ಕಪ್ಪುಪಟ್ಟಿ ಧರಿಸಿ ಶಿಕ್ಷಕರು ಕೆಲಸಕ್ಕೆ ಹಾಜರ್
Team Udayavani, Oct 22, 2021, 2:34 PM IST
ಚಿತ್ರದುರ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆಒತ್ತಾಯಿಸಿ ಜಿಲ್ಲೆಯಾದ್ಯಂತ ಶಿಕ್ಷಕರು ಅ. 21ರಗುರುವಾರದಿಂದ ಕಪ್ಪುಪಟ್ಟಿ ಧರಿಸಿ ಕರ್ತವ್ಯನಿರ್ವಹಿಸಲು ಆರಂಭಿಸಿದ್ದಾರೆ.ಜಿಲ್ಲೆಯ ಸುಮಾರು ಐದೂವರೆ ಸಾವಿರ ಶಿಕ್ಷಕರುಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಅ. 4ರಿಂದ 21 ರವರೆಗೆ ಗಡುವು ನೀಡಿ ತರಬೇತಿಗಳನ್ನುಬಹಿಷ್ಕರಿಸಲಾಗಿತ್ತು. ಆದರೂ ಸರ್ಕಾರ ಸ್ಪಂದಿಸಿದಹಿನ್ನೆಲೆಯಲ್ಲಿ ಅ. 29 ರವರೆಗೆ ಕಪ್ಪು ಕಟ್ಟಿ ಧರಿಸಿಕರ್ತವ್ಯ ನಿರ್ವಹಿಸಲು ತೀರ್ಮಾನಿಸಿದ್ದಾರೆ.80 ಸಾವಿರ ಸೇವಾನಿರತ ಪದವಿಧರ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಸರ್ಕಾರ ಹಿಂಬಡ್ತಿ ನೀಡಿದೆ.
1 ರಿಂದ 7ನೇ ತರಗತಿಗೆನೇಮಕವಾದ ಶಿಕ್ಷಕರನ್ನು 1 ರಿಂದ 5ನೇ ತರಗತಿಗೆಸೀಮಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿಸೇವಾನಿರತ ಪದವಿಧರ ಶಿಕ್ಷಕರನ್ನು ಕೂಡಲೇ6 ರಿಂದ 8ನೇ ತರಗತಿಗೆ ವಿಲೀನಗೊಳಿಸಬೇಕು.ವೃಂದ ಮತ್ತು ನೇಮಕಾತಿ ನೇಮಗಳ ತಿದ್ದುಪಡಿಮಾಡುವುದು, ಮುಖ್ಯ ಗುರುಗಳಿಗೆ 15, 20, 25ವರ್ಷಗಳ ವೇತನ ಬಡ್ತಿ ನೀಡುವುದು, ನೂತನಪಿಂಚಣಿ ಯೋಜನೆ ರದ್ದುಗೊಳಿಸುವುದು, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿವರ್ಗಾವಣೆ ಮಾಡಬೇಕು, ಗ್ರಾಮೀಣ ಕೃಪಾಂಕಶಿಕ್ಷಕರ ಸಮಸ್ಯೆ ಪರಿಹರಿಸುವುದು, ದೈಹಿಕ ಶಿಕ್ಷಕರಸಮಸ್ಯೆ ಪರಿಹರಿಸುವುದು ಸೇರಿದಂತೆ ಶಿಕ್ಷಕರಹಲವು ಬೇಡಿಕೆಗಳು ಬಾಕಿ ಇದೆ.
ಈಡೇರಿಸಲುಕಳೆದ ಹಲವು ವರ್ಷಗಳಿಂದ ಮನವಿ ಮಾಡಿದ್ದರೂಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರುದೂರಿದರು.ಕಾಲಮಿತಿಯಲ್ಲಿ ಶಿಕ್ಷಕರ ಸಮಸ್ಯೆಗಳನ್ನುಬಗೆಹರಿಸಲು ಶಿಕ್ಷಣ ಇಲಾಖೆ ತೀರ್ಮಾನಕೈಗೊಂಡಿಲ್ಲ. ಆದ್ದರಿಂದ ಅನಿವಾರ್ಯವಾಗಿ ತರಬೇತಿಬಹಿಷ್ಕಾರ, ಕಪ್ಪುಬಟ್ಟೆ ಧರಿಸಿ, ಕರ್ತವ್ಯಕ್ಕೆ ಹಾಜರಾಗಿಪ್ರತಿಭಟಿಸುತ್ತಿದ್ದೇವೆ ಎಂದು ತಿಳಿಸಿದರು.
ರಾಜ್ಯಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷಆರ್. ಮಾರುತೇಶ್, ಪ್ರಧಾನ ಕಾರ್ಯದರ್ಶಿಜಿ.ಟಿ. ಹನುಮಂತಪ್ಪ, ಉಪಾಧ್ಯಕ್ಷರಾದ ಜಿ.ಬಿ.ಮಮತಾ, ದೇವರಾಜಯ್ಯ, ಮಂಜುಳಾಕ್ಷಿ, ಶಿಕ್ಷಕಶಿವಮೂರ್ತಿ, ಸಹಕಾರ್ಯದರ್ಶಿ ಆರ್.ಜಿ. ನಟೇಶ್ಕುಮಾರ್, ಚಂದ್ರಶೇಖರಪ್ಪ, ಟಿ. ಉಷಾ ಮತ್ತಿತರರುಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.