ಡಿಸಿ ಸೂಚನೆ: ನಗರಸಭೆಯಿಂದ ಅಕ್ರಮ ಗೂಡಂಗಡಿ ತೆರವು


Team Udayavani, Aug 4, 2017, 2:47 PM IST

04-CHIT-3.jpg

ಚಿತ್ರದುರ್ಗ: ನಗರದ ರೋಟರಿ ಕ್ಲಬ್‌ ಮುಂಭಾಗದಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಗೂಡಂಗಡಿಗಳನ್ನು ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ನಗರಸಭೆ ಸಿಬ್ಬಂದಿ ಗುರುವಾರ ತೆರವುಗೊಳಿಸಿದರು.

ನಗರದ ಕಾಂಗ್ರೆಸ್‌ ಕಚೇರಿ ಮುಂಭಾಗದಲ್ಲಿ ಕಳೆದ ಮೂರು ತಿಂಗಳ ಹಿಂದೆ ಏಕಾಏಕಿ ಅಕ್ರಮವಾಗಿ ಗೂಡಂಗಡಿಗಳು ತಲೆ ಎತ್ತಿದ್ದವು. ಈ ಬಗ್ಗೆ ಸಾರ್ವಜನಿಕರ ದೂರುಗಳು ಕೇಳಿಬಂದಿದ್ದವು. ರೋಟರಿ ಭವನ ಮುಂಭಾಗದ ರಸ್ತೆಯ ಅಕ್ಕ ಪಕ್ಕದಲ್ಲಿ ಹೆಚ್ಚಿನ ಜನಸಂದಣಿಯಿದ್ದು ಗೂಡಂಗಡಿಗಳಿಗೆ
ತೆರಳುವಾಗ ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದರಿಂದ ಸಾರ್ವಜನಿಕರು ದಿನ ನಿತ್ಯ ಕಿರಿಕಿರಿ ಅನುಭವಿಸುತ್ತಿದ್ದರು. ಅಲ್ಲದೆ ಈ ಜಾಗದಲ್ಲಿ ಒಂದು ಉದ್ಯಾನವನವಿದ್ದು ಅದನ್ನು ಸಂಪೂರ್ಣ ಮುಚ್ಚಿ ಹೋಗುವ ಮಾದರಿಯಲ್ಲಿ ಸಾಲಾಗಿ ಗೂಡಂಗಡಿಗಳು ತಲೆ ಎತ್ತಿದ್ದವು. ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯ ಜೋತ್ಸಾ° ಅಧಿಕಾರ ವಹಿಸಿಕೊಂಡ ಬಳಿಕ ನಗರ ಪ್ರದಕ್ಷಿಣೆ ಮಾಡಿದ್ದರು. ರಸ್ತೆ ಪಕ್ಕದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಗೂಡಂಗಡಿಗಳನ್ನು ತೆರವುಗೊಳಿಸುವಂತೆ ಆದೇಶ ಹೊರಡಿಸಿದ್ದರು. ಇದರಿಂದ ಪುಟ್‌ಪಾತ್‌ ಮೇಲಿನ ಗೂಡಂಗಡಿಗಳ ತೆರವು ಕಾರ್ಯ
ಮುಂದುವರೆದಿದೆ. 

ಜಿಲ್ಲಾಧಿಕಾರಿಯವರ ಕ್ರಮದಿಂದಾಗಿ ಜನರಿಗೆ ಪುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗಲು ಅನುಕೂಲವಾಗಿದೆ. ಅಲ್ಲದೆ ನಗರ ಸುಂದರವಾಗಿ ಕಾಣಲು ಸಹಕಾರಿಯಾಗಿದೆ. ಬೆಳಗ್ಗೆಯಿಂದಲೇ ನಗರಸಭೆ ಸಿಬ್ಬಂದಿಗಳು ಗೂಡಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಿದರು. 

ಸರ್ಕಾರಿ ಆಸ್ಪತ್ರೆಯ ಬಸ್‌ನಿಲ್ದಾಣದಿಂದ ತುರುವನೂರು ರಸ್ತೆ ಮಾರ್ಗವಾಗಿ ಆರ್‌ಟಿಒ ಕಚೇರಿ ಮುಂಭಾಗದಲ್ಲಿ ಸಾಕಷ್ಟು ಗೂಡಂಗಡಿಗಳಿವೆ. ಜಿಲ್ಲಾಧಿ  ಕಾರಿಯವರು ಅಲ್ಲಿನ ಗೂಡಂಗಡಿಗಳನ್ನೂ ತೆರವುಗೊಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪರ್ಯಾಯ ವ್ಯವಸ್ಥೆಗೆ ವ್ಯಾಪಾರಸ್ಥರ ಆಗ್ರಹ
ಚಿತ್ರದುರ್ಗ: ರೋಟರಿ ಕ್ಲಬ್‌ ಮುಂಭಾಗದಲ್ಲಿದ್ದ ಗೂಡಂಗಡಿಗಳನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ಹಾಗೂ ಪರ್ಯಾಯ ವ್ಯವಸ್ಥೆ ಮಾಡುವಂತೆ ಗೂಡಂಗಡಿಗಳ ಮಾಲೀಕರು ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಜಿಲ್ಲಾಇಕಾರಿಯವರ ಸೂಚನಾದೇಶದ ಮೇರೆಗೆ ನಗರಸಭೆ ಸಿಬ್ಬಂದಿ ಗೂಡಂಗಡಿ ತೆರವು ಕಾರ್ಯಾಚರಣೆ ನಡೆಸಿದೆ. ಏಕಾಏಕಿ ತೆರವು ಕಾರ್ಯ ಮಾಡಿದ್ದರಿಂದ ಜೀವನ ನಿರ್ವಹಣೆಗೆ ಚಿಂತೆಯಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಕಾರ್ಯಕ್ಕೆ ಮುಂದಾಗಬೇಕಿತ್ತು ಎಂದು ಸಂತ್ರಸ್ತರು ಜಿಲ್ಲಾಧಿಕಾರಿಗಳ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಗೂಡಂಗಡಿಗಳಿಂದ ಬರುತ್ತಿದ್ದ ಆದಾಯದಲ್ಲಿ ಜೀವನ ಕಟ್ಟಿಕೊಂಡಿದ್ದೇವೆ. ಪದೇ ಪದೇ ಗೂಡಂಗಡಿಗಳ ತೆರವು ಕಾರ್ಯ ಮಾಡಿದರೆ ಹತ್ತಾರು ಸಾವಿರ ರೂ. ಗಳನ್ನು ಖರ್ಚು ಮಾಡಿ ಗೂಡಂಗಡಿಗಳನ್ನು ನಿರ್ಮಿಸಿರುತ್ತೇವೆ. ಈ ಸಾಲದ ಹೊರೆ, ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆ
ಕಷ್ಟವಾಗಲಿದೆ ಎಂದು ನೋವು ತೋಡಿಕೊಂಡರು. ಜಿಲ್ಲಾ ಕೇಂದ್ರಕ್ಕೆ ಅದರಲ್ಲೂ ಜಿಲ್ಲಾಧಿಕಾರಿ ಕಚೇರಿ ವೃತ್ತ, ಕೋರ್ಟ್‌, ತಾಲೂಕು ಕಚೇರಿಗಳಿಗೆ ಪ್ರತಿದಿನ ಗ್ರಾಮೀಣ ಪ್ರದೇಶಗಳ ನೂರಾರು ಜನ ಆಗಮಿಸುತ್ತಾರೆ. ಕಡಿಮೆ ದರದಲ್ಲಿ ಅವರಿಗೆ ತಿಂಡಿ, ಊಟ ನೀಡುತ್ತೇವೆ. ಅಲ್ಪಸ್ವಲ್ಪ
ಹಣ ತರುವ ರೈತರು, ಬಡವರು ಬೀದಿ ಬದಿಯಲ್ಲೇ ಏನೋ ತಿಂದು ಹೋಗುತ್ತಾರೆ. ಇದಕ್ಕೆಲ್ಲ ಜಿಲ್ಲಾಡಳಿತ ಕಲ್ಲು ಹಾಕಿದೆ ಎಂದು ದೂರಿದರು.

ಗೂಡಂಗಡಿ ತೆರವು ಮಾಡುವುದು ಸುಲಭ. ಆದರೆ ಅದರ ಹಿಂದಿನ ಶ್ರಮ, ನೋವು, ನಲಿವುಗಳನ್ನು ಅರಿಯಬೇಕು. ಕಾನೂನು ರೀತ್ಯ ಜಾಗ ಗುರುತಿಸಿ ಅಂಗಡಿಗಳನ್ನು ಇಟ್ಟುಕೊಳ್ಳಲು ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿದರು. 

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.