ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ

ಮೇ ಅಂತ್ಯಕ್ಕೆ ರೈಲು ಮಾರ್ಗ ನಿರ್ಮಾಣಕ್ಕೆ ಚಾಲನೆ ನೀಡಲು ಸರ್ಕಾರ ಚಿಂತನೆ

Team Udayavani, Apr 17, 2022, 3:31 PM IST

swadheena

ಚಿತ್ರದುರ್ಗ: ನೂತನ ರೈಲು ಮಾರ್ಗದ ಭೂ ಸ್ವಾಧೀನಕ್ಕೆ ವಿವಿಧ ಇಲಾಖೆ ಅಧಿಕಾರಿಗಳ ತಂಡ ರಚಿಸಿ, ಜಂಟಿ ಸರ್ವೇ ನಡೆಸಿ ಮೊದಲ ಹಂತದ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಹಸ್ತಾಂತರಿಸಲು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಅಪರ ಕಾರ್ಯದರ್ಶಿ ಅನಿಲ್‌ಕುಮಾರ್‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ದಾವಣಗೆರೆ-ಚಿತ್ರದುರ್ಗ- ತುಮಕೂರು ನೂತನ ರೈಲ್ವೆ ಮಾರ್ಗದ ಭೂಸ್ವಾ ಧೀನ ಸ್ಥಿತಿಗತಿ ಕುರಿತು ಸಭೆಯಲ್ಲಿ ಮಾತನಾಡಿದರು. ಕಂದಾಯ, ಭೂಮಾಪನ, ರೈಲ್ವೆ, ಲೋಕೋಪಯೋಗಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ರಚಿಸಿ, ಮೇ ತಿಂಗಳ ಮಧ್ಯದ ವೇಳೆಗೆ ಮೊದಲ ಹಂತದ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಮೇ ಅಂತ್ಯದ ವೇಳೆ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಚಾಲನೆ ನೀಡಲು ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ. ತ್ವರಿತವಾಗಿ ಭೂ ಸ್ವಾಧೀನ ಪ್ರಕ್ರಿಯೆ ಆಗಬೇಕು. ಅಧಿಸೂಚನೆ ಹೊರಡಿಸಿದ ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಂಡು ಸಂತ್ರಸ್ಥರಿಗೆ ಪರಿಹಾರ ವಿತರಿಸಬೇಕು. ಭೂಸ್ವಾಧೀನಕ್ಕೆ ಅಗತ್ಯವಿರುವ 200 ಕೋಟಿ ರೂ. ಪರಿಹಾರ ಧನವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಇದಾದ ನಂತರ ಹಿರಿಯೂರು ತಾಲೂಕಿನಲ್ಲಿ 461.6 ಎಕರೆ ಜಮೀನಿನ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಒಂದು ವಾರದಲ್ಲಿ ಭೂಮಿ ವಶಕ್ಕೆ ಪಡೆದು ಪರಭಾರೆ ಮಾಡಲಾಗುವುದು. ಚಿತ್ರದುರ್ಗ ತಾಲೂಕಿನಲ್ಲಿ 243.29 ಎಕರೆ ಜಮೀನನ್ನು ಭೂಸ್ವಾಧೀನಕ್ಕೆ ಗುರುತಿಸಲಾಗಿದೆ. ರೈಲ್ವೆ ಇಲಾಖೆಯಿಂದ ಹೆಚ್ಚುವರಿ ಭೂಮಿಯನ್ನು ಕೇಳಿದ್ದರಿಂದ, ಎರಡನೇ ಹಂತದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಜೂನ್‌ ಅಂತ್ಯಕ್ಕೆ ಎರಡನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಹಿರಿಯೂರು ತಾಲೂಕಿಗೆ 77 ಕೋಟಿ ರೂಪಾಯಿ ಪರಿಹಾರ ಧನ ಬಿಡುಗಡೆಯಾಗಿದ್ದು, ಸುಮಾರು 49 ಕೋಟಿ ಪರಿಹಾರ ವಿತರಿಸಲಾಗಿದೆ. ಚಿತ್ರದುರ್ಗ ತಾಲೂಕಿನಲ್ಲಿ 183 ಎಕರೆ ಭೂಮಿ ಸ್ವಾಧೀನಕ್ಕೆ ಪರಿಹಾರಧನ ನಿಗದಿಪಡಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ ಶ್ರೀಧರ್‌, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಎನ್‌. ಸತೀಶ್‌ ಬಾಬು, ಭೂದಾಖಲೆ ಇಲಾಖೆ ಉಪನಿರ್ದೇಶಕ ರಾಮಾಂಜನೇಯ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.