ನಾಯಕನಹಟ್ಟಿ ಜಾತ್ರೆಗೆ ಕ್ಷಣಗಣನೆ

ಭಕ್ತ ಸಾಗರದ ಮಧ್ಯೆ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ

Team Udayavani, Mar 20, 2022, 10:15 AM IST

bandi

ನಾಯಕನಹಟ್ಟಿ: ಮಧ್ಯ ಕರ್ನಾಟಕದ ಪ್ರಮುಖ ಜಾತ್ರೆಗಳಲ್ಲಿ ಒಂದಾಗಿರುವ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಭಾನುವಾರ ಜರುಗಲಿದ್ದು, ಸಿದ್ಧತೆ ಭರದಿಂದ ಸಾಗಿದೆ. ಈ ಹಿಂದೆ ಕೊರೊನಾ ಸಂಕಷ್ಟದಲ್ಲೂ ಜಾತ್ರೆ ರದ್ದಾಗಿರಲಿಲ್ಲವಾದರೂ ಕಳೆಗುಂದಿತ್ತು. ಈ ಬಾರಿ ಭಾರೀ ಪ್ರಮಾಣದ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ. ಜಾತ್ರೆಗೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ಸಾರಿಗೆ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಒದಗಿಸಲು ಜಿಲ್ಲಾಡಳಿತ ಎಲ್ಲ ಸಿದ್ಧತೆ ಮಾಡಿಕೊಂಡಿದೆ.

ಪಟ್ಟಣಕ್ಕೆ ರಾಜ್ಯ ಹಾಗೂ ನೆರೆ ರಾಜ್ಯಗಳಿಂದ ಸಾವಿರಾರು ಪಾದಯಾತ್ರಿಗಳು ಆಗಮಿಸಿದ್ದಾರೆ. ದೇವರ ದರ್ಶನಕ್ಕೆ ಹೊರಮಠ ಹಾಗೂ ಒಳಮಠಗಳಲ್ಲಿ ಸರದಿ ಸಾಲಿನ ವ್ಯವಸ್ಥೆ ಮಾಡಲಾಗಿದ್ದು, ಕೊಬ್ಬರಿ ಸುಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 100 ರೂ. ಸಂದಾಯ ಮಾಡಿದರೆ ನೇರ ದರ್ಶನ ಪಡೆಯಬಹುದು. ನೆರಳಿಗಾಗಿ ಬೃಹತ್‌ ಚಪ್ಪರ, ವೀಕ್ಷಣೆಗೆ ಎಲ್‌ಇಡಿ ಸ್ಕ್ರೀನ್ ಗಳನ್ನು ಅಳವಡಿಸಲಾಗಿದೆ. ಎರಡೂ ದೇವಾಲಯಗಳಲ್ಲಿ ವಿಶೇಷ ಪುಷ್ಪಾಲಂಕಾರ ಹಾಗೂ ವಿದ್ಯುತ್‌ ಅಲಂಕಾರ ಮಾಡಲಾಗಿದ್ದು ಜನರ ಗಮನ ಸೆಳೆಯುತ್ತಿದೆ.

ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಒದಗಿಸಲು 50 ಟ್ಯಾಂಕರ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ. ನಗರಸಭೆ, ಪುರಸಭೆ, ಅರಣ್ಯ ಇಲಾಖೆ, ಗ್ರಾಪಂಗಳ ಟ್ಯಾಂಕರ್‌ಗಳು ನೀರು ಸರಬರಾಜು ಮಾಡಲಿವೆ. ಇವುಗಳ ಜತೆಗೆ ತಲಾ 16 ಸಾವಿರ ಲೀಟರ್‌ ಸಾಮರ್ಥ್ಯದ ನಂದಿನಿ ಹಾಲಿನ 4 ಟ್ಯಾಂಕರ್‌ಗಳು ನೀರು ಒದಗಿಸಲಿವೆ. ಪಟ್ಟಣದ ನಾಲ್ಕು ಕಡೆಗಳಲ್ಲಿ ಟ್ಯಾಂಕರ್‌ ಗಳಿಗೆ ನೀರು ಪೂರೈಸಲು ಬೋರ್‌ ವೆಲ್‌ಗ‌ಳನ್ನು ಗುರುತಿಸಲಾಗಿದ್ದು, ನಿರಂತರ ವಿದ್ಯುತ್‌ ಪೂರೈಸಲಾಗುತ್ತಿದೆ. ಮೂರು ದಿನಗಳ ಕಾಲ ನಿರಂತರ ವಿದ್ಯುತ್‌ ಪೂರೈಕೆಗೆ ಬೆಸ್ಕಾಂ ಸಿದ್ಧತೆ ಮಾಡಿಕೊಂಡಿದೆ.

