ಬಿರುಗಾಳಿ-ಮಳೆಗೆ ಅಪಾರ ಹಾನಿ

ಹೆದ್ದಾರಿ ಇಕ್ಕೆಲದ ಮರಗಳು ವಿದ್ಯುತ್‌ ಕಂಬದ ಮೇಲೆ ಬಿದ್ದು ಸಮಸ್ಯೆ -ವಿದ್ಯುತ್‌ ಪೂರೈಕೆ ಸ್ಥಗಿತ

Team Udayavani, May 10, 2022, 4:41 PM IST

damage

ನಾಯಕನಹಟ್ಟಿ: ಹೋಬಳಿಯ ನಾನಾ ಭಾಗದಲ್ಲಿ ಬಿರುಗಾಳಿ ಮತ್ತು ಮಳೆಯಿಂದಾಗಿ ಅಡಿಕೆ, ತೆಂಗು,ಬಾಳೆ ತೋಟಗಳಿಗೆ ಹಾನಿಯಾಗಿದೆ.

ಬಿರುಗಾಳಿ ರಭಸಕ್ಕೆ 43 ವಿದ್ಯುತ್‌ ಕಂಬಗಳು ಧರೆಗುರುಳಿದ್ದರೆ, 12 ಟ್ರಾನ್ಸಫಾರ್ಮರ್‌ ಹಾಳಾಗಿವೆ. ಭಾನುವಾರ ಸುರಿದ 25 ಮಿಮೀ ಮಳೆ ಹಾಗೂ ಭಾರೀ ಪ್ರಮಾಣದ ಗಾಳಿ, ಹೋಬಳಿಯಲ್ಲಿ ಭಾರಿ ನಷ್ಟವನ್ನುಂಟು ಮಾಡಿದೆ. ನಾಯಕನಹಟ್ಟಿಯಿಂದ ಡಿಆರ್‌ ಡಿಒಗೆ ವಿದ್ಯುತ್‌ ಪೂರೈಕೆ ಮಾಡುವ ಕಂಬಗಳು ನೆಲಕ್ಕುರುಳಿವೆ. ಹೀಗಾಗಿ ರಾತ್ರಿ ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಿ ವಿದ್ಯುತ್‌ ಸಂಪರ್ಕ ಕಲ್ಪಿಸಲಾಯಿತು. ಭಾರೀ ಗಾಳಿಯಿಂದ ಹೆದ್ದಾರಿ ಬದಿಯ ಮರಗಳು ಉರುಳಿ ವಿದ್ಯುತ್‌ ಕಂಬಗಳ ಮೇಲೆ ಬಿದ್ದಿವೆ. ಆದ್ದರಿಂದ ವಿದ್ಯುತ್‌ ಕಂಬಗಳ ಬೀಳುವಿಕೆಯ ಪ್ರಮಾಣ ಹೆಚ್ಚಾಗಿದೆ. ನೇರಲಗುಂಟೆ, ಯರಮಂಚ ಯ್ಯನಹಟ್ಟಿ,ಕಾಟವ್ವನಹಳ್ಳಿ,ದಾಸರಗಿಡ್ಡನಹಳ್ಳಿ ಗ್ರಾಮಗಳಲ್ಲಿ ರಾತ್ರಿಯಿಡಿ ವಿದ್ಯುತ್‌ ಸಂಪರ್ಕ ಸ್ಥಗಿತಗೊಂಡಿತ್ತು. ನಲಗೇತನಹಟ್ಟಿ ಗ್ರಾಮದಲ್ಲಿ 7, ಬೋಸೇದೇವರಹಟ್ಟಿ ಗ್ರಾಮದಲ್ಲಿ 5 ವಿದ್ಯುತ್‌ ಕಂಬಗಳು ನೆಲಕ್ಕರುಳಿವೆ. ಕಾಟವ್ವನಹಳ್ಳಿ ಬಳಿಯ ಅನ್ನಪೂರ್ಣೇಶ್ವರಿ ಡಾಬಾದ ಮುಂದಿದ್ದ ಮರಗಳು ಶೆಡ್‌ಗಳ ಮೇಲೆ ಬಿದ್ದಿವೆ. ಹೀಗಾಗಿ ಶೆಡ್‌ಗಳು ಜಖಂಗೊಂಡಿವೆ. ಡಿಆರ್‌ಡಿಒ ಸಮೀಪವಿರುವ ಜೆ.ಆರ್. ರವಿಕುಮಾರ್‌ರವರ ತೋಟದ ಮನೆಯಲ್ಲಿನ ಶೆಡ್‌ಗಳು ಗಾಳಿಗೆ ಸಂಪೂರ್ಣವಾಗಿ ಹಾಳಾಗಿದ್ದು, ಒಳಗಿದ್ದವರು ಗಾಗೊಂಡಿದ್ದಾರೆ. ಅವರಿಗೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ನೇರಲಗುಂಟೆ ಗ್ರಾಮದ ಕಾರ್ತಿಕ್‌ ಹಾಗೂ ಚಂದ್ರಾರೆಡ್ಡಿಯವರ ಸರ್ವೇ ನಂ. 43 ರಲ್ಲಿನ 2.2 ಎಕರೆ ಪ್ರದೇಶದಲ್ಲಿರುವ ಅಡಿಕೆ, ಬಾಳೆ ಬೆಳೆ ