ಆನೆ ಆಟಕ್ಕೆ ಅರಣ್ಯ ಇಲಾಖೆ ಸುಸು

ಎರಡು ದಿನ ಹಗಲಿರುಳು ಹುಡುಕಾಡಿದರೂ ಆನೆ ಪತ್ತೆಯೇ ಇಲ್ಲ

Team Udayavani, Dec 7, 2019, 12:49 PM IST

7-December-12

ಚಿತ್ರದುರ್ಗ: ಅರಣ್ಯ ಇಲಾಖೆ ಸಿಬ್ಬಂದಿ ಜತೆಗೆ ಆನೆಯೊಂದು ಕಣ್ಣಾಮುಚ್ಚಾಲೆ ಆಡುತ್ತಿದೆ. ನಾಲ್ಕು ದಿನಗಳಿಂದ ಜಿಲ್ಲೆಯಲ್ಲೇ ಓಡಾಡುತ್ತಿದ್ದರೂ ಯಾರ ಕಣ್ಣಿಗೂ ಬೀಳದೆ ಓಡಾಡುತ್ತಿರುವುದು ಅಚ್ಚರಿ ಮೂಡಿಸಿದೆ.

ಮೂರು ದಿನಗಳ ಹಿಂದೆ ಕಕ್ಕೇರು ಬಳಿಯ ಜಮೀನೊಂದರಲ್ಲಿ ಆನೆ ಹೆಜ್ಜೆಗಳು ಕಾಣಿಸಿದ್ದವು. ಆದರೆ ಆನೆ ಯಾವ ಕಡೆಗೆ ಹೋಗಿದೆ ಎನ್ನುವುದು ಮಾತ್ರ ಗೊತ್ತಾಗಿರಲಿಲ್ಲ. ಇದರಿಂದ ಆತಂಕಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಜೋಗಿಮಟ್ಟಿ ಸುತ್ತಮುತ್ತಲಿನ ಹಳ್ಳಿಗಳು ಹಾಗೂ ಆನೆ ಕಾರಿಡಾರ್‌ನಲ್ಲಿರುವ ಹಳ್ಳಿಗಳ ರೈತರಿಗೆ ಎಚ್ಚರಿಕೆ ನೀಡಿದ್ದರು.

ಗುರುವಾರ ರಾತ್ರಿಯಿಡೀ ಸುಮಾರು 100 ಜನ ಸಿಬ್ಬಂದಿ ಕಾಡಂಚಿನ ಗ್ರಾಮಗಳ ಬಳಿ ಓಡಾಟ ನಡೆಸಿ ಎಲ್ಲಿಯೂ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದ್ದರು. ಎಲ್ಲಿಯೂ ಆನೆ ಪತ್ತೆಯಾಗಿಲ್ಲ. ಶುಕ್ರವಾರ ಕೂಡ ಕಾರ್ಯಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಜೋಗಿಮಟ್ಟಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದರು. ಹಿರಿಯೂರು ಹಾಗೂ ಹೊಳಲ್ಕೆರೆ ವಲಯದ ಅರಣ್ಯ ಇಲಾಖೆ ಸಿಬ್ಬಂದಿ ಸಹ ತಮ್ಮ ವ್ಯಾಪ್ತಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಹೀಗಿದ್ದರೂ ಎಲ್ಲಿಯೂ ಆನೆ ಮಾತ್ರ ಪತ್ತೆಯಾಗಲೇ ಇಲ್ಲ. ಜೋಗಿಮಟ್ಟಿ ಅರಣ್ಯ ಪ್ರದೇಶದ ಗೋಡೆಕಣಿವೆ ಎಂಬಲ್ಲಿ ಆನೆ ಗುರುವಾರ ರಾತ್ರಿ ಆಲದ ಮರದ ಸೊಪ್ಪು ಮುರಿದು ತಿಂದಿರುವುದು ಪತ್ತೆಯಾಗಿದೆ.

