![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 15, 2020, 11:15 AM IST
ಚಿತ್ರದುರ್ಗ: ಜಿಲ್ಲೆಯಲ್ಲಿ 15 ಹಾಸಿಗೆಗಳ 11 ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರತ್ಯೇಕವಾಗಿ ಕಾಯ್ದಿರಿಸಿರುವ ಕೋವಿಡ್ ಹೆಲ್ತ್ ಕೇರ್ ಸೆಂಟರ್ಗಳನ್ನಾಗಿ ಪರಿವರ್ತಿಸಿ ಅಗತ್ಯ ಸಿಬ್ಬಂದಿಯನ್ನೂ ನಿಯೋಜನೆ ಮಾಡಲಾಗಿದೆ ಎಂದು ಡಿಎಚ್ಒ ಡಾ| ಪಾಲಾಕ್ಷ ತಿಳಿಸಿದರು.
ಗುರುವಾರ ಹಿರಿಯೂರು ತಾಲೂಕು ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಜಿಲ್ಲಾಡಳಿತದ ನಿರ್ದೇಶನದಂತೆ ಕೋವಿಡ್ ವೈರಸ್ ಹತೋಟಿಗೆ ತರುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಹಿರಿಯೂರು ತಾಲೂಕಿನ ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೂ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಹಾಗೂ ಸೋಂಕಿತ ಪ್ರದೇಶಗಳಿಂದ ಬಂದಿರುವವರ ಪಟ್ಟಿ ಮಾಡುತ್ತಿದ್ದಾರೆ.
ಮನೆಯಲ್ಲಿ ಪ್ರತ್ಯೇಕವಾಗಿ ಆರೋಗ್ಯ ಮಾಹಿತಿ ಶಿಕ್ಷಣ ನೀಡುವುದರ ಜೊತೆಗೆ ಕೆಮ್ಮು, ನೆಗಡಿ, ಶೀತದಂತಹ ಲಕ್ಷಣ ಇರುವವರನ್ನೂ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ| ವೆಂಕಟೇಶ್, ಡಾ| ಕಾಶಿ, ಆಡಳಿತ ವೈದ್ಯಾಧಿಕಾರಿ ಡಾ| ರವಿಕುಮಾರ್, ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ, ಜಾನಕಿ, ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಕ ಹನುಮಂತಪ್ಪ, ಡಾ| ಶ್ರೀದೇವಿ ಇತರರು ಇದ್ದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.