ಬರಿದಾದ ಜೀವನದಿ ಕೃಷ್ಣ ಒಡಲು

ಮಹಾರಾಷ್ಟ್ರ ಕೃಪೆಗೆ ಕಾಯ್ದ ಜನರು•ವರತಿ ನೀರು ಬಸಿದು ಅಗತ್ಯ ಪೂರೈಕೆ

Team Udayavani, Apr 27, 2019, 10:31 AM IST

27-April-4

ಚಿಕ್ಕೋಡಿ: ಮಾಂಜರಿ ಗ್ರಾಮದ ಬಳಿ ಕೃಷ್ಣಾ ನದಿ ಸಂಪೂರ್ಣವಾಗಿ ಬತ್ತಿ ಹೋಗಿದ್ದು, ಪಾತ್ರದಲ್ಲಿ ನೀರಿಗಾಗಿ ರೈತ ತನ್ನ ಜಾನುವಾರುಗಳೊಂದಿಗೆ ಅರಸುತ್ತಿರುವುದು.

ಚಿಕ್ಕೋಡಿ: ಒಂದು ಕಡೆ ನೆತ್ತಿ ಸುಡುವ ಬಿಸಿಲಿನ ತಾಪ ಮತ್ತೂಂದು ಕಡೆ ನದಿ ಬತ್ತುವ ಜೊತೆಗೆ ಬಾವಿ, ಕೊಳವೆಬಾವಿ ಬತ್ತಿ ಹೋಗಿ ನೀರಿನ ಕೊರತೆಯ ಪರಿತಾಪ. ಇದರಿಂದ ಬರದ ನಾಡಾಗಿರುವ ಚಿಕ್ಕೋಡಿ ಉಪವಿಭಾಗದ ನದಿ ತೀರದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಇಂದು ನಾಳೆ ನದಿಗೆ ನೀರು ಬರುತ್ತದೆಂದು ನದಿ ತೀರದ ಗ್ರಾಮಗಳ ಜನರು ಚಾತಕ ಪಕ್ಷಿಗಳಂತೆ ಮಹಾರಾಷ್ಟ್ರದತ್ತ ಮುಖ ಮಾಡಿದ್ದಾರೆ.

ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಜನರ ಜೀವನಾಡಿಯಾದ ಕೃಷ್ಣಾ ನದಿ ಒಡಲು ಸಂಪೂರ್ಣ ಬತ್ತಿ ಹೋಗಿ ತಿಂಗಳು ಕಳೆದಿದೆ. ಹೀಗಾಗಿ ಚಿಕ್ಕೋಡಿ, ರಾಯಬಾಗ ಮತ್ತು ಅಥಣಿ ತಾಲೂಕಿನಲ್ಲಿ ಹರಿದು ಹೋಗಿರುವ ಕೃಷ್ಣಾ ನದಿ ಎರಡು ದಡದ ಗ್ರಾಮಗಳಲ್ಲಿ ಜನ ಜಾನುವಾರಗಳು ಕುಡಿಯುವ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ನದಿ ತೀರದ ಗ್ರಾಮಗಳಲ್ಲಿ ಒಂದು ಕೊಡ ನೀರಿಗಾಗಿ ನದಿಯಲ್ಲಿ ವರತಿ(ತಗ್ಗು) ತೆಗೆದು ನೀರು ತೆಗೆದುಕೊಂಡು ಹೋಗುವ ಪ್ರಸಂಗ ಬಂದೊದಗಿದೆ.

ಉಪವಿಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದ್ದರೂ ಜಿಲ್ಲಾ ಆಡಳಿತ ಮಾತ್ರ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳುತ್ತಿಲ್ಲ, ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿಸಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ ಎಂಬುದು ನದಿ ತೀರದ ಗ್ರಾಮಸ್ಥರ ಆಕ್ರೋಶ.

