ಗ್ರಂಥಾಲಯ ಅಭಿವೃದ್ಧಿಗೆ ಅನುಮೋದನೆ

ಓದುಗರಿಗೆ ಅನುಕೂಲವಾಗುವ ಪುಸ್ತಕ ನೀಡಿ

Team Udayavani, Mar 22, 2022, 10:14 AM IST

library

ಚಿತ್ರದುರ್ಗ: ಗ್ರಂಥಾಲಯಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ಹಾಗೂ ಹೆಸರಾಂತ ಲೇಖಕರ ಪುಸ್ತಕಗಳನ್ನು ಖರೀದಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 87ನೇ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಹಾಗೂ 2022-23ನೇ ಸಾಲಿನ ಆಯ-ವ್ಯಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಓದುಗರ ಬೇಡಿಕೆ ಹಾಗೂ ಸಾರ್ವಜನಿಕ ಸ್ಪರ್ಧಾತ್ಮಕ ಓದುಗರಿಂದ ಪುಸ್ತಕಗಳ ಬೇಡಿಕೆ ಪಟ್ಟಿ ಪಡೆದು ಓದುಗರಿಗೆ ಅನುಕೂಲವಾಗುವಂತೆ ಪುಸ್ತಕಗಳನ್ನು ಒದಗಿಸಬೇಕು. ಶಾಖಾ ಗ್ರಂಥಾಲಯ ಹಾಗೂ ಸ್ಪರ್ಧಾತ್ಮಕ ಅಧ್ಯಯನ ಕೇಂದ್ರ, ಶಾಖಾ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಸರಬರಾಜು ಮಾಡಬೇಕು. ಗ್ರಂಥಾಲಯದಲ್ಲಿ ಓದುಗರಿಗೆ ಪುಸ್ತಕ ಸುಲಭವಾಗಿ ದೊರಕುವಂತೆ ವ್ಯವಸ್ಥಿತವಾಗಿ ಕ್ರಮವಹಿಸಿ, ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಸಲಹೆ ನೀಡಿದರು.

ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್‌. ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲಾ ಗ್ರಂಥಾಲಯದ ಕಾಂಪೌಂಡ್‌ ಗೋಡೆ ಪುನರ್‌ ನಿರ್ಮಾಣಕ್ಕೆ ನಿರ್ಮಿತಿ ಕೇಂದ್ರದಿಂದ ಅಂದಾಜುಪಟ್ಟಿ ಪಡೆಯಲಾಗಿದೆ. ಜಿಲ್ಲಾ ಮತ್ತು ನಗರ ಪ್ರಾ ಧಿಕಾರ ನಿಧಿಯಿಂದ 2020-21ನೇ ಸಾಲಿನ ಆಯವ್ಯಯದಲ್ಲಿ 3.14 ಲಕ್ಷಗಳನ್ನು ನೀಡಲಾಗಿದೆ. ಉಳಿದ ಅನುದಾನವನ್ನು ಕಾಮಗಾರಿ ಮುಕ್ತಾಯವಾದ ಬಳಿಕ ನೀಡಲಾಗುವುದು. ಹಿರಿಯೂರು ಶಾಖಾ ಗ್ರಂಥಾಲಯಕ್ಕೆ ಹೆಚ್ಚಿನ ಓದುಗರು ಬರುವುದರಿಂದ ಹೆಚ್ಚುವರಿಯಾಗಿ 2ನೇ ಮಹಡಿ ಕಟ್ಟಡ ನಿರ್ಮಾಣಕ್ಕೆ ಬೇಡಿಕೆ ಇದೆ. ಹಾಗಾಗಿ ಇಲಾಖೆಯಿಂದ ಹಣ ಬಿಡುಗಡೆಯಾದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.

12 ಲಕ್ಷ ಡಿಜಿಟಲ್‌ ಸದಸ್ಯತ್ವ ನೋಂದಣಿ: ಚಿತ್ರದುರ್ಗ ಜಿಲ್ಲೆಯಲ್ಲಿ 2022ರ ಮಾರ್ಚ್‌ 20ರ ಅಂತ್ಯಕ್ಕೆ 12,71,838 ಡಿಜಿಟಲ್‌ ಗ್ರಂಥಾಲಯದ ಸದಸ್ಯತ್ವ ಪಡೆದಿದ್ದಾರೆ. ರಾಜ್ಯದಲ್ಲಿ ಚಿತ್ರದುರ್ಗ ಆರನೇ ಸ್ಥಾನದಲ್ಲಿದೆ. 2022 ಮಾರ್ಚ್‌ 20ರ ಅಂತ್ಯಕ್ಕೆ ಇಲಾಖೆಯಲ್ಲಿ 2,23 ಕೋಟಿ ಡಿಜಿಟಲ್‌ ಸದಸ್ಯತ್ವ ಹೊಂದಿದ್ದಾರೆ. 2022-23ನೇ ಸಾಲಿನ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದಲ್ಲಿ ಒಟ್ಟು ರೂ.98 ಲಕ್ಷ ಅಂದಾಜು ಆದಾಯದ ನಿರೀಕ್ಷೆ ಇದೆ. ಇದರಲ್ಲಿ ಅಂದಾಜು 77.90 ಲಕ್ಷ ವ್ಯಯವಾಗುವ ನಿರೀಕ್ಷೆ ಇದೆ. ರೂ.2.10ಲಕ್ಷ ಉಳಿತಾಯವಾಗಲಿದೆ ಎಂದರು.

ಗ್ರಂಥಾಲಯ ಅಭಿವೃದ್ಧಿಗೆ ಹಲವು ವಿಷಯಗಳಿಗೆ ಸಭೆ ಅನುಮೋದನೆ ನೀಡಿತು. ಸಭೆಯಲ್ಲಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಸಿ.ಬಿ.ಶೈಲ, ಲಿಂಗರಾಜು, ಚೋಳಗಟ್ಟ ಗ್ರಾಪಂ ಸದಸ್ಯ ಸುರೇಶ್‌ ಉಗ್ರಾಣ, ಎಂ.ಕೆ. ಹಟ್ಟಿ ಗ್ರಾಪಂ ಸದಸ್ಯೆ ನಾಗರತ್ನಮ್ಮ, ಡಿಡಿಪಿಇ ಕೆ.ರವಿಶಂಕರ್‌ ರೆಡ್ಡಿ, ಹೊಳಲ್ಕೆರೆ ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಸೇರಿದಂತೆ ಗ್ರಂಥಾಲಯ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUDA CASE: ಪೊಲಿಟಿಕಲ್‌ ನ್ಯೂಸ್‌ಗಾಗಿ ಇಡಿ ಯತ್ನ: ಹರಿಪ್ರಸಾದ್‌

MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್‌ ಆರೋಪ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.