ಪರಿಹಾರ ಕಂತಿಗೆ ಸಂತ್ರಸ್ತರ ನಿರೀಕ್ಷೆ

ಅರ್ಧಕ್ಕೆ ನಿಂತ ಮನೆ; ಹೆಚ್ಚಿದ ದುಗುಡ5ಲಕ್ಷ ರೂ. ಪರಿಹಾರಕ್ಕೆ ಚಾತಕ ಪಕ್ಷಿಯಾದ ಸಂತ್ರಸ್ತರು

Team Udayavani, Jan 5, 2020, 3:13 PM IST

5-January-15

ಚಿಕ್ಕೋಡಿ: ನೆರೆಯಲ್ಲಿ ಸಂಪೂರ್ಣ ಬಿದ್ದು ಹೋಗಿರುವ ಮನೆಗಳನ್ನು ಕಟ್ಟಲು ಫಲಾನುಭವಿಗಳು ಮುಂದಾಗಿದ್ದು, ಸರ್ಕಾರ ಬಿಡುಗಡೆ ಮಾಡಿದ ಮೊದಲ ಕಂತಿನ ಪರಿಹಾರದಲ್ಲಿ ತಳಪಾಯ ನಿರ್ಮಿಸಿ ಸರ್ಕಾರದ ಎರಡನೆ ಕಂತಿನ ಪರಿಹಾರದ ಹಣಕ್ಕಾಗಿ ಕಾಯುತ್ತಿದ್ದಾರೆ.

ಕಳೆದ ಆಗಸ್ಟ್‌ ತಿಂಗಳಲ್ಲಿ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ ಉಂಟಾದ ಭೀಕರ ಪ್ರವಾಹದಿಂದ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ಜನರು ತತ್ತರಿಸಿ ಹೋಗಿದ್ದರು. ಪ್ರವಾಹದಿಂದ ಧರೆಗೆ ಉರುಳಿದ ಮನೆ ಕಟ್ಟಲು ರಾಜ್ಯ ಸರ್ಕಾರ 5 ಲಕ್ಷ ರೂ. ಘೋಷಣೆ ಮಾಡಿ ಮೊದಲ ಕಂತಾಗಿ 1 ಲಕ್ಷ ರೂ. ಆಯಾ ಫಲಾನುಭವಿಗಳ ಖಾತೆಗೆ ಜಮೆ ಮಾಡಿದೆ. ಒಂದು ಲಕ್ಷ ರೂ. ಪರಿಹಾರದ ಮೊತ್ತದಲ್ಲಿ ಫಲಾನುಭವಿಗಳು ಮನೆ ಕಟ್ಟಲು ಆರಂಭ ಮಾಡಿದ್ದು, ತಳಪಾಯ ಮಟ್ಟದವರೆಗೆ ಮನೆ ಗೋಡೆ ಬಂದಿದೆ. ಈಗ  ಲಾನುಭವಿಗಳ ಕೈಯಲ್ಲಿ ಹಣವಿಲ್ಲ. ಕಟ್ಟುತ್ತಿರುವ ಮನೆ ಅರ್ಧಕ್ಕೆ ನಿಂತುಕೊಂಡಿದೆ. ಸರ್ಕಾರ ಘೋಷಣೆ ಮಾಡಿದ 5 ಲಕ್ಷ ರೂ. ಪರಿಹಾರ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಬೇಕು ಎನ್ನುತ್ತಿದ್ದಾರೆ ಮನೆ ಕಳೆದುಕೊಂಡ ಫಲಾನುಭವಿಗಳು.

ಅರ್ಧಕ್ಕೆ ನಿಂತ ಮನೆಗಳು: ನೆರೆಯಲ್ಲಿ ಸಂಪೂರ್ಣ ಬಿದ್ದು ಹೋಗಿರುವ ಮನೆಗಳನ್ನು ಪುನಃ ಕಟ್ಟಿಕೊಳ್ಳಲು ಸರ್ವೇ ಮಾಡಿ ಸರ್ಕಾರಕ್ಕೆ ವರದಿ ಕಳಿಸಲು ಸ್ಥಳೀಯ ಅಧಿಕಾರಿಗಳು ವಿಳಂಬ ಮಾಡಿದ್ದಾರೆ. ಎರಡು ತಿಂಗಳ ಹಿಂದೆಯಷ್ಟೇ ಸರ್ಕಾರ ಎ ವರ್ಗದ ಫಲಾನುಭವಿಗಳ ಖಾತೆಗೆ 1 ಲಕ್ಷ ರೂ. ಜಮೆ ಮಾಡಿ ಮನೆ ಕಟ್ಟಿಕೊಳ್ಳಲು ಆರಂಭಿಸಬೇಕೆಂದು ಸೂಚನೆ ನೀಡಿದ್ದರು.