ಗ್ರಾಮೀಣ ಭಾಗದಲ್ಲಿ ಸಮಸ್ಯೆ ಉಲ್ಬಣ: ಇಂಥ ಬಿರು ಬೇಸಿಗೆಯಲ್ಲಿ ಕೃಷ್ಣಾ ನದಿ ಬತ್ತಿ ಹೋಗಿ ಗುಟುಕು ನೀರಿಗೆ ಪರದಾಡುವ ಪರಿಸ್ಥಿತಿ ನದಿ ತೀರದ ಗ್ರಾಮದ ಜನರಿಗಾದರೆ ಮಡ್ಡಿ ಭಾಗದ ಜನರ ಪರಿಸ್ಥಿತಿ ಇದಕ್ಕಿಂತಲೂ ಶೋಚನೀಯ. ನದಿಯಲ್ಲಿ ನೀರು ಇಲ್ಲದೆ ಹತ್ತಾರು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸ್ಥಗಿತಗೊಂಡಿದ್ದರಿಂದ ಅಥಣಿ ಮತ್ತು ಕಾಗವಾಡ ತಾಲೂಕುಗಳ 78 ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ರಾಯಬಾಗ ತಾಲೂಕಿನಲ್ಲಿಯೂ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಂಚಲಿ, ದಿಗ್ಗೇವಾಡಿ, ನಸಲಾಪುರ, ಬಾ.ಸವದತ್ತಿ, ಬೆಂಡವಾಡ, ಜಲಾಲಪುರ ಮುಂತಾದ ಗ್ರಾಮಗಳಲ್ಲಿ ಜನ ನೀರಿಗಾಗಿ ಪರದಾಡುತ್ತಿದ್ದಾರೆ.

ಚಿಕ್ಕೋಡಿ ತಾಲೂಕಿನ ನದಿ ತೀರದ ಅಂಕಲಿ, ಮಾಂಜರಿ, ಕಲ್ಲೋಳ, ಯಡೂರ, ಇಂಗಳಿ ಮತ್ತು ಕೆರೂರ, ಕಾಡಾಪೂರ, ಬಂಬಲವಾಡ, ಜೈನಾಪುರ, ಕರೋಶಿ ಸೇರಿದಂತೆ 30 ಕ್ಕೂ ಹೆಚ್ಚಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಗಂಭೀರ ಪರಿಸ್ಥಿತಿ ಎದುರಾಗಿದೆ.

ಚಿಕ್ಕೋಡಿ ನಗರದಲ್ಲಿ ನೀರಿಗಾಗಿ ಪರದಾಟ: ಜಿಲ್ಲಾ ಕೇಂದ್ರಸ್ಥಾನ ಚಿಕ್ಕೋಡಿ ನಗರ ಕೂಡ ಕುಡಿಯುವ ನೀರಿನ ಸಮಸ್ಯೆಯಿಂದ ಹೊರತಾಗಿಲ್ಲ. ನದಿಯಲ್ಲಿ ನೀರು ಬತ್ತಿ ಹೋಗಿ ನಗರಕ್ಕೆ ನೀರು ಪೂರೈಕೆಯಾಗುತ್ತಿಲ್ಲ, ಹೀಗಾಗಿ ನಗರದಲ್ಲಿರುವ ಕೊಳವೆ ಬಾವಿ ಮೂಲಕ ನೀರು ಪೂರೈಕೆ ಮಾಡುತ್ತಿದ್ದರೂ ಸಹ ಅದು ಸಾಕಾಗುತ್ತಿಲ್ಲ, ಈಗಾಗಲೇ ನಗರದಲ್ಲಿ 24*7 ಕುಡಿಯುವ ನೀರಿನ ಯೋಜನೆ ಮೂಲಕ ನೀರು ಸರಬರಾಜು ಆಗುತ್ತಿತ್ತು. ಇದೀಗ ನಾಲ್ಕೈದು ದಿನಕ್ಕೊಮ್ಮೆ ನೀರು ಬರುವುದರಿಂದ ನಗರದ ಜನ ನೀರಿಗಾಗಿ ಪರದಾಡುತ್ತಿದ್ದಾರೆ.

