ಮಳೆಯಿಂದ ಒಂದು ಗಂಟೆ ತಡವಾಗಿ ಆರಂಭವಾದ ಭಾರತ್ ಜೋಡೋ ಯಾತ್ರೆ
Team Udayavani, Oct 11, 2022, 7:55 AM IST
ಚಿತ್ರದುರ್ಗ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ 12ನೇ ದಿನದ ಪಾದಯಾತ್ರೆ ಒಂದು ಗಂಟೆ ತಡವಾಗಿ ಆರಂಭವಾಯಿತು.
ಬೆಳಗ್ಗೆ 6.30ಕ್ಕೆ ಆರಂಭವಾಗುತ್ತಿದ್ದ ಯಾತ್ರೆ ಮಂಗಳವಾರ ಬೆಳಗ್ಗೆ 7.30ಕ್ಕೆ ಪ್ರಾರಂಭವಾಯಿತು.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿ ದಿನ ಬೆಳಗ್ಗೆ 6 ಗಂಟೆಗೆ ಭಾರತ್ ಐಕ್ಯತಾ ಯಾತ್ರೆ ಆರಂಭ ಆಗುತ್ತಿತ್ತು. ಮಳೆ ಕಾರಣಕ್ಕೆ ತಡವಾಗಿದೆ. ಈ ಕುರಿತು ರಾತ್ರಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು ಎಂದರು.
ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಗ್ರಾಮದಿಂದ ಆರಂಭವಾದ ಪಾದಯಾತ್ರೆ ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆವರೆಗೆ ಸಾಗಲಿದೆ. ಬೆಳಿಗ್ಗೆ 11 ಗಂಟೆಯವರೆಗೆ ಹೆಜ್ಜೆ ಹಾಕುವ ಯಾತ್ರಾರ್ಥಿಗಳು ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ 4ಕ್ಕೆ ಪುನರಾರಂಭವಾಗುವ ಯಾತ್ರೆ ರಾತ್ರಿ ಚಳ್ಳಕೆರೆ ತಲುಪಲಿದೆ.
ಹಿರಿಯೂರು ನಗರದಿಂದ ಬಾಲೇನಹಳ್ಳಿವರೆಗೆ ಸೋಮವಾರ ನಡೆದಿದ್ದ ಪಾದಯಾತ್ರೆ ರಾತ್ರಿ ಹರ್ತಿಕೋಟೆ ಗ್ರಾಮದಲ್ಲಿ ವಾಸ್ತವ್ಯ ಹೂಡಿತ್ತು. ಪಾದಯಾತ್ರೆ ಮುಗಿದ ಬಳಿಕ ಆರಂಭವಾದ ಮಳೆ ರಾತ್ರಿ ಇಡೀ ಸುರಿದಿತ್ತು. ನಸುಕಿನ 6 ಗಂಟೆಗೆ ಮಳೆ ಬಿಡುವು ನೀಡಿದ್ದು, ಪಾದಯಾತ್ರೆ ಆರಂಭವಾಯಿತು.
ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ‘150-ಎ’ನಲ್ಲಿ ಚಳ್ಳಕೆರೆ ಮತ್ತು ಹಿರಿಯೂರು ನಡುವೆ ಸಾಗುತ್ತಿದೆ.
ಇದನ್ನೂ ಓದಿ : ದೇಶದ ಬಾಹ್ಯಾಕಾಶ ಆರ್ಥಿಕತೆ 2025ಕ್ಕೆ ಲಕ್ಷ ಕೋಟಿ ರೂ. ಮೌಲ್ಯಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.