ಹೀಗಾಗಿ ಎ ವರ್ಗದ ಫಲಾನುಭವಿಗಳು ಮನೆ ನಿರ್ಮಾಣ ಆರಂಭಿಸಿದ್ದರು. ಮುಂದಿನ ಹಂತ ಕಟ್ಟಲು ಕೈಯಲ್ಲಿ ದುಡ್ಡಿಲ್ಲ, ಸರ್ಕಾರ ಎರಡನೇ ಕಂತಿನ ಪರಿಹಾರದ ಮೊತ್ತ ಜಮೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಸಂಪೂರ್ಣ ಬಿದ್ದ 498 ಮನೆಗಳು: ಪ್ರವಾಹದಲ್ಲಿ ಚಿಕ್ಕೋಡಿ ತಾಲೂಕಿನ ಕಲ್ಲೋಳ, ಯಡೂರ, ಚೆಂದೂರ, ಇಂಗಳಿ, ಮಾಂಜರಿ, ಸದಲಗಾ, ಅಂಕಲಿ, ಯಡೂರವಾಡಿ, ಚೆಂದೂರ ಟೆಕ್‌, ಹಳೆ ಯಡೂರ ಮುಂತಾದ ಗ್ರಾಮಗಳಲ್ಲಿ ಸುಮಾರು 498 ಫಲಾನುಭವಿಗಳ ಮನೆಗಳು ಸಂಪೂರ್ಣ ಬಿದ್ದು ಹೋಗಿವೆ. ಈ ಎಲ್ಲ ಫಲಾನುಭವಿಗಳಿಗೆ ಹೊಸ ಮನೆ ಕಟ್ಟಿಸಿಕೊಳ್ಳಲು ರಾಜ್ಯ ಸರ್ಕಾರ 5 ಲಕ್ಷ ರೂ. ಘೋಷಣೆ ಮಾಡಿ ಮೊದಲ ಕಂತಾಗಿ 1 ಲಕ್ಷ ರೂ. ಬಿಡುಗಡೆ ಮಾಡಿದೆ. “ಬಿ’ ಕೆಟಗೆರಿಯಲ್ಲಿ 1223 ಮನೆಗಳು ಸೇರ್ಪಡೆಗೊಂಡಿದ್ದು, ಈ ಫಲಾನುಭವಿಗಳಿಗೂ ಸರ್ಕಾರ 1 ಲಕ್ಷ ರೂ. ಜಮೆ ಮಾಡಿದೆ. “ಸಿ’ ಕೆಟಗರಿಯಲ್ಲಿ 4698 ಮನೆಗಳು ಹಾಳಾಗಿದ್ದು, ಇವರಿಗೂ ಸರ್ಕಾರ 50 ಸಾವಿರ ರೂ. ಪರಿಹಾರ ನೀಡಿದೆ. ಅದರಂತೆ ನಿಪ್ಪಾಣಿ ತಾಲೂಕಿನಲ್ಲಿ 433 “ಎ’ ಕೆಟಗರಿ, 764 “ಬಿ’ ಕೆಟಗರಿ, 1894 “ಸಿ’ ಕೆಟಗರಿ ಒಟ್ಟು 3091 ಮನೆಗಳು ಹಾಳಾಗಿವೆ.

