![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 3, 2019, 9:21 PM IST
ಚಿತ್ರದುರ್ಗ: ಮಹಾರಾಷ್ಟ್ರ ಮೂಲದ ಪಾರ್ದಿ ಗ್ಯಾಂಗ್ ಗೆ ಸೇರಿದ ನಾಲ್ವರು ಸುಲಿಗೆಕೋರರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ನ. 25 ರಂದು ಹೊಸದುರ್ಗ ತಾಲೂಕು ಯಲ್ಲಾಬೋವಿಹಟ್ಟಿ ಹಾಗೂ ವೀರವ್ವ ನಾಗತಿಹಳ್ಳಿ ಗ್ರಾಮಗಳಲ್ಲಿ ಮಚ್ಚಿನಿಂದ ಹಲ್ಲೆ ಮಾಡಿ ಮನೆಯೊಂದರಲ್ಲಿ ದರೋಡೆ ಹಾಗೂ ಮನೆಗಳ್ಳತನ ಮಾಡಿರುವ ಬಗ್ಗೆ ದೂರು ದಾಖಲಿಸಿಕೊಂಡು ಕಳ್ಳರಿಗಾಗಿ ಬಲೆ ಬೀಸಿದಾಗ ಸಿಕ್ಕಿಬಿದ್ದಿದ್ದಾರೆ. ಮಾಡದಕೆರೆ ಬಳಿ ಕೆಂಕೆರೆ ಕಡೆ ಹೋಗುವ ರಸ್ತೆಯಲ್ಲಿ ಗುಡ್ಡದ ಮೇಲೆ ಟೆಂಟ್ ಹಾಕಿಕೊಂಡು ವಾಸವಿದ್ದ ಮಹಾರಾಷ್ಟ್ರ ನಾಗಪುರ ಜಿಲ್ಲೆಯ ಅರ್ಜುನ, ಆದಿನಾಗನ ಬೋಸ್ಲೆ, ಪಾರವ್ವ ಹಾಗೂ ಕನಕ ಬಂಧಿತರು.
ಬಂಧಿತರಿಂದ ಕಳ್ಳತನ ಮಾಡಿದ್ದ 33 ಸಾವಿರ ಮೌಲ್ಯದ ಚಿನ್ನಾಭರಣ ಹಾಗೂ ಐದೂವರೆ ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಕಳ್ಳತನಕ್ಕೆ ಬಳಸುತ್ತಿದ್ದ ಹತಾರಗಳು, ಮಚ್ಚು, ಚೂರಿ ಮತ್ತಿತರೆ ಮಾರಕಾಸ್ತ್ರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಹೊಸದುರ್ಗ ಸಿಪಿಐ ಫೈಜುಲ್ಲಾ ನೇತೃತ್ವದಲ್ಲಿ, ಪಿಎಸ್ಐ ಶಿವಕುಮಾರ್, ಪ್ರೊಬೆಷನರಿ ಪಿಎಸ್ಐ ಗಾದ್ರಿಲಿಂಗಪ್ಪ ಹಾಗೂ ವೆಂಕಟೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
You seem to have an Ad Blocker on.
To continue reading, please turn it off or whitelist Udayavani.