ಶೋಷಿತ ವರ್ಗದಲ್ಲಿ ಅಕ್ಷರ ಕ್ರಾಂತಿಯಾಗಲಿ

ಅಭಿವೃದ್ಧಿ ಪಥದತ್ತ ಸಾಗಲು ಸಾಕ್ಷರತೆ-ಸಂಸ್ಕಾರ ಅಗತ್ಯ: ಡಾ| ಶಿವಮೂರ್ತಿ ಮುರುಘಾ ಶರಣರು

Team Udayavani, Jun 17, 2019, 1:09 PM IST

17-June-18

ಚಿತ್ರದುರ್ಗ: ದಶಮಾನೋತ್ಸವ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.

ಚಿತ್ರದುರ್ಗ: ಶೋಷಿತ ತಳ ಸಮುದಾಯಗಳು ಸೇರಿದಂತೆ ಮಧ್ಯಮ ವರ್ಗದ ಕುಟುಂಬಗಳಲ್ಲಿ ಅಕ್ಷರ ಕ್ರಾಂತಿಯಾದರೆ ಸ್ವಾಭಿಮಾನದ ಕ್ರಾಂತಿ ಉದಯವಾಗಲಿದೆ ಎಂದು ಡಾ| ಶಿವಮೂರ್ತಿ ಶರಣರು ಹೇಳಿದರು.

ನಗರದ ಅಮೋಘ ಇಂಟರ್‌ನ್ಯಾಷನಲ್ ಹೋಟೆಲ್ನಲ್ಲಿ ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜದ ದಶಮಾನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಶರಣರು ಆಶೀರ್ವಚನ ನೀಡಿದರು.

ಸ್ವಾಭಿಮಾನದ ಸಮಾಜ ನಿರ್ಮಾಣವಾಗಬೇಕಾದರೆ ವಿದ್ಯಾದಾನದ ಜೊತೆಗೆ ಅನ್ನದಾನವೂ ಆಗಬೇಕು. ವಿದ್ಯಾ ಕ್ರಾಂತಿ, ದಾಸೋಹ ಕ್ರಾಂತಿ ಹೆಚ್ಚೆಚ್ಚು ನಡೆದರೆ ಅನೇಕ ಸಮುದಾಯಗಳು ಮುಖ್ಯವಾಹಿನಿಗೆ ಬರಲಿವೆ ಎಂದರು.

ಅವಕಾಶ ವಂಚಿತ ಕುಟುಂಬಗಳ ಮಕ್ಕಳಿಗೆ ಅನ್ನದಾನ ಮಾಡದೆ ಹೋದರೆ ವಿದ್ಯೆ ದಾನ ಮಾಡಲು ಆಗುವುದಿಲ್ಲ. ಇವೆರಡು ಪರಸ್ಪರ ಪೂರಕ ಎಂಬ ಪ್ರಜ್ಞೆ ಜಯದೇವ ಜಗದ್ಗುರುಗಳಲ್ಲಿ ಇತ್ತು. ಅಂದಿನಿಂದ ಇಂದಿನಿವರೆಗೂ ನಮ್ಮ ಮಠ ಅನ್ನದಾನ ಹಾಗೂ ಅಕ್ಷರ ದಾನ ಎರಡನ್ನು ಮಾಡಿಕೊಂಡು ಬರುತ್ತಿದೆ. ನಾಡಿನ ಬಹುತೇಕ ಮಠಗಳು ಇಂತಹ ಕಾರ್ಯಕ್ರಮ ಮಾಡಿಕೊಂಡು ಬರುತ್ತಿರುವುದರಿಂದ ಮಠಗಳಿಗೆ ಸೈದ್ಧಾಂತಿಕ ಹಿನ್ನೆಲೆಯಿದೆ. ಸ್ವಾಭಿಮಾನವನ್ನು ಕಟ್ಟಿಕೊಡುವ ಕಾರ್ಯ ಮಾಡುತ್ತಿವೆ ಎಂದು ತಿಳಿಸಿದರು.

ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜ ಅಕ್ಷರ ಸಂಸ್ಕೃತಿಗೆ ಒಳಗಾಗಬೇಕು. ಕುಂಚಿಟಿಗ ಸಮಾಜ ಅಕ್ಷರ ಸಂಸ್ಕೃತಿಯಿಂದ ವಂಚಿತವಾಗಿದೆ. ಎಲ್ಲ ರೀತಿಯ ಮೌಡ್ಯಗಳನ್ನು ಬಿಟ್ಟು ಬಡತನಕ್ಕೆ ಅಂಜದೆ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ಕೊಡಿ. ಕೆಲವು ಸಮಾಜಗಳಲ್ಲಿ ಅಕ್ಷರ ಸಂಸ್ಕೃತಿ ಇದೆ, ಆದರೆ ನಾಗರೀಕ ಸಂಸ್ಕೃತಿಯೇ ಇರುವುದಿಲ್ಲ ಎಂದು ವಿಷಾದಿಸಿದರು.

ವಿದ್ಯಾವಂತರಾದವರ ಬದುಕು ಪ್ರಕಾಶಮಾನವಾಗಿರುತ್ತದೆ. ಪ್ರತಿಭೆ ಯಾವುದೇ ಸಮುದಾಯಕ್ಕೆ ಸೀಮಿತವಲ್ಲ. ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕು. ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 95 ಕ್ಕೂ ಹೆಚ್ಚು ಅಂಕಗಳನ್ನು ಪಡೆದಿದ್ದಾರೆಂದರೆ ನಿಜಕ್ಕೂ ದೊಡ್ಡ ಸಾಧನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಕ್ಷರತೆ, ಸಂಸ್ಕಾರ ಎರಡೂ ಜೀವನಕ್ಕೆ ಅತ್ಯವಶ್ಯಕ. ಸಂಸ್ಕಾರದ ಜೊತೆ ಸಾಗಿದಾಗ ಮಾತ್ರ ಪ್ರಗತಿ ಪಥದತ್ತ ಸಾಗಲು ಸಾಧ್ಯ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಬೇಕಾಗಿರುವುದರಿಂದ ಒಂದೊಂದು ಅಂಕಕ್ಕೂ ಮೌಲ್ಯವಿದೆ. ನಿರಂತರ ಪ್ರಯತ್ನ ಹಾಗೂ ಕಠಿಣ ಪರಿಶ್ರಮದಿಂದ ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜದ ಪ್ರಧಾನ ಕಾರ್ಯದರ್ಶಿ ಎಲ್.ಬಿ. ರಾಜಶೇಖರ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಕುಂಚಿಟಿಗ ಲಿಂಗಾಯತ ಸಮಾಜವನ್ನು ಸಂಘಟಿಸಲು ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದೇನೆ. ಪ್ರತಿ ವರ್ಷ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುತ್ತಿದೆ. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಬೇಕಾದರೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸಮಾಜಕ್ಕೆ ಆರ್ಥಿಕ ನೆರವು ನೀಡಿದಾಗ ಮಾತ್ರ ಕುಂಚಿಟಿಗ ವೀರಶೈವ ಲಿಂಗಾಯತರು ಅಭಿವೃದ್ಧಿ ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.

ಕುಂಚಿಟಿಗ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಂ.ಬಿ. ತಿಪ್ಪೇರುದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಮುಖಂಡರುಗಳಾದ ಪರಮೇಶ್ವರಪ್ಪ, ನಿವೃತ್ತ ಉಪನ್ಯಾಸಕ ಕುಬೇರಪ್ಪ, ವಿಶ್ವನಾಥ್‌, ಶಿವಪ್ರಕಾಶ್‌, ಜಿ.ಎಸ್‌. ಉಜ್ಜಿನಪ್ಪ, ದಗ್ಗೆ ಶಿವಪ್ರಕಾಶ್‌ ಮತ್ತಿತರರು ಇದ್ದರು. ಇದೇ ಸಂದರ್ಭದಲ್ಲಿ ನಿವೃತ್ತ ಡಿವೈಎಸ್ಪಿ ರಾಜಪ್ಪ ಹಾಗೂ ರಸಾಯನಶಾಸ್ತ್ರ ವಿಷಯದಲ್ಲಿ ಡಾಕ್ಟರೆಟ್ ಪಡೆದಿರುವ ಮಂಜಣ್ಣ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.