ಕೆರೆಯಲ್ಲಿ ಬಿದ್ದು ಯುವಕ ಸಾವು
Team Udayavani, Dec 18, 2021, 5:07 PM IST
ಹೊಳಲ್ಕೆರೆ: ಬೈಕ್ ಸಹಿತ ಕೆರೆಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಪಟ್ಟಣದಹಿರೆಕೆರೆಯಲ್ಲಿ ಗುರುವಾರ ರಾತ್ರಿ ಜರುಗಿದೆ.ಪಟ್ಟಣದ ಒಂದನೇ ವಾರ್ಡ್ನ ತರಕಾರಿ ವ್ಯಾಪಾರಿ ಮಂಜುನಾಥ ಅವರ ಪುತ್ರಅಭಿಷೇಕ್ (20) ಮೃತ ದುರ್ದೈವಿ.
ಪಟ್ಟಣದ ದಾವಣಗೆರೆ ರಸ್ತೆಯ ಹಿರೆಕೆರೆಯ ಏರಿಯಮೇಲೆ ಬೈಕ್ನಲ್ಲಿ ಸಂಚರಿಸುತ್ತಿದ್ದ ವೇಳೆ ಗುರುವಾರ ರಾತ್ರಿ ಆಕಸ್ಮಿಕವಾಗಿ ಜಾರಿ ಬೈಕ್ಸಹಿತ ಕೆರೆಗೆ ಬಿದ್ದಿದ್ದಾನೆ. ಶುಕ್ರವಾರ ಬೆಳಗ್ಗೆ ಬೈಕ್ ಕೆರೆ ನೀರಿನಲ್ಲಿ ಕಾಣಿಸಿಕೊಂಡ ಮಾಹಿತಿಪಡೆದ ಪೊಲೀಸ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಬೈಕ್ ಸವಾರ ನೀರಿನಲ್ಲಿ ಬಿದ್ದಿರುವಶಂಕೆ ವ್ಯಕ್ತವಾಗಿತ್ತು.
ಅಗ್ಮಿಶಾಮಕ ದಳದವರನ್ನು ಕರೆಸಿ ಶವ ಮೇಲೆಕ್ಕೆ ತೆಗೆಯಲಾಗಿದೆ.ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಭಿಷೇಕ್ನಿಧನದಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.ಹೊಳಲ್ಕೆರೆ ಸುತ್ತಮುತ್ತ ಸುರಿದ ಧಾರಕಾರ ಮಳೆಗೆ ಕೆರೆ ಭರ್ತಿಯಾಗಿದೆ. ಕೆರೆ ಏರಿಗೆತಡೆಗೋಡೆ ನಿರ್ಮಾಣ ಮಾಡಬೇಕಿದ್ದ ಸಣ್ಣ ನೀರಾವರಿ ಇಲಾಖೆ ನಿರ್ಲಕ್ಷé ವಹಿಸಿದೆ.
ಹಲವಾರು ಅಪಘಾತಗಳು ಕೆರೆ ಏರಿಯ ಮೇಲೆ ನಡೆಯುತ್ತಿದ್ದರೂ ಇಲಾಖೆ ಮಾತ್ರಮೌನಕ್ಕೆ ಶರಣಾಗಿದೆ. ಕೆರೆ ರಸ್ತೆಯಲ್ಲಿ ಸಂಚರಿಸುವ ವಾಹನಗಳ ರಕ್ಷಣೆಗೆ ರಸ್ತೆಯ ಪಕ್ಕದಲ್ಲಿಸೂಕ್ತ ಮಾರ್ಗಸೂಚಿ ಹಾಗೂ ತಡೆಗೋಡೆ ನಿರ್ಮಿಸಿಲ್ಲ. ಇದರಿಂದಾಗಿ ಜನರು ಮಾತ್ರಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ
ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್ ಸಿಸಿ ಕೊಠಡಿಯೂ ಶಿಥಿಲ
Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು
Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ
Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Belthangady: ತೋಡಿಗೆ ಅಡಿಕೆ ಮರವೇ ಸಂಕ!
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.