ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಯಪಡೆ ರಚನೆ


Team Udayavani, Aug 13, 2019, 3:04 PM IST

cd-tdy-1

ಚಿತ್ರದುರ್ಗ: ಮೆದೇಹಳ್ಳಿ ಗ್ರಾಪಂ ಕಚೇರಿಯಲ್ಲಿ ನಡೆದ ಜನಸಂಪರ್ಕ ಸಭೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ ಉದ್ಘಾಟಿಸಿದರು.

ಚಿತ್ರದುರ್ಗ: ಸಾಮಾಜಿಕ ಪಿಡುಗಾಗಿರುವ ಬಾಲಕಾರ್ಮಿಕ ಮತ್ತು ಬಾಲ್ಯವಿವಾಹ ಪದ್ಧತಿಗಳನ್ನು ನಿರ್ಮೂಲನೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಚುನಾಯಿತ ಪ್ರತಿನಿಧಿಗಳು ಹಾಗೂ ಸಮುದಾಯದ ಸಹಭಾಗಿತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ ಹೇಳಿದರು.

ಮೆದೇಹಳ್ಳಿ ಗ್ರಾಮ ಪಂಚಾಯತ್‌ದಲ್ಲಿ ಶಿಕ್ಷಣ ಇಲಾಖೆ, ವಿಮುಕ್ತಿ ವಿದ್ಯಾಸಂಸ್ಥೆ, ಚಿತ್ರ ಡಾನ್‌ಬಾಸ್ಕೋ ಮತ್ತು ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆ ವತಿಯಿಂದ ಆಯೋಜಿಸಿದ್ದ ಬಾಲ್ಯವಿವಾಹ ತಡೆಗಾಗಿ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿಗೂ ನಮ್ಮ ನಡುವೆ ಬಾಲಕಾರ್ಮಿಕರು ಕಾಣಿಸಿಕೊಳ್ಳುತ್ತಿದ್ದಾರೆ. ಎಳೆಯ ವಯಸ್ಸಿನ ಮಕ್ಕಳನ್ನು ದುಡಿಯಲು ಹಚ್ಚುವುದು ಹಾಗೂ ದುಡಿಸಿಕೊಳ್ಳುವುದು ಅಪರಾಧ. ಅದೇ ರೀತಿ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮದುವೆ ಮಾಡುವುದು ಕೂಡಾ ಶಿಕ್ಷಾರ್ಹ ಅಪರಾಧವಾಗಿದ್ದು ಈ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕಿದೆ. ಜತೆಗೆ ಇಂತಹ ಘಟನೆಗಳು ಕಣ್ಣಿಗೆ ಬಿದ್ದಾಗ ತಡೆಯುವುದು ಎಲ್ಲರ ಕರ್ತವ್ಯ ಎಂದರು.

ಮಕ್ಕಳ ಹಕ್ಕುಗಳ ಆಯೋಗದ ಮಾಜಿ ಸದಸ್ಯೆ ಕೆ.ಬಿ. ರೂಪ ನಾಯಕ್‌ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸರ್ಕಾರ ಹಲವು ಕಾನೂನುಗಳನ್ನು ರೂಪಿಸಿದೆ. ಆದರೂ ಮಕ್ಕಳನ್ನು ಶಾಲೆಯಿಂದ ಹೊರಗೆ ನೋಡಬೇಕಾದ ಪರಿಸ್ಥಿತಿ ಇರುವುದು ಆಶ್ಚರ್ಯಕರ ಸಂಗತಿ. ಆದ್ದರಿಂದ ಪ್ರತಿಯೊಬ್ಬರು ಮಕ್ಕಳನ್ನು ಶಾಲೆಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.

ದೆಹಲಿ ಸರ್ಕಾರ, ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಂತಲೂ ಅದ್ಭುತವಾಗಿ ರೂಪಿಸಿದೆ. ಸರ್ಕಾರಿ ಶಾಲೆಗಳಿಗೆ ವಿಶೇಷ ಕಟ್ಟಡಗಳ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಮೈದಾನ ವ್ಯವಸ್ಥೆ ಮಾಡಿಕೊಟ್ಟಿದೆ. ಅಲ್ಲದೆ ಎಸಿಯನ್ನು ಶಾಲಾ ಕೊಠಡಿಗಳಿಗೆ ಅಳವಡಿಸಿರುವುದರಿಂದ ಯಾರೂ ಸಹ ಖಾಸಗಿ ಶಾಲೆಗಳಿಗೆ ಸೇರಿಸುವುದಿಲ್ಲ. ಆದ್ದರಿಂದ ಎಲ್ಲಾ ಸರ್ಕಾರಿ ಶಾಲೆಗಳು ಅತ್ಯುತ್ತಮ ಶಾಲೆಗಳಾಗಿ ಪರಿವರ್ತನೆ ಆಗಬೇಕಿದೆ ಎಂದರು.

ಮೆದೇಹಳ್ಳಿ ಗ್ರಾಪಂ ಅಧ್ಯಕ್ಷ ಉಜ್ಜನಿಸ್ವಾಮಿ, ಶಾಂತಿ ಮತ್ತು ಸೌಹಾರ್ದ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‌ಕುಮಾರ್‌, ಚಿತ್ರ ಡಾನ್‌ಬಾಸ್ಕೋ ಸಂಸ್ಥೆಯ ಫಾದರ್‌ ಸೋನಿ ಮ್ಯಾಥ್ಯು, ವೀಣಾ, ಮಂಜುನಾಥ್‌ ವಿಮುಕ್ತಿ ವಿದ್ಯಾಸಂಸ್ಥೆಯ ಕುಮಾರ್‌, ಅರಣ್ಯಸಾಗರ್‌, ಬಿಆರ್‌ಸಿ ಮೀನಾಕ್ಷಿ, ಈಶ್ವರಪ್ಪ, ಗ್ರಾಪಂ ಮಾಜಿ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baby 2

Darshan & ಗ್ಯಾಂಗ್ ನಿಂದ ಹ*ತ್ಯೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಮಗು ಜನನ

Chitradurga: ಸಿದ್ದರಾಮಯ್ಯ ಸಂಕಟ ಬಂದಾಗ ಜಾತಿ ಮುಂದೆ ತರುತ್ತಾರೆ: ಸಿ.ಟಿ ರವಿ

Chitradurga: ಸಿದ್ದರಾಮಯ್ಯ ಸಂಕಟ ಬಂದಾಗ ಜಾತಿ ಮುಂದೆ ತರುತ್ತಾರೆ: ಸಿ.ಟಿ ರವಿ

13-bharamasagara

Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ

Chitradurga: Muruga shree granted bail

Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.