ಹರ್ಡೇಕರ್ ಹುಟ್ಟೂರಿನಿಂದ ಜನಾಂದೋಲನ : ಬಲರಾಮ್
Team Udayavani, Jun 27, 2021, 9:46 PM IST
ಹರಿಹರ : ಸೇವಾದಳದ ಶತಮಾನೋತ್ಸವ ನಿಮಿತ್ತ ಎನ್.ಎಸ್. ಹಡೇìಕರ್ ಹುಟ್ಟೂರು ಹಾವೇರಿ ಜಿಲ್ಲೆಯ ತಿಳುವಳ್ಳಿಯಿಂದ ಜನಾಂದೋಲನ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಅಖೀಲ ಭಾರತ ಕಾಂಗ್ರೆಸ್ ಸೇವಾದಳದ ಕಾರ್ಯದರ್ಶಿ ಬಲರಾಮ್ ಸಿಂಗ್ ಭದೋರಿಯ ತಿಳಿಸಿದರು.
ತಿಳುವಳ್ಳಿಗೆ ತೆರಳುವ ಮಾರ್ಗ ಮಧ್ಯ ಶನಿವಾರ ನಗರದ ಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೇವಾದಳ 98 ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇವಾದಳದ ಸಂಸ್ಥಾಪಕರಲ್ಲೊಬ್ಬರಾದ ಡಾ| ನಾರಾಯಣ ಸುಬ್ಬರಾವ್ ಹಡೇìಕರ್ ಹುಟ್ಟೂರಿನಿಂದ ಜನಾಂದೋಲನ ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದರು.
ಹಡೇಕರ್ ಹುಟ್ಟಿದ ತಿಳುವಳ್ಳಿ, ಅವರ ಕರ್ಮಭೂಮಿ ಬೆಳಗಾವಿ ಜಿಲ್ಲೆಯ ಘಟಪ್ರಭಾ ಹಾಗೂ ಧಾರವಾಡಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಸೇವಾದಳದ ಭವ್ಯ ಇತಿಹಾಸ ಸಾರುವ ಶತಮಾನೋತ್ಸವ ಸ್ಮಾರಕ ಕಟ್ಟಡ ನಿರ್ಮಿಸುವ ಯೋಚನೆಯಿದೆ. ಇದೇ ಕಾರಣಕ್ಕೆ ಹಡೇಕರ್ ಜನ್ಮಸ್ಥಳ ತಿಳುವಳ್ಳಿಗೆ ಭೇಟಿ ನೀಡುತ್ತಿರುವುದಾಗಿ ಹೇಳಿದರು.
ಕಾಂಗ್ರೆಸ್ ಸೇವಾದಳಕ್ಕೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ ಎಂದ ಭದೋರಿಯ, ಉತ್ತರ ಕರ್ನಾಟಕದ ಉಮಾಬಾಯಿ ಕುಂದಾಪುರ, ದುರ್ಗಾಬಾಯಿ ದೇಶಮುಖ್, ಡಾ| ಸಾವಿತ್ರಿಬಾಯಿ ಮಹಾಜನ್ ಇತರರನ್ನು ನೆನಪು ಮಾಡಿಕೊಂಡರು.
ಸೇವಾದಳ ಕಾಂಗ್ರೆಸ್ಸಿನ ಮೂಲ ಸಂಸ್ಥೆ. ಸ್ವಾತಂತ್ರ ಪೂರ್ವದಲ್ಲಿ ನಾಗಪುರದ ಕೇಂದ್ರೀಯ ಕಾರಾಗೃಹದಲ್ಲಿ ಸೇವಾದಳದ ಚಟುವಟಿಕೆಗಳು ಆರಂಭವಾದವು. ಪ್ರಥಮ ಅಧ್ಯಕ್ಷರಾಗಿ ಜವಾಹರಲಾಲ್ ನೆಹರು ಆಯ್ಕೆಯಾಗಿದ್ದರು.
ಸೇವಾದಳ ಶತಮಾನೋತ್ಸವ ದೇಶಾದ್ಯಂತ ನಡೆಯುತ್ತಿದೆ. ವಿಶೇಷವಾಗಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಹೆಚ್ಚು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಸೇವಾದಳ ಕಾರ್ಯಕಾರಿ ಮುಖ್ಯ ಸಂಘಟಕ ವಿ.ವಿ. ತುಳಸಿಗೇರಿ, ಉಪಾಧ್ಯಕ್ಷರಾದ ಕೆ.ಬಿ. ವಿನಾಯಕ ಮೂರ್ತಿ, ಹನುಮಂತರಾವ್ ಜವಳಿ, ಪ್ರಧಾನ ಕಾರ್ಯದರ್ಶಿ ಡಾ| ವಿಶ್ವನಾಥ ಚಿಂತಾಮಣಿ, ಸಂಯೋಜಕ ಚಿನ್ಮಯ ಎಂ. ಕಲ್ಮಠ, ರಾಜ್ಯ ಪ್ರಧಾನ ಕಾರ್ಯದರ್ಶಿ ಎ. ಗೋವಿಂದ ರೆಡ್ಡಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ
ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್ ಸಿಸಿ ಕೊಠಡಿಯೂ ಶಿಥಿಲ
Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು
Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ
Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.