ಕೋಟೆ ನಾಡಿನ ಜನರ ನೆಮ್ಮದಿ ಕಸಿದ ಮಹಾಮಾರಿ ಕೋವಿಡ್


Team Udayavani, May 11, 2020, 4:23 PM IST

11-May-18

ಚಿತ್ರದುರ್ಗ: ಗ್ರೀನ್‌ ಝೋನ್‌ನಲ್ಲಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಸತತ ಎರಡು ದಿನಗಳಿಂದ ಒಟ್ಟು 6 ಕೋವಿಡ್ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ. ಹಾಗಾಗಿ ಕೋಟೆನಾಡಿನ ಜನತೆ ಆತಂಕಗೊಂಡಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಆತಂಕವಿದ್ದರೂ ಜಿಲ್ಲೆಗೆ ಕೋವಿಡ್ ಮಹಾಮಾರಿ ಕಾಲಿಟ್ಟಿಲ್ಲ ಎಂಬ ಸಣ್ಣ ಸಮಾಧಾನ ಇತ್ತು. ಆದರೆ ಗುಜರಾತಿನಿಂದ ಆಗಮಿಸಿದ ಜಿಲ್ಲೆಯ ತಬ್ಲೀಘಿಗಳು ಆ ನೆಮ್ಮದಿಯನ್ನು ಕಿತ್ತುಕೊಂಡಿದ್ದಾರೆ. ಮೇ 8 ಮತ್ತು 9 ರಂದು ಬಂದ ಕೋವಿಡ್‌ ಟೆಸ್ಟ್‌ ವರದಿಗಳಲ್ಲಿ ಜಿಲ್ಲೆಯಲ್ಲಿ 6 ಪ್ರಕರಣ ಪತ್ತೆಯಾಗಿದ್ದು ಹೊಸ ತಲೆನೋವಾಗಿದೆ.

ಸೋಂಕಿತರೆಲ್ಲರೂ ಅಹಮದಾಬಾದ್‌ನಿಂದ ಜಿಲ್ಲೆಗೆ ಆಗಮಿಸುತ್ತಲೇ ಚೆಕ್‌ಪೋಸ್ಟ್‌ನಲ್ಲಿ ತಡೆದ ಪೊಲೀಸರು ಎಲ್ಲರನ್ನೂ ಕ್ವಾರಂಟೈನ್‌ ಮಾಡಿದ್ದರು. ಈ ವೇಳೆ ಅವರ ಕುಟುಂಬಸ್ಥರಿಗೆ ಸಂಪರ್ಕಕ್ಕೆ ಅವಕಾಶ ನೀಡಿರಲಿಲ್ಲ. ಒಂದು ವೇಳೆ ಅವರನ್ನು ಮನೆಗೆ ಕಳಿಸಿದ್ದರೆ ಅಥವಾ ಕುಟುಂಬದವರು, ಬಂಧುಗಳು ಭೇಟಿ ಮಾಡಿದ್ದರೆ ಆತಂಕ ಹೆಚ್ಚಾಗುತ್ತಿತ್ತು. ಜಿಲ್ಲಾಡಳಿತ ಕೈಗೊಂಡ ಸಕಾಲಿಕ ತೀರ್ಮಾನದಿಂದ ಆತಂಕ ದೂರಾಗಿ ಕೊರೊನಾ ತಬ್ಲೀಘಿಗ ನಡುವೆಯೇ ಉಳಿಯುವಂತಾಗಿದೆ. ಚಿಕಿತ್ಸೆ ನೀಡುವ ವೈದ್ಯಕೀಯ ಸಿಬ್ಬಂದಿ ಒಂದಿಷ್ಟು ಜಾಗ್ರತೆ ವಹಿಸಿದರೆ ಕೋವಿಡ್ ಸೋಂಕು ಹರಡದಂತೆ ತಡೆಗಟ್ಟಬಹುದು. ಇದಕ್ಕೆ ಸೋಂಕಿತರು ಕೂಡಾ ಸ್ಪಂದಿಸಬೇಕಿದೆ.

ಶುಕ್ರವಾರ ಮತ್ತು ಶನಿವಾರ ತಲಾ ಮೂರು ಪಾಸಿಟಿವ್‌ ಪ್ರಕರಣ ಬಂದ ಪರಿಣಾಮ ಭಾನುವಾರ ವರದಿ ಮೇಲೆ ಸಾಕಷ್ಟು ಜನ ಕುತೂಹಲ ಇಟ್ಟುಕೊಂಡಿದ್ದರು. ಆದರೆ ಭಾನುವಾರದ ವರದಿಯಲ್ಲಿ ಜಿಲ್ಲೆಗೆ ಸಂಬಂ ಧಿಸಿದಂತೆ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ. ಸದ್ಯ ಜಿಲ್ಲೆಯಲ್ಲಿ ಕೋವಿಡ್‌-19 ಕಾಣಿಸಿಕೊಂಡು ಗುಣಮುಖರಾಗಿ ಮನೆ ಸೇರಿರುವ ಭೀಮಸಮುದ್ರದ ಮಹಿಳೆ ಸೇರಿ ಒಟ್ಟು 7 ಪ್ರಕರಣಗಳಿದ್ದು, ಇದರಲ್ಲಿ 6 ಸಕ್ರಿಯ ಪ್ರಕರಣಗಳಾಗಿವೆ.

49 ಜನರ ಗಂಟಲು ದ್ರವ ಪರೀಕ್ಷೆ ಭಾನುವಾರ 49 ಜನರ ಗಂಟಲು ದ್ರವವನ್ನು ತೆಗೆದು ಪರೀಕ್ಷೆಗೆ ಕಳಿಸಲಾಗಿದೆ. ಜಿಲ್ಲೆಯಿಂದ ಪರೀಕ್ಷೆಗೆ ಹೋಗಿರುವ 118 ಮಾದರಿಗಳ ಫಲಿತಾಂಶ ಬರಬೇಕಿದೆ. ಜಿಲ್ಲೆಯಲ್ಲಿ ಇದುವರೆಗೆ 1247 ಜನರ ಗಂಟಲು ಮಾದರಿ ತೆಗೆದು ಪರೀಕ್ಷೆಗೆ ಕಳಿಸಿದ್ದು, ಇದರಲ್ಲಿ 1081 ಪ್ರಕರಣ ನೆಗೆಟಿವ್‌ ವರದಿಯಾಗಿವೆ.

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.