ಇಲ್ಲಿಂದ ಹೆಜ್ಜೆಗಳನ್ನು ಹಿಡಿದು ಹೊರಟ ಸಿಬ್ಬಂದಿಗಳಿಗೆ ಕುರುಮರಡಿಕೆರೆವರೆಗೆ ಆನೆ ಹೋಗಿರುವುದು ಪತ್ತೆಯಾಗಿದೆ. ಆದರೆ ಅಲ್ಲಿಂದ ಯಾವ ಕಡೆ ಹೋಗಿದೆ ಎನ್ನುವುದು ಮಾತ್ರ ತಿಳಿದಿಲ್ಲ. ಆರು ದಿನಗಳ ಹಿಂದೆ ಹೊಳಲ್ಕೆರೆ ತಾಲೂಕಿನಲ್ಲಿ ಆನೆಯ ಹೆಜ್ಜೆ ಗುರುತು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಇಷ್ಟು ಹೊತ್ತಿಗೆ ಆನೆ ಜಿಲ್ಲೆಯಿಂದ ಹೊರಗೆ ಹೋಗಬೇಕಾಗಿತ್ತು. ಹೋಗಿದೆಯೋ ಇಲ್ಲವೋ ಎನ್ನುವುದು ಮಾತ್ರ ಯಕ್ಷಪ್ರಶ್ನೆಯಾಗಿದೆ.

ಆನೆಯ ಹೆಜ್ಜೆ ಗುರುತು ಸುಮಾರೂ ಒಂದೂಮುಕ್ಕಾಲು ಅಡಿಯಿಂದ ಎರಡು ಅಡಿಯಷ್ಟು ಅಗಲವಿದೆ. ಇದರಿಂದ ಈ ಆನೆಗೆ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗುತ್ತಿದೆ. ಸಾಧಾರಣವಾಗಿ ಆನೆ ಒಂದು ರಾತ್ರಿ ಸುಮಾರು 40 ಕಿಮೀ ಸಂಚರಿಸುತ್ತದೆ. ಆದರೆ ಈಗ ಹೆಜ್ಜೆ ಪತ್ತೆಯಾಗಿರುವ ಆನೆಯನ್ನು ಗಮನಿಸಿದರೆ ದಿನಕ್ಕೆ 20 ರಿಂದ 25 ಕಿಮೀ ಮಾತ್ರ ನಡೆಯುತ್ತಿದೆ. ಈ ಎಲ್ಲಾ ಅಂದಾಜುಗಳಂತೆ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಆನೆಗೆ ವಯಸ್ಸಾಗಿರಬಹುದು ಎನ್ನುವುದು ಅರಣ್ಯ ಇಲಾಖೆ ಅಧಿಕಾರಿಗಳ ಲೆಕ್ಕಾಚಾರ.

ಡ್ರೋಣ್‌ ಕಣ್ಣಿಗೂ ಕಾಣದ ಸಲಗ
ಹಿರಿಯೂರಿನ ಪರಿಸರ ಪ್ರೇಮಿ ರಘು ಎಂಬುವವರು ಅರಣ್ಯ ಇಲಾಖೆ ಸಿಬ್ಬಂದಿ ಜತೆ ಕೈಜೋಡಿಸಿ ಆನೆ ಪತ್ತೆ ಮಾಡಲು ಶುಕ್ರವಾರ ನೆರವಾಗಿದ್ದರು. ಇಡೀ ದಿನ ಡ್ರೋಣ್‌ ಮೂಲಕ ಹುಡುಕಾಟ ನಡೆಸಿದರೂ ಆನೆ ಪತ್ತೆಯಾಗಿಲ್ಲ. ಸಹಜವಾಗಿ ಆನೆ ನೀರು ಇರುವ ಕಡೆ ಹೋಗುತ್ತದೆ ಎನ್ನುವ ಆಧಾರದಲ್ಲಿ ಚಿಕ್ಕಸಿದ್ದವ್ವನಹಳ್ಳಿ ಕೆರೆ ಬಳಿಯೂ ತೆರಳಿ ಆನೆ ಪತ್ತೆಗಾಗಿ ಪ್ರಯತ್ನಿಸಲಾಗಿದೆ. ಕುರುಮರಡಿಕೆರೆ ಬಳಿ ಹೆಜ್ಜೆ ಕಾಣಿಸಿದ್ದರಿಂದ ಮುಂದೆ ಚಿಕ್ಕಸಿದ್ದವ್ವನಹಳ್ಳಿ ಅಥವಾ ಪಾಲವ್ವನಹಳ್ಳಿ ಮೂಲಕ ನಾಳೆ ಹಿರಿಯೂರು ತಲುಪಬಹುದು ಎಂದು ಆರ್‌ಎಫ್‌ಒ ಪ್ರದೀಪ್‌ ಕೇಸರಿ ಹಾಗೂ ಸಂದೀಪ್‌ ನಾಯಕ್‌ ಅಂದಾಜಿಸಿದ್ದಾರೆ.

ಟಾಪ್ ನ್ಯೂಸ್

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.