ನಗರದಲ್ಲಿ 120 ಕೊಳವೆ ಬಾವಿ ನಿರ್ಮಿಸಲಾಗಿದೆ. ಎರಡು ಕೊಳವೆ ಬಾವಿ ದುರಸ್ತಿ ಮಾಡಲಾಗಿದೆ. ಸಾಧ್ಯವಿದ್ದಷ್ಟು ಜನರಿಗೆ ನೀರು ಕೊಡುವ ವ್ಯವಸ್ಥೆ ಕಲ್ಪಿಸಲಾಗುತ್ತದೆಯೆಂದು ಪುರಸಭೆ ಮುಖ್ಯಾಧಿಕಾರಿ ಡಾ. ಸುಂದರ ರೂಗಿ ತಿಳಿಸಿದರು.

ಈಡೇರದ ಭರವಸೆ: ಲೋಕಸಭೆ ಚುನಾವಣೆ ಪೂರ್ವದಲ್ಲಿ ಬಿಜೆಪಿ-ಕಾಂಗ್ರೆಸ್‌ ಮುಖಂಡರು ಮಹಾರಾಷ್ಟ್ರದಿಂದ ನದಿಗೆ ನೀರು ಹರಿಸುವುದಾಗಿ ಜನರಿಗೆ ಭರವಸೆ ನೀಡಿದ್ದರು. ಆದರೆ ಚುನಾವಣೆ ಮುಗಿದರೂ ನದಿಗೆ ನೀರು ಬಂದಿಲ್ಲ, ಚುನಾವಣೆ ಮುಗಿದ ಬಳಿಕ ನೀರು ಬರುತ್ತದೆಂಬ ನದಿ ತೀರದ ಜನರ ನಂಬಿಕೆ ಹುಸಿಯಾಗಿದೆ. ಚಿಕ್ಕೋಡಿ ಉಪವಿಭಾಗದ ಮುಖಂಡರು ಪಕ್ಷಾತೀತವಾಗಿ ನದಿಗೆ ನೀರು ಬರಲು ಪ್ರಯತ್ನ ಮಾಡಬೇಕು ಇಲ್ಲದಿದ್ದರೆ ಜೀವಜಲಕ್ಕಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎನ್ನುವುದು ಜನರ ಅಳಲು.

ಚಿಕ್ಕೋಡಿ ಉಪವಿಭಾಗದಲ್ಲಿ ಕುಡಿಯುವ ನೀರಿಗಾಗಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಮಹಾರಾಷ್ಟ್ರ ಸರ್ಕಾರದ ಜೊತೆ ಮಾತುಕತೆ ನಡೆಸಿ ಕುಡಿಯಲು ನೀರು ಬಿಡಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ವಿಡಿಯೋ ಸಂವಾದದಲ್ಲಿ ಮನವಿ ಮಾಡಲಾಗಿದೆ. ಇದರ ಜೊತೆಗೆ ಚಿಕ್ಕೋಡಿ ಉಪವಿಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್‌ ಮೂಲಕ ನೀರು ಕೊಡಬೇಕು.
ಡಾ. ಕೆ.ವಿ.ರಾಜೇಂದ್ರ,
ಪ್ರಭಾರಿ ಜಿಲ್ಲಾಧಿಕಾರಿ ಬೆಳಗಾವಿ.

ಕೃಷ್ಣಾ ನದಿ ಬತ್ತಿ ಹೋಗಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಕೂಡಲೇ ನದಿಗೆ ನೀರು ಬಿಡಬೇಕೆಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ಗೆ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಅದಕ್ಕೆ ಫಡ್ನವೀಸ್‌ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ.
•ದುರ್ಯೋಧನ ಐಹೊಳೆ
ಶಾಸಕರು ರಾಯಬಾಗ.

•ಮಹಾದೇವ ಪೂಜೇರಿ

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.