ದೇಶದ ಮೊದಲ ಮಾನವ ರಹಿತ ವಿಮಾನ ಹಾರಾಟ ಚಿತ್ರದುರ್ಗದಲ್ಲಿ ಯಶಸ್ವಿ

ನಾಯಕನಹಟ್ಟಿ ಸಮೀಪದ ವೈಮಾನಿಕ ಪರೀಕ್ಷಾ ಕ್ಷೇತ್ರದಲ್ಲಿ ಹಾರಾಟ : ಸ್ವಾವಲಂಬನೆಯತ್ತ ಮೊದಲ ಹೆಜ್ಜೆ

Team Udayavani, Jul 1, 2022, 11:52 PM IST

thumb 5 artificial

ನಾಯಕನಹಟ್ಟಿ: ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಯು ಇಲ್ಲಿಗೆ ಸನಿಹದ ವೈಮಾನಿಕ ಪರೀಕ್ಷಾ ಕ್ಷೇತ್ರ (ಎಟಿಆರ್‌)ದಲ್ಲಿ ನಡೆಸಿದ ದೇಶದ ಮೊದಲ ಸ್ವಾಯತ್ತ ಮಾನವರಹಿತ ವಿಮಾನ (ಯುಎವಿ)ದ ಹಾರಾಟ ಶುಕ್ರವಾರ ಯಶಸ್ವಿಯಾಗಿ ನಡೆಯಿತು.

ಬೆಳಗ್ಗೆ 6.15ಕ್ಕೆ ಆರಂಭವಾದ ಈ ವಿಶಿಷ್ಟ ಪರೀಕ್ಷೆ 15 ನಿಮಿಷಗಳ ಕಾಲ ಜರಗಿತು. ದೊಡ್ಡ ಪ್ರಮಾಣದ ಚಾಲಕ ರಹಿತ ವಿಮಾನ ಹಾರಾಟದತ್ತ ಪ್ರಥಮ ಹೆಜ್ಜೆಯಾದ ಈ ವಿಮಾನ ಹಾರಾಟ ಪರೀಕ್ಷೆಯಿಂದ ದೇಶವು ಚಾಲಕ ರಹಿತ ವಿಮಾನ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾ ಧಿಸು ವತ್ತ ಪ್ರಥಮ ಯಶಸ್ವೀ ಹೆಜ್ಜೆ ಇರಿಸಿದಂತಾಗಿದೆ. ಇದಕ್ಕೆ ಮುನ್ನ ಗುರುವಾರ ರನ್‌ವೇಯಲ್ಲಿ ವಿಮಾನವನ್ನು ಪೂರ್ಣ ಪ್ರಮಾಣದ ಪ್ರಯೋಗಕ್ಕೆ ಒಳಪಡಿಸಲಾಗಿತ್ತು.
ಶುಕ್ರವಾರ ಬೆಳಗ್ಗೆ 3 ಕಿ.ಮೀ. ಉದ್ದದ ರನ್‌ ವೇಯಿಂದ ಪೈಲಟ್‌ ಇಲ್ಲದೆ ಹಾರಿದ ವಿಮಾನ ಸರಾಗವಾಗಿ ಸತತ 15 ನಿಮಿಷ ಕಾಲ ಹಾರಾಟ ನಡೆಸಿತು. ರನ್‌ ವೇಯಿಂದ ಹೊರಟ ವಿಮಾನ ವಿವಿಧ ದಿಕ್ಕುಗಳೆಡೆ ಚಲನೆ, ಹಾರಾಟ ಮತ್ತು ಇಳಿಯುವಿಕೆಯಲ್ಲಿ ನಿಖರತೆ ಪ್ರದರ್ಶಿಸಿತು.

ಆತ್ಮನಿರ್ಭರ ಪ್ರಯತ್ನಕ್ಕೆ ಪೂರಕ
ಪ್ರಧಾನಿ ಮೋದಿ ಅವರ ಕನಸಾದ ರಕ್ಷಣ ಕ್ಷೇತ್ರದಲ್ಲಿ ಆತ್ಮನಿರ್ಭರ ಪ್ರಯತ್ನಕ್ಕೆ ಈ ಪರೀಕ್ಷೆ ಪೂರಕವಾಗಿದೆ. ಮೊದಲ ಹಂತದಲ್ಲಿ 15 ನಿಮಿಷ, ಅನಂತರ 30 ನಿಮಿಷ, ಬಳಿಕ ಸತತ 24 ತಾಸು ಹಾರುವ ಕ್ಷಮತೆಯ ಪರೀಕ್ಷೆ ನಡೆಸಲಾಗುತ್ತದೆ. ಅನಂತರದ ಹಂತದಲ್ಲಿ ವಿಮಾನದ ಗಾತ್ರವನ್ನು ಹೆಚ್ಚಿಸಲಾಗುತ್ತದೆ. ಇದೇ ಕೇಂದ್ರದಲ್ಲಿ ರುಸ್ತುಂ 1 ಮತ್ತು ರುಸ್ತುಂ 2 ಚಾಲಕ ವಿಮಾನ ಹಾರಾಟಗಳು ಯಶಸ್ವಿಯಾಗಿದ್ದವು. ಈ ತಂತ್ರಜ್ಞಾನವನ್ನು ಡಿಆರ್‌ಡಿಒದ ಅಂಗ ಸಂಸ್ಥೆ ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಎಸ್ಟಾಬ್ಲಿಷ್‌ಮೆಂಟ್‌ (ಎಡಿಇ) ಅಭಿವೃದ್ಧಿಪಡಿಸಿದೆ.
ಚಾಲಕ ರಹಿತ ವಿಮಾನ ಯಶಸ್ವಿಯಾಗಿ ಹಾರಾಡಿ ಮರಳುತ್ತಿದ್ದಂತೆ ಎಟಿಆರ್‌ ಸಿಬಂದಿ ಮತ್ತು ತಾಂತ್ರಿಕ ಸಿಬಂದಿ ಹರ್ಷದಿಂದ ಕುಣಿದು ಕುಪ್ಪಳಿಸಿದರು, ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು.

ರಾಜನಾಥ ಸಿಂಗ್‌ ಅಭಿನಂದನೆ
ಪ್ರಯೋಗ ಯಶಸ್ವಿ ಆಗುತ್ತಿದ್ದಂತೆ ರಕ್ಷಣ ಸಚಿವ ರಾಜನಾಥ ಸಿಂಗ್‌ ಅವರು ತಂತ್ರಜ್ಞರನ್ನು ಅಭಿನಂದಿಸಿದ್ದಾರೆ. ಚಾಲಕ ರಹಿತ ವಿಮಾನ ಅಭಿವೃದ್ಧಿಗೆ ಇದು ದಾರಿ ಮಾಡಿ ಕೊಡಲಿದೆ. ಅತ್ಯಂತ ಕಠಿನ ಮಿಲಿಟರಿ ಪರಿಸ್ಥಿತಿಗಳಲ್ಲಿ ಆತ್ಮನಿರ್ಭರ ಭಾರತಕ್ಕೆ ಇದು ಸಹಾಯಕಾರಿ ಆಗಲಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಡಿಆರ್‌ಡಿಒ ಚೇರ್ಮನ್‌, ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಕಾರ್ಯದರ್ಶಿ ಡಾ| ಜಿ. ಸತೀಶ್‌ ರೆಡ್ಡಿ ಕೂಡ ತಂತ್ರಜ್ಞಾನದ ಯೋಜನೆಯ ರೂಪಿಸುವಿಕೆ, ಅಭಿವೃದ್ಧಿ ಮತ್ತು ಪ್ರಯೋಗದಲ್ಲಿ ಭಾಗಿಯಾದ ಸಿಬಂದಿಯನ್ನು ಅಭಿನಂದಿಸಿದ್ದಾರೆ.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.