ಮೀಸಲಾತಿ ಘೋಷಣೆವರೆಗೂ ಹೋರಾಟ

ನಾವು ಕೇಳುತ್ತಿರುವುದು ಮೀಸಲಾತಿಯೆಂಬ ರೊಟ್ಟಿಯಲ್ಲಿನ ಒಂದು ಚೂರು: ಕೂಡಲಸಂಗಮ ಶ್ರೀ

Team Udayavani, Feb 1, 2021, 2:46 PM IST

1-7

ಭರಮಸಾಗರ: ಪಂಚಮಸಾಲಿ ಸಮಾಜದ 2ಎ ಮೀಸಲಾತಿಗಾಗಿನ ಪಾದಯಾತ್ರೆ ದಾವಣಗೆರೆ ತಲುಪಿದ ವೇಳೆ ಸಮಾಜದ ಯುವಕರು
ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸುವ ಮೂಲಕ ನಮ್ಮ ಸಮಾಜದ ನೋವನ್ನು ಹೊರಹಾಕಿದ್ದಾರೆ ಎಂದು ಕೂಡಲಸಂಗಮದ
ಪಂಚಮಸಾಲಿ ಗುರುಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮಾಜ ನಡೆಸುತ್ತಿರುವ ಪಾದಯಾತ್ರೆ ಇಲ್ಲಿನ ಸರ್ಕಾರಿ ಮಾಧ್ಯಮಿಕ ಶಾಲಾ ಆವರಣಕ್ಕೆ
ಆಗಮಿಸಿದ ಸಂದರ್ಭದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಶ್ರೀಗಳು ಮಾತನಾಡಿದರು.

ಸಂವಿಧಾನದ ಮೂಲಕ ಅಂಬೇಡ್ಕರ್ ರವರು ಒದಗಿಸಿರುವ ಮೀಸಲಾತಿಯೆಂಬ ರೊಟ್ಟಿಯಲ್ಲಿ ಒಂದು ಚೂರು ಕೇಳುತ್ತಿದ್ದೇವೆ. ಮುಖ್ಯಮಂತ್ರಿಗಳು ಎಲ್ಲಾ ವರದಿಗಳನ್ನು ತರಿಸಿಕೊಂಡು ಪರಿಶೀಲಿಸಿ 2ಎ ಮೀಸಲಾತಿ ಘೋಷಿಸಿ ಆದೇಶ ಹೊರಡಿಸುವವರೆಗೂ
ನಮ್ಮ ಹೋರಾಟ ನಿಲ್ಲದು. ಈ ಕುರಿತು ಪ್ರಧಾನಮಂತ್ರಿಯವರು ದೆಹಲಿಗೆ ಕರೆದರೂ ನಾವು ಹೋಗಲು ಸಿದ್ಧರಿಲ್ಲ. ಏಕೆಂದರೆ ನಮ್ಮ
ಪಾದಯಾತ್ರೆ ನಿರ್ದಿಷ್ಟ ಉದ್ದೇಶ ಹೊಂದಿದೆ.

ಮುಖ್ಯಮಂತ್ರಿಯವರು ಸಚಿವ ಮುರುಗೇಶ್‌ ನಿರಾಣಿ ಮೂಲಕ ಪಾದಯಾತ್ರೆ ಕುರಿತು ಹೇಳಿಕೆ ಕೊಡಿಸಿದ್ದಾರೆ. ಈ ಮೂಲಕ ಸಚಿವರನ್ನು
ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

18 ದಿನಕ್ಕೆ ಪಾದಯಾತ್ರೆ ಕಾಲಿಟ್ಟಿದ್ದು, 400 ಕಿಮೀ ಸಾಗಿದೆ. ಭೇದ ಭಾವವಿಲ್ಲದ ಏಕೈಕ ಸಮಾಜ ಪಂಚಮಸಾಲಿ ಸಮಾಜವಾಗಿದೆ.
ಕೇಳುವ ಗುಣ ನಮಗೆ ಇರಲಿಲ್ಲ. ಕೊಟ್ಟು ದೊಡ್ಡವರಾಗಿದ್ದೇವೆ. ಶಿಕ್ಷಣ ಮತ್ತು ದಾಸೋಹಕ್ಕೆ ಸಮಾಜದ ಕೊಡುಗೆ ಅಪಾರ. ಸೊಲ್ಲಾಪುರದಿಂದ
ಕೊಳ್ಳೇಗಾಲವರೆಗೆ ಸಮಾಜ ಹಾಸ್ಟೆಲ್‌ಗ‌ಳನ್ನು ಸ್ಥಾಪಿಸಿ ಶಿಕ್ಷಣಕ್ಕೆ ಕೊಡುಗೆ ನೀಡಿದೆ. ಸಮಾಜದ ಮಕ್ಕಳ ಭವಿಷ್ಯಕ್ಕಾಗಿ ಬೀದಿಗಿಳಿದು ಪಾದಯಾತ್ರೆ ನಡೆಸುತ್ತಿರುವುದಾಗಿ ತಿಳಿಸಿದರು.

