100 ರ ಬದಲು 112ಕ್ಕೆ ಕರೆ ಮಾಡಿ


Team Udayavani, Jan 30, 2021, 4:22 PM IST

Call 112 instead of 100

ಹೊಳಲ್ಕೆರೆ: ಅಪರಾಧ ಮುಕ್ತ ಹಾಗೂ ಆರೋಗ್ಯ ಪೂರಕ ಸಮಾಜಕ್ಕಾಗಿ ಡಯಲ್‌ 112 ಸಂಖ್ಯೆಯನ್ನು ಜಿಲ್ಲೆಯಲ್ಲಿ ಲಾಂಚ್‌ ಮಾಡಿದೆ. ದೇಶದ ಎಲ್ಲಾ ಸೇವೆಗಳು ಇನ್ನು ಮುಂದೆ 112 ರ ಸಂಖ್ಯೆ ಮೂಲಕ ಪಡೆದುಕೊಳ್ಳಲು ಸಾರ್ವಜನಿಕರಿಗೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ ತಿಳಿಸಿದರು.

ಪಟ್ಟಣದ ಬಸ್‌ ನಿಲ್ದಾಣದಲ್ಲಿ ಪೊಲೀಸ್‌ ಇಲಾಖೆ ಹಮ್ಮಿಕೊಂಡಿದ್ದ 112 ಡಯಲ್‌ ತುರ್ತು ಸ್ವಂದನಾ ಸಹಾಯ ವಾಹನಗಳಿಗೆ ಚಾಲನೆ ನೀಡಿ, ಜನರಲ್ಲಿ ಡಯಲ್‌ 112 ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕ ಚಾಲನೆ ನೀಡಿ ಮಾತನಾಡಿದರು.

ದೇಶದಲ್ಲಿರುವ ಪೊಲೀಸ್‌ ಸೇವೆ ಸೇರಿದಂತೆ ವೈದ್ಯಕೀಯ, ಅಗ್ನಿಶಾಮಕ, ಅಪಘಾತ, ತುರ್ತು ಸೇವೆಗೆ ಈ ಮೊದಲು ಉಪಯೋಗಿಸುತ್ತಿದ್ದ 108, 100 ಸಂಖ್ಯೆ ಬದಲಿಗೆ ಎಲ್ಲಾ ಸೌಲಭ್ಯಗಳು ಡಯಲ್‌ 112 ರಲ್ಲಿ ಸಿಕ್ಕಲಿವೆ. ಜನರು ಪೊಲೀಸ್‌ ಸೇವೆಗೆ 100, ವೈದ್ಯಕೀಯ ಸೇವೆಗೆ 108 ಇದ್ದ ಸಂಖ್ಯೆ ರದ್ದುಪಡಿಸಿದ್ದು, ಬದಲಿಗೆ 112 ಡಯಲ್‌ ಸಂಖ್ಯೆ ಸದ್ಬಳಕೆ ಮಾಡಿಕೊಳ್ಳಬೇಕು. ಇದರಿಂದ ಸಂಕಷ್ಟದಲ್ಲಿರುವ ಜನರಿಗೆ ಗೋಲ್ಡನ್‌ ಸಮಯದಲ್ಲಿ ಸೇವೆ ಸಿಕ್ಕುವುದರಿಂದ ಅಪರಾಧ, ಅಪಘಾತ, ಅನೈತಿಕ, ಅಕ್ರಮ ಮುಕ್ತ, ಆರೋಗ್ಯ ಪೂರಕ ಸೇವೆಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ ಎಂದರುತಿಳಿಸಿದರು.

