೇ ಆನ್‌ ಲೈನ್‌ನಲ್ಲಿ ನೋಂದಣಿ ನಡೆಯುತ್ತಿದೆ. ಜಿಲ್ಲೆಯ ವರಿಗೆ 30 ರವರೆಗೆ ಅವಕಾಶವಿದೆ. ಬಹುಮಾನ ನೀಡಲು ಜಿಆರ್‌ಬಿ ಮತ್ತು ಸಿರಿ ಕೆಫೆ ಉದ್ದಿಮೆಗಳು ಹಣಕಾಸಿನ ನೆರವು ನೀಡಿವೆ.
ಅಜಯ್‌ಕುಮಾರ್‌

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.