![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Nov 20, 2023, 12:34 PM IST
ಚಿತ್ರದುರ್ಗ: ಕೆಲವೇ ದಿನಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇದೀಗ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಮೊದಲನೇ ಪೋಕ್ಸೋ ಪ್ರಕರಣದಲ್ಲಿ ನ.16 ರಂದು ಹೈಕೋರ್ಟ್ ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ ಮುರುಘಾ ಶ್ರೀಗಳಿಗೆ ಎರಡನೇ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿದೆ.
ನ.16 ರಂದು ಮುರುಘಾ ಶರಣರು ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಆಗಿದ್ದರು. ಬಿಡುಗಡೆಗೆ ಮೊದಲು ಎರಡನೇ ಪೋಕ್ಸೋ ಪ್ರಕರಣದ ಬಾಡಿ ವಾರೆಂಟ್ ಕುರಿತ ವಿಚಾರಣೆ ನಡೆಯುತ್ತಿತ್ತು. ಬೆಳಗ್ಗೆ ಕಾರಾಗೃಹದಿಂದ ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದ ಶ್ರೀಗಳು, ಮಧ್ಯಾಹ್ನದ ವಿಚಾರಣೆಗೆ ಮೊಬೈಲ್ ಮೂಲಕ ವಿಸಿಗೆ ಬಂದಿದ್ದರು.
ಇದನ್ನೂ ಓದಿ:Kantara 2: ಪಂಜುರ್ಲಿ ದೈವದ ಮೂಲದ ಸುತ್ತ ಸಾಗಲಿದೆ ʼಕಾಂತಾರ-2ʼ ಸಿನಿಮಾದ ಕಥೆ?
ವಿಚಾರಣೆ ನಡುವೆಯೇ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನ.18 ರಂದು ನಡೆದ ನ್ಯಾಯಾಲಯ ಕಲಾಪದ ವೇಳೆ ಜಿಲ್ಲಾ ಕಾರಾಗೃಹದ ಬಿಡುಗಡೆ ಪ್ರಕ್ರಿಯೆ ಕುರಿತು ತನಿಖೆಗೆ ಆದೇಶಿಸಲಾಗಿತ್ತು.
ಇದೇ ಪ್ರಕರಣದ ಆದೇಶವನ್ನು ನ.20 ಸೋಮವಾರಕ್ಕೆ ಕಾಯ್ದಿರಿಸಿದ್ದ ನ್ಯಾಯಾಲಯ ನಾಳೆಯೊಳಗೆ ಬಂಧಿಸಿ ಕರೆತರುವಂತೆ ಆದೇಶಿಸಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.