ಆರೋಗ್ಯ ಇಲಾಖೆ 20 ವೈದ್ಯರು ಸೇರಿದಂತೆ 150 ಸಿಬ್ಬಂದಿಗಳನ್ನು ನಿಯೋಜಿಸಿದೆ. ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ, ಸಮುದಾಯ ಆಸ್ಪತ್ರೆ ಹಾಗೂ ಎಂಟು ಆಂಬ್ಯುಲೆನ್ಸ್‌ಗಳು ಸೇವೆಗೆ ಸಿದ್ಧವಾಗಿವೆ. ಹೊರಮಠ, ಒಳಮಠ ಒಳಗೊಂಡು 5 ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಕೇಂದ್ರದಲ್ಲಿ ಒಬ್ಬ ವೈದ್ಯ, ಒಬ್ಬ ಫಾರ್ಮಾಸಿಸ್ಟ್‌, ಒಬ್ಬ ಡಿ ಗ್ರೂಪ್‌ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಜತೆಗೆ ಕೊರೊನಾ ಲಸಿಕೆ ಜಾಗೃತಿ ಹಾಗೂ ಲಸಿಕೆ ವಿತರಣೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ರಸ್ತೆ ಸಾರಿಗೆ 150ಕ್ಕೂ ಹೆಚ್ಚು ಬಸ್‌ಗಳ ವಿಶೇಷ ವ್ಯವಸ್ಥೆ ಒದಗಿಸಲಿದೆ. ದಾವಣಗೆರೆ, ಜಗಳೂರು, ಚಿತ್ರದುರ್ಗ, ಚಳ್ಳಕೆರೆ, ತಳಕುದಿಂದ ಬಸ್‌ ಸಂಚರಿಸಲಿವೆ. ಇದಕ್ಕಾಗಿ ತಾತ್ಕಾಲಿಕ ಬಸ್‌ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿವೆ. ಜನರ ಸಂಖ್ಯೆಯನ್ನು ಆಧರಿಸಿ ಬಸ್‌ಗಳು ಸಿದ್ಧವಿರಲಿವೆ. ಇದರ ಜತೆಗೆ ಪ್ರತಿದಿನ ಸಂಚರಿಸುವ ಖಾಸಗಿ ಬಸ್‌ಗಳು ಎಂದಿನಂತೆ ಸಂಚಾರ ಮಾಡಲಿವೆ.

ಸಿಹಿತಿಂಡಿಗಳು, ಮಕ್ಕಳ ಆಟಿಕೆಗಳು, ಕಾಯಿ, ಬಾಳೆಹಣ್ಣು ಸೇರಿದಂತೆ ನೂರಾರು ಅಂಗಡಿ ಮುಂಗಟ್ಟುಗಳು ಜಾತ್ರೆಗೆ ಸಿದ್ಧಗೊಂಡಿವೆ. ಬೆಳಗ್ಗೆ 10ಕ್ಕೆ ಚಿಕ್ಕ ರಥೋತ್ಸವ ಹಾಗೂ ಮಧ್ಯಾಹ್ನ 3:30ಕ್ಕೆ ಚಿತ್ತಾ ನಕ್ಷತ್ರದಲ್ಲಿ ದೊಡ್ಡ ರಥೋತ್ಸವ ಜರುಗಲಿವೆ. 400ಕ್ಕೂ ಹೆಚ್ಚು ಕಲಾವಿದರು ಜಾತ್ರೆಗೆ ಮೆರುಗು ನೀಡಲಿದ್ದಾರೆ. ಸಚಿವ ಬಿ. ಶ್ರೀರಾಮುಲು, ಶಾಸಕ ಟಿ. ರಘುಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಸೇರಿದಂತೆ ಜನಧಿಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.