ಇದೊಂದು ನೂತನ ತಂತ್ರಜ್ಞಾನವಾಗಿರುವ ತ್ವರಿತಗತಿಯ ಸೇವೆಯಾಗಿದೆ. ನಾಗರಿಕರ ಸಮಸ್ಯೆಗಳಿಗೆ ಪೊಲೀಸರಿಂದ ಶೀಘ್ರ ಪರಿಹಾರ ಹಾಗೂ ರಕ್ಷಣೆ ಮತ್ತು ಸೇವೆ ಸಿಕ್ಕುವಂತಾಗಲು ದೇಶದಲ್ಲಿ ಇನ್ನು ಮುಂದೆ 112 ಡಯಲ್‌ ಸೇವೆ ಆರಂಭಿಸಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ವ್ಯಾಪ್ತಿಯಲ್ಲಿರುವ ಜನರ ಸಮಸ್ಯೆಗಳಿಗೆ ತಕ್ಷಣವೇ ಪೊಲೀಸ್‌ ಸೌಲಭ್ಯ ಕಲ್ಪಿಸುವ ಮೂಲಕ ಅಪರಾಧ, ಅಪಘಾತ, ಕಳ್ಳತನ, ಸಾಮಾಜಿಕ ಅವಮಾನ, ಕಾಲೇಜುಗಳ ಹತ್ತಿರ ವಿದ್ಯಾರ್ಥಿಗಳಿಗೆ ರ್ಯಾಗಿಂಗ್‌, ಅಗ್ನಿ ದುರಂತ ಮತ್ತಿತರೆ ಸಂದರ್ಭದಲ್ಲಿ ತಕ್ಷಣವೇ 112 ಸಂಖ್ಯೆಗೆ ಕರೆ ಮಾಡಿದಲ್ಲಿ ತಕ್ಷಣವೇ ನಿಮ್ಮ ಹತ್ತಿರಕ್ಕೆ ಪೊಲೀಸ್‌ ವಾಹನ ಜತೆ ಸಿಬ್ಬಂದಿ ಆಗಮಿಸಿ ಸೌಲಭ್ಯ ಕಲ್ಪಿಸಿಕೊಡಲಿದ್ದಾರೆ ಎಂದರು.

ಇದನ್ನೂ ಓದಿ:ಗ್ರಾಮ ವಾಸ್ತವ್ಯದಿಂದ ಹೊಸ ಅನುಭವ: ಅಜಯಸಿಂಗ್‌

ಯಾವುದೇ ವ್ಯಕ್ತಿ ಸಂಕಷ್ಟದಲ್ಲಿದ್ದಾಗ ಅಗ್ನಿ ದುರಂತ, ಪೊಲೀಸ್‌, ವೈದ್ಯಕೀಯ ಸೇವೆ ಬೇಕಿದ್ದಾಗ ಡಯಲ್‌ 112 ಕರೆ ಮಾಡಿದ 15 ನಿಮಿಷಗಳಲ್ಲಿ ಪಟ್ಟಣದ ಪ್ರದೇಶದಲ್ಲಿ ಹಾಗೂ 30 ನಿಮಿಷದೊಳಗೆ ಗ್ರಾಮೀಣ ಪ್ರದೇಶದಲ್ಲಿ ಸಂಚರಿಸುವ ಮೂಲಕ ಜನರಿಗೆ ತುರ್ತು ಸೇವೆ ಕಲ್ಪಿಸಲಾಗುತ್ತಿದೆ ಎಂದರು. ಹೆಚ್ಚುವರಿ ಪೊಲೀಸ್‌ ಅ ಧೀಕ್ಷಕರಾದ ಮಹಾಲಿಂಗ ಬಿ.ನಂದಗಾಂವಿ, ಡಿ.ವೈ.ಎಸ್ಪಿ ಪಾಂಡುರಂಗ, ವೃತ್ತ ನಿರೀಕ್ಷ ರವೀಶ್‌, ಪಿಎಸ್‌ಐಗಳಾದ ವಿಶ್ವನಾಥ, ರಾಮಚಂದ್ರಪ್ಪ,ಬಾಹುಬಲಿ, ಆಶ್ವಿ‌ನಿ ಸೇರಿದಂತೆ ಹಲವಾರು ಜನರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

CTD-Vanivilasa

Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.