Aam Aadmi Party “ಗ್ಯಾರಂಟಿ ‘ ಕದ್ದ ಕಾಂಗ್ರೆಸ್: ಮುಖ್ಯಮಂತ್ರಿ ಚಂದ್ರು
Team Udayavani, Sep 11, 2023, 10:10 PM IST
ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಘೋಷಿಸಿರುವ ಐದು ಉಚಿತ ಗ್ಯಾರಂಟಿಗಳು ನಮ್ಮ ಪ್ರಣಾಳಿಕೆಯಾಗಿದ್ದವು. ಅವುಗಳನ್ನು ಕದ್ದು ಈಗ ರಾಜ್ಯದ ಜನತೆಗೆ ನೀಡುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಎಎಪಿ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ “ಎಲ್ಲಾ ಸೇರೋಣ ಬನ್ನಿ ಮಾತಾಡೋಣ’ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಯೋಜನೆಗಳನ್ನು ಕದ್ದಿದ್ದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ. ಯಾವ ಪಕ್ಷ ಜನರಿಗೆ ಒಳ್ಳೆಯದು ಮಾಡಿದರೂ ನಮಗೆ ಸಂತೋಷ. ಆದರೆ ಗ್ಯಾರಂಟಿಗಳನ್ನು ಘೋಷಿಸುವ ಮುನ್ನ ಸಾಧಕ-ಬಾಧಕಗಳನ್ನು ಗಮನಿಸಬೇಕಾಗಿತ್ತು. ಗೃಹಲಕ್ಷ್ಮಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ ಹಣ ತಲುಪುತ್ತಿಲ್ಲ.
ವ್ಯವಸ್ಥೆಯ ತಾಂತ್ರಿಕ ಸಮಸ್ಯೆಗಳನ್ನು ಮೊದಲು ಸರಿಪಡಿಸಿಕೊಳ್ಳಬೇಕಿತ್ತು. ಸಮಾಜ ಕಲ್ಯಾಣ ಇಲಾಖೆಗೆ 34 ಸಾವಿರ ಕೋಟಿ ರೂ.ಗಳಲ್ಲಿ 11 ಸಾವಿರ ಕೋಟಿ ರೂ.ಗಳನ್ನು ಸಿಎಂ ಸಿದ್ದರಾಮಯ್ಯ ಉಚಿತ ಯೋಜನೆಗಳಿಗೆ ನೀಡಿರುವುದು ಕಣ್ಣೊರೆಸುವ ತಂತ್ರ. ರಾಜ್ಯದಲ್ಲಿರುವ 14 ಅಕಾಡೆಮಿ, 4 ಅಭಿವೃದ್ಧಿ ಪ್ರಾಧಿ ಕಾರಗಳಿಗೆ ನಯಾಪೈಸೆ ಕೊಟ್ಟಿಲ್ಲ. ನುಡಿದಂತೆ ನಡೆಯದಿರುವುದು, ಸುಳ್ಳು ಹೇಳುತ್ತಿರುವುದೇ ಕಾಂಗ್ರೆಸ್ ಸಾಧನೆ. ರಾಜ್ಯದಲ್ಲಿ ಯಾವ ಪ್ರಗತಿಯೂ ಇಲ್ಲ, ಅಭಿವೃದ್ಧಿಯೂ ಇಲ್ಲ. ಐದು ಗ್ಯಾರಂಟಿಗಳನ್ನು ಮುಚ್ಚಿಕೊಳ್ಳಲು ಅನುದಾನಗಳನ್ನು ಕಡಿತಗೊಳಿಸಿ ಹಣ ಕೊಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.