ನೆರೆ ಪರಿಹಾರಕ್ಕೆ ಕತ್ತರಿ?: ಪ್ರಾರಂಭದಲ್ಲಿ “ಎ’ ಕೆಟಗರಿ ಫಲಾನುಭವಿಗಳಿಗೆ ಮಾತ್ರ 5 ಲಕ್ಷ ರೂ. ಘೋಷಣೆ ಮಾಡಿದ್ದ ಸರ್ಕಾರ ನಂತರ “ಬಿ’ ಕೆಟಗರಿ ಫಲಾನುಭವಿಗಳಿಗೂ 5 ಲಕ್ಷ ರೂ. ಘೋಷಣೆ ಮಾಡಿತ್ತು. “ಬಿ’ ಕೆಟಗರಿ ಫಲಾನುಭವಿಗಳಿಗೆ 3 ಲಕ್ಷ ರೂ. ಪರಿಹಾರ ನೀಡಲು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ಆರಂಭವಾಗಿದ್ದರಿಂದ ಫಲಾನುಭವಿಗಳ ಎದೆಯಲ್ಲಿ ದುಗುಡ ಆರಂಭವಾಗಿದೆ. ಈ ಕುರಿತು ಅ ಧಿಕೃತ ಯಾವುದೇ ಮಾಹಿತಿ ಹೊರ ಬಿದ್ದಿಲ್ಲವಾದರೂ ಸರ್ಕಾರದಲ್ಲಿ ಚರ್ಚೆ ಮಾತ್ರ ನಡೆಯುತ್ತಿದೆ.

ಕೃಷ್ಣಾ ನದಿ ಮಹಾಪೂರದಲ್ಲಿ ನಮ್ಮ ಮನೆ ಸಂಪೂರ್ಣ ಬಿದ್ದು ಹೋಗಿತ್ತು. ಸರ್ಕಾರ ನೀಡಿದ 1 ಲಕ್ಷ ರೂ.ದಲ್ಲಿ ಮನೆ ಕಟ್ಟಲು ಆರಂಭಿಸಿ ಈಗ ಅರ್ಧಕ್ಕೆ ನಿಂತುಕೊಂಡಿದೆ. ಎರಡನೆ ಕಂತಿನ ಪರಿಹಾರ ಬರುವಿಕೆಗಾಗಿ ಎದುರು ನೋಡಲಾಗುತ್ತಿದೆ. ಶೀಘ್ರ ಐದು ಲಕ್ಷ ರೂ. ಪರಿಹಾರ ನೀಡಿದರೆ ಮನೆ ಪೂರ್ಣಗೊಳಿಸಲು ಅನುಕೂಲವಾಗುವುದು.
ಅಪ್ಪಾಸಾಹೇಬ ಅದುಕೆ ಚೆಂದೂರ,
ಸಂತ್ರಸ್ತ

ನೆರೆಯಲ್ಲಿ ಬಿದ್ದು ಹೊದ ಮನೆಗಳ ನಿರ್ಮಾಣಕ್ಕೆ ಸರ್ಕಾರ 1 ಲಕ್ಷ ರೂ. ನೀಡಿದೆ. ಉಳಿದ ಪರಿಹಾರ ತಕ್ಷಣ ನೀಡಬೇಕೆಂದು ಡಿಸಿ ಮತ್ತು ಹೌಸಿಂಗ್‌ ಬೋರ್ಡ್‌ಗೆ ಮನವಿ ಮಾಡಲಾಗಿದೆ. “ಎ’ ಮತ್ತು “ಬಿ’ ಕೆಟಗರಿ ಫಲಾನುಭವಿಗಳಿಗೆ ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಕಡಿತ ಮಾಡದೇ ನೀಡಬೇಕು.
ಗಣೇಶ ಹುಕ್ಕೇರಿ,
ಶಾಸಕ

ನೆರೆಯಲ್ಲಿ ಬಿದ್ದು ಹೋದ ಮನೆಗಳ “ಎ’ ಮತ್ತು “ಬಿ’ ಕೆಟಗರಿ ಫಲಾನುಭವಿಗಳಿಗೆ 1 ಲಕ್ಷ ರೂ. ಪರಿಹಾರ ನೀಡಲಾಗಿದೆ. ಕಟ್ಟಿದ ಮನೆ ಜಿಪಿಎಸ್‌ ಆದ ಮೇಲೆ ಹೌಸಿಂಗ್‌ ಬೋರ್ಡ್‌ ಉಳಿದ ಪರಿಹಾರ ನೀಡುತ್ತದೆ.
ರವೀಂದ್ರ ಕರಲಿಂಗನ್ನವರ,
ಉಪವಿಭಾಗಾ ಧಿಕಾರಿ ಚಿಕ್ಕೋಡಿ

ಮಹಾದೇವ ಪೂಜೇರಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.