ಚಿತ್ರದುರ್ಗ: ಮಾನಸಿಕ ಕಾಯಿಲೆ ನಿವಾರಣೆ ಸಾಧ್ಯ- ಡಾ| ಮಂಜುನಾಥ

ಸಮಾಜದಲ್ಲಿ ಕಳಂಕ ಮತ್ತು ತಾರತಮ್ಯದಿಂದ ಕಾಣಬಾರದು

Team Udayavani, Jun 3, 2024, 5:42 PM IST

ಚಿತ್ರದುರ್ಗ: ಮಾನಸಿಕ ಕಾಯಿಲೆ ನಿವಾರಣೆ ಸಾಧ್ಯ- ಡಾ| ಮಂಜುನಾಥ

■ ಉದಯವಾಣಿ ಸಮಾಚಾರ
ಚಿತ್ರದುರ್ಗ: ಸಂಶೋಧನೆಗಳ ಪ್ರಕಾರ ದೇಶದಲ್ಲಿ ಶೇ. 13.4ರಷ್ಟು ಜನರು ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ.
ಸ್ಕಿಜೋಫ್ರೇನಿಯಾ ಶೇ. 1ರಷ್ಟು ಜನರಲ್ಲಿ ಕಂಡುಬಂದಿದೆ. ಮಾನಸಿಕ ಕಾಯಿಲೆಗಳನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ ಎಂದು ಮನೋವೈದ್ಯ ಡಾ| ಆರ್‌. ಮಂಜುನಾಥ ಹೇಳಿದರು.

ನಗರದ ಕಬೀರಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸ್ಕಿಜೋಫ್ರೇನಿಯಾ ತೀವ್ರತರವಾದ ಮಾನಸಿಕ ಕಾಯಿಲೆಯಾಗಿದ್ದು ಇದರಲ್ಲಿ ರೋಗಿಯು ನೈಜ ಜಗತ್ತಿನ ಜೊತೆಗೆ ಸಂಪರ್ಕದಲ್ಲಿ ಇರುವುದಿಲ್ಲ. ಯೋಚನೆ ಮಾಡುವ ರೀತಿ, ಮಾತನಾಡುವ ರೀತಿಯಲ್ಲಿ ವ್ಯತ್ಯಾಸ ಕಂಡುಬರುತ್ತದೆ. ಸ್ಕಿಜೋಫ್ರೇನಿಯಾದಿಂದ ಬಳಲುವರು ದೈನಂದಿನ ಕಾರ್ಯ ಮತ್ತು ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ವಿಫಲರಾಗುತ್ತಾರೆ. ಸ್ಕಿಜೋಫ್ರೇನಿಯಾ ಕಾಯಿಲೆಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾದ ಚಿಕಿತ್ಸೆ ದೊರೆಯುತ್ತದೆ.

ಉತ್ತಮ ಸಮಾಲೋಚನೆ ಮೂಲಕ ಸಂಪೂರ್ಣವಾಗಿ ಗುಣಮುಖರಾಗಬಹುದು. ನಂತರ ಸಾಮಾನ್ಯರಂತೆ ಜೀವಿಸಬಹುದು. ಈ
ಕಾಯಿಲೆ ಇರುವ ವ್ಯಕ್ತಿಗಳನ್ನು ಸಮಾಜದಲ್ಲಿ ಕಳಂಕ ಮತ್ತು ತಾರತಮ್ಯದಿಂದ ಕಾಣಬಾರದು. ಇವರ ಬಗ್ಗೆ ಹೆಚ್ಚಿನ ಸಹಾನೂಭೂತಿ ತೋರಬೇಕು.

ಮಾನಸಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದರು. ಸ್ಪಿಟ್‌ ಪರ್ಸನಾಲಿಟಿ ಮತ್ತು ಸ್ಕಿಜೋಫ್ರೇನಿಯಾ ಬೇರೆ ಬೇರೆ. ಮೆದುಳಿನಲ್ಲಿ ರಾಸಾಯನಿಕ ಬದಲಾವಣೆಗಳಿಂದ ಒಂದು ನಿರ್ದಿಷ್ಟವಾದ ವಯಸ್ಸಿನಲ್ಲಿ ವ್ಯಕ್ತಿಗೆ ಸ್ಕಿಜೋಫ್ರೇನಿಯಾ ಕಾಯಿಲೆ ಶುರುವಾಗುತ್ತದೆ. ವಿಶೇಷವಾಗಿ ಹದಿಹರೆಯದವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಅವಳಿ ಜವಳಿ ಮಕ್ಕಳಲ್ಲಿ ಒಂದು ಮಗು ಸ್ಕಿಜೋಫ್ರೇನಿಯಾಗೆ ತುತ್ತಾದರೆ ಇನ್ನೊಂದು ಮಗುವು ರೋಗಕ್ಕೆ ಒಳಗಾಗುವ ಸಂಭವ ಇರುತ್ತದೆ. ಸರ್ಕಾರದಿಂದ ಮಾನಸಿಕ
ಕಾಯಿಲೆಯಿಂದ ಬಳಲುವವರಿಗಾಗಿ ಟೆಲಿ ಮಾನಸ ಉಚಿತ ಸಹಾಯವಾಣಿ ಸಂಖ್ಯೆ 14416 ಆರಂಭಿಸಲಾಗಿದೆ. ಈ ಸಂಖ್ಯೆಗೆ ಕರೆ ಮಾಡಿ ಆಪ್ತ ಸಮಾಲೋಚನೆ ಪಡೆಯಬಹುದು ಎಂದು ತಿಳಿಸಿದರು.

ಕಬೀರಾನಂದ ಮಠದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಮಾತನಾಡಿ, ಋಷಿಗಳು ಹೇಳಿದಂತೆ ಮನಸ್ಸು ದೇಹದಲ್ಲಿ ಅತಿ ಮುಖ್ಯವಾದ ಭಾಗ. ತಾಯಿಬೇರಿನಂತೆ ಮನಸ್ಸು ಎಲ್ಲದಕ್ಕೂ ಮೂಲ. ಆಕಾಶ, ಗಾಳಿ ಸೇರಿ ಮನಸ್ಸು ಸೃಷ್ಟಿಯಾಗಿದೆ. ವಾಯುವಿನಂತೆ ಮನಸ್ಸು ಸಂಚರಿಸುತ್ತದೆ, ಆದರಿಂದ ಚಂಚಲವಾಗಿರುತ್ತದೆ. ಮಾನಸಿಕ ಕಾಯಿಲೆಯಿಂದ ಬಳಲುವವರು ಬಹಳಷ್ಟು ಜನರಿದ್ದು, ಕಾಯಿಲೆಯ ಪರಿಹಾರಕ್ಕೆ ಅನೇಕ ಚಿಕಿತ್ಸೆಗಳಿವೆ ಎಂದು ಹೇಳಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ| ಜಿ.ಒ. ನಾಗರಾಜ ಮಾತನಾಡಿ, ಸ್ಕಿಜೋಫ್ರೇನಿಯಾ ಎನ್ನುವುದನ್ನು ಕನ್ನಡದಲ್ಲಿ ಚಿತ್ತ ಚಂಚಲತೆ ಅಥವಾ ಚಿತ್ತ ವಿಕಲತೆ ಎಂದು ಕರೆಯುತ್ತೇವೆ. ಕಾಯಿಲೆ ಇರುವ ವ್ಯಕ್ತಿಗೆ ಕಾಯಿಲೆಯ ಬಗ್ಗೆ ಅರಿವು ಇರುವುದಿಲ್ಲ, ಭ್ರಮೆ ಮತ್ತು ಭ್ರಾಂತಿ ಇರುತ್ತವೆ. ಯಾರಿಗೂ ಕಾಣದ ವಸ್ತುಗಳು ದೃಶ್ಯವನ್ನು ಕಾಣುವುದು, ಯಾರಿಗೂ ಕೇಳಿಸದ ಧ್ವನಿಗಳು ಕೇಳುವುದು, ಅನುಮಾನ ಅಥವಾ ಸಂಶಯಪಡುವುದು, ವಿಚಿತ್ರವಾಗಿ ವರ್ತಿಸುವುದು ಮುಂತಾದ ಲಕ್ಷಣಗಳು ಕಂಡುಬರುತ್ತವೆ ಎಂದರು. ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಅಭಿನವ್‌ ಡಿ.ಎಂ., ತಾಲೂಕು ಆರೋಗ್ಯಾಧಿಕಾರಿ ಡಾ| ಬಿ.ವಿ. ಗಿರೀಶ್‌, ಪ್ರಾಂಶುಪಾಲರಾದ ಸಿ.ಎಲ್‌. ನಿರಂಜನಮೂರ್ತಿ, ಟಿ. ಗಿರೀಶ್‌, ನರ್ಸಿಂಗ್‌ ಕಾಲೇಜಿನ ಪ್ರಾಚಾರ್ಯೆ ಎಸ್‌. ವಿಶಾಲ ಭಾಗವಹಿಸಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.