“ಊರಿಗೆ ಉಪಕಾರಿ ಮನೆಗೆ ಮಾರಿ’ ಎಂಬಂತೆ ಸಮಾಜದ ಸ್ಥಿತಿಯಾಗಿದೆ. ಸಮಾಜದ ಮಕ್ಕಳಿಗೆ ಶಿಕ್ಷಣದಲ್ಲಿ ಸ್ಥಾನ ಸಿಗದೆ ವಂಚಿತರಾಗುತ್ತಿರುವ ಬಗ್ಗೆ ಮಕ್ಕಳು ಪೋಷಕರನ್ನು ಪ್ರಶ್ನಿಸುತ್ತಿದ್ದಾರೆ. ಉನ್ನತ ಹುದ್ದೆಗಳಿಂದ ನಮ್ಮವರು ವಂಚಿತರಾಗುತ್ತಿದ್ದಾರೆ.
ಲಿಂಗಾಯಿತರಲ್ಲೆ ಹಲವರಿಗೆ ಮೀಸಲಾತಿ ದೊರೆತಿದೆ. ನಮ್ಮ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗದೆ ಅನ್ಯಾಯವಾಗಿದೆ ಎಂದರು.
ಹರಿಹರದ ವಚನಾನಂದ ಸ್ವಾಮೀಜಿ ಮಾತನಾಡಿ, ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ನಾವು ಸಮಾಜದ ಉದ್ಧಾರಕ್ಕಾಗಿ ಹೆದ್ದಾರಿಗೆ ಬಂದಿದ್ದೇವೆ. ತಾತ್ವಿಕ ಭೇದದಿಂದ ಮಠಗಳು ಬೇರೆಯಾಗಿದ್ದರೂ ಇದೀಗ ಸಮಾಜದ ಒಳಿತಿಗಾಗಿ ನಾವೆಲ್ಲರೂ ಒಂದಾಗಿ ಮುನ್ನಡೆಯುತ್ತಿದ್ದೇವೆ.

ತಂದೆಯಂತಿರುವ ಸಮಾಜದ ಶ್ರೀರಕ್ಷೆ ನಮ್ಮ ಮೇಲಿರಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಿಗಾಗಿ ಪ್ರಸಾದ ನಿಲಯಗಳನ್ನು ಸ್ಥಾಪಿಸಿದ ಕೀರ್ತಿ ಲಿಂಗೈಕ್ಯ ಜಯದೇವ ಶ್ರೀಗಳಿಗೆ ಸಲ್ಲುತ್ತದೆ. ನಮ್ಮಲ್ಲಿ ನಡೆ-ನುಡಿ
ಒಂದಾಗಿರಬೇಕು. ನಮ್ಮ ಮಠದ ಶ್ರೀಗಳ ಪಾದಯಾತ್ರೆ ಬಗ್ಗೆ ಬೇರೆಯವರು ಅವಹೇಳನ ಮಾಡುವುದು ನಿಲ್ಲಿಸಬೇಕು. ಸಮಾಧಾನವಾಗಿ ಸಮಾಜವನ್ನು ಕಟ್ಟೋಣ ಎಂದರು.

ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ತೇರದಾಳ ಶಾಸಕ ಸಿದ್ದು ಸವದಿ, ಹರಿಹರ ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌, ಎನ್‌. ಕೋಟ್ರೇಶ್‌, ಚಂದ್ರಶೇಖರ್‌ ಪೂಜಾರ್‌, ಕಲ್ಲಪ್ಪ, ನಾಗರಾಜ್‌, ರುದ್ರಾಣಿ ಗಂಗಾಧರ, ಎಂ.ಎಸ್‌. ಪಾಟೀಲ್‌, ವಿರಾಜ್‌ ಪಾಟೀಲ್‌, ವೀರೇಶ್‌, ಶಾಂತಕುಮಾರ್‌, ಪ್ರಭು ಕಲುºರ್ಗಿ, ಜಿಪಂ ಮಾಜಿ ಉಪಾಧ್ಯಕ್ಷ ಎಚ್‌.ಎನ್‌. ತಿಪ್ಪೇಸ್ವಾಮಿ,ಸಿದ್ದಮ್ಮ, ಪ್ರವೀಣ್‌ಕುಮಾರ್‌ ಇದ್ದರು

ಓದಿ : ನಾಟಕದಿಂದ ಮನುಷ್ಯನ ಬದುಕು ಬದಲಾವಣೆ

ಟಾಪ್ ನ್ಯೂಸ್

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.