![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 17, 2020, 11:09 AM IST
ಮೊಳಕಾಲ್ಮೂರು: ಪಟ್ಟಣದ ಮಾರುತಿ ಬಡಾವಣೆಯಲ್ಲಿ ನಡೆದ ಮದುವೆಗೆ ಹೊಸಪೇಟೆಯಿಂದ ಬಂದಿದ್ದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಎಂದು ವರದಿ ಹಿನ್ನೆಲೆಯಲ್ಲಿ ಮದುವೆ ಮಾಡಿದ ಮನೆಯವರು ಹೋಂ ಕ್ವಾರಂಟೈನ್ನಲ್ಲಿರಬೇಕೆಂದು ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಶ್ರೀನಿವಾಸ್ ಸೂಚನೆ ನೀಡಿದರು.
ಮಾರುತಿ ಬಡಾವಣೆಯ ಮನೆಯೊಂದರಲ್ಲಿ ಕಳೆದ ಜು. 10 ರಂದು ಮದುವೆ ನಡೆದಿತ್ತು. ಈ ಮದುವೆಗೆ ಹೊಸಪೇಟೆಯ 45 ವರ್ಷದ ವ್ಯಕ್ತಿಯೊಬ್ಬ ಆಗಮಿಸಿ ಎರಡು ದಿನ ಉಳಿದುಕೊಂಡು ಹೋಗಿದ್ದ. ಈ ಬಡಾವಣೆಗೆ ಹೊಸದಾಗಿ ಬಂದ ವ್ಯಕ್ತಿಯೆಂದು ಆಶಾ ಕಾರ್ಯಕರ್ತೆಯರು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಥರ್ಮಲ್ ಸ್ಕ್ರೀನಿಂಗ್ ಮಾಡಿಸಿ ಗಂಟಲು ದ್ರವ ಮತ್ತು ರಕ್ತದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿದ್ದರು. ವರದಿಯಲ್ಲಿ ಈ ವ್ಯಕ್ತಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಹೊಸಪೇಟೆಯಿಂದ ಬಂದ ವ್ಯಕ್ತಿ ಜಿಂದಾಲ್ ಫ್ಯಾಕ್ಟರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರ ಗಮನಕ್ಕೆ ತಂದು ಜಿಂದಾಲ್ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿದೆ. ಮದುವೆ ಮನೆಯಲ್ಲಿರುವ ಒಂದು ಮಗು ಸೇರಿ ಒಟ್ಟು 11 ಜನರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಹೋಂ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿದೆ. ಈ 11 ಜನರ ಗಂಟಲು ದ್ರವ ಹಾಗೂ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಶ್ರೀನಿವಾಸ್ ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಮೇಲ್ವಿಚಾರಕ ವೈ. ತಿಪ್ಪೇಶ್, ಆರೋಗ್ಯ ಸಹಾಯಕ ಶ್ರೀನಿವಾಸ್ ಮೊದಲಾದವರು ಇದ್ದರು. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಲ್ಲಿಕಾರ್ಜುನ, ಶಿರಸ್ತೇದಾರ ಏಳುಕೋಟಿ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
You seem to have an Ad Blocker on.
To continue reading, please turn it off or whitelist Udayavani.