ದೇವರಾಜ ಅರಸು ಹಿಂದುಳಿದ ವರ್ಗದ ಆಶಾಕಿರಣ; ಶಾಸಕ ಟಿ. ರಘುಮೂರ್ತಿ

ನಾವೆಲ್ಲರೂ ಈ ಮಹಾನ್‌ ಪುರುಷನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು

Team Udayavani, Aug 22, 2022, 5:45 PM IST

ದೇವರಾಜ ಅರಸು ಹಿಂದುಳಿದ ವರ್ಗದ ಆಶಾಕಿರಣ; ಶಾಸಕ ಟಿ. ರಘುಮೂರ್ತಿ

ಚಳ್ಳಕೆರೆ: ರಾಜ್ಯದ ಲಕ್ಷಾಂತರ ಹಿಂದುಳಿದ ವರ್ಗದ ಜನರಿಗೆ ಉತ್ತಮ ಜೀವನದ ಪರಿಕಲ್ಪನೆಯನ್ನು ಕೊಟ್ಟ ಮಹಾನ್‌ ನಾಯಕ ದೇವರಾಜ ಅರಸು. ಆತಂತ್ರ ಸ್ಥಿತಿಯಲ್ಲಿದ್ದ ಹಿಂದುಳಿದ ಸಮಾಜಕ್ಕೆ ಆಶಾಕಿರಣವಾಗಿ ಮೂಡಿ ಬಂದರು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.

ನಗರದ ಪಾವಗಡ ರಸ್ತೆಯ ಹಿಂದುಳಿದ ವರ್ಗಗಳ ಹಾಸ್ಟೆಲ್‌ನಲ್ಲಿ ನಡೆದ ದೇವರಾಜ ಅರಸುರವರ 107ನೇ ಜನ್ಮದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶೋಷಿತ ಸಮುದಾಯದಂತೆ ಹಿಂದುಳಿದ ವರ್ಗಗಳ ಜನರು ತಮ್ಮ ಅಳಿವು-ಉಳಿವಿನ ಬಗ್ಗೆ ಚಿಂತನೆ ನಡೆಸುವ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಡಿ. ದೇವರಾಜ ಅರಸುರವರು ಹಿಂದುಳಿದ ವರ್ಗದ ಅಭಿವೃದ್ಧಿ ಬಗ್ಗೆ ತಮ್ಮದೇಯಾದ ಯೋಜನೆ ರೂಪಿಸಿ ಕಾರ್ಯಗತಗೊಳಿಸಿದರು. ವಿರೋಧದ ನಡುವೆಯೂ ಹಿಂದುಳಿದ ವರ್ಗಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಶಸ್ವಿಯಾದರು.

ನಾವೆಲ್ಲರೂ ಈ ಮಹಾನ್‌ ಪುರುಷನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ದೇವರಾಜ ಅರಸುರವರ ಹೋರಾಟ ಹಾಗೂ ಚಿಂತನೆಗಳ ಬಗ್ಗೆ ಉಪನ್ಯಾಸಕ ಬೆಳಗಟ್ಟ ನಾಗರಾಜು ಉಪನ್ಯಾಸ ನೀಡಿ, ದೇವರಾಜ ಅರಸುರವರ ಚಿಂತನೆಗಳು ಇಂದಿಗೂ ಪ್ರಸ್ತುತ. ಅವರ ಚಿಂತನೆಯ ಫಲವಾಗಿ ಹಿಂದುಳಿದ ಸಮಾಜ ಶಕ್ತಿಯಾಗಿ ಬೆಳೆದಿದೆ ಎಂದು ಸ್ಮರಿಸಿದರು.

ತಾಲೂಕು ಬಿಸಿಎಂ ಅಧಿಕಾರಿ ಡಿ.ಟಿ. ಜಗನ್ನಾಥ ಮಾತನಾಡಿ, ಕ್ಷೇತ್ರದ ಶಾಸಕರ ನಿರಂತರ ಪರಿಶ್ರಮದಿಂದ 21 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾದ 6 ಹಾಸ್ಟೆಲ್‌ ಕಟ್ಟಡ ನಿರ್ಮಾಣವಾಗಿವೆ. 850ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅನುಕೂಲವಾಗಿದೆ. ತಾಲೂಕಿನ ಒಟ್ಟು 17 ಹಾಸ್ಟೆಲ್‌ಗ‌ಳಿದ್ದು ಇಲಾಖೆ ಸೂಚನೆಯಂತೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡಿ ಉತ್ತಮ ಅಂಕ ಪಡೆದ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತಿದ್ದು, ಹಾಸ್ಟೆಲ್‌ನ ಎಲ್ಲಾ ವಾರ್ಡನ್‌ಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಗಮನ ನೀಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಕ್ಕ ಆಂಜಿನಪ್ಪ, ಉಪಾಧ್ಯಕ್ಷೆ ಮಂಜುಳಾ ಪ್ರಸನ್ನಕುಮಾರ್‌, ಟಿಎಸಿಎಂಸಿ ಅಧ್ಯಕ್ಷ ಕೆ.ಟಿ. ನಿಜಲಿಂಗಪ್ಪ, ತಾಪಂ ಇಒ ಜಿ.ಕೆ. ಹೊನ್ನಯ್ಯ, ನಗರಸಭೆ ಪೌರಾಯುಕ್ತ ಸಿ. ಚಂದ್ರಪ್ಪ, ಪರಿಶಿಷ್ಟ ಪಂಗಡದ ಕಲ್ಯಾಣಾಧಿಕಾರಿ ದಿವಾಕರ್‌, ಕೃಷಿ ಅ ಧಿಕಾರಿ ಅಶೋಕ್‌, ರೇಷ್ಮೆ ಇಲಾಖೆ ಅಧಿಕಾರಿ ಕೆಂಚೋಜಿ ರಾವ್‌, ಅಬಕಾರಿ ಇನ್ಸ್‌ಪೆಕ್ಟರ್‌ ತಿಪ್ಪಯ್ಯ, ನಗರಸಭೆ ನಾಮನಿರ್ದೇಶನ ಸದಸ್ಯೆ ಜಗದಾಂಬ, ಎನ್‌. ಮಂಜುನಾಥ ಮೊದಲಾದವರು ಪಾಲ್ಗೊಂಡಿದ್ದರು.

ದೇವರಾಜ ಅರಸುರವರು ಹಿಂದುಳಿದ ವರ್ಗ ಮತ್ತು ಸಮಾಜಕ್ಕೆ ನೀಡಿದ ಹಲವಾರು ಕೊಡುಗೆಗಳನ್ನು ಎಂದಿಗೂ ಮರೆಯಲಾಗದು. ದಿ| ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೊಳಿಸುವ ಮೂಲಕ ದೇಶದ ಅಭಿವೃದ್ಧಿಗೆ ಪ್ರೇರಕ ಶಕ್ತಿಯಾಗಿ ಶ್ರಮಿಸಿದರು.
ಎನ್‌. ರಘುಮೂರ್ತಿ, ತಹಶೀಲ್ದಾರ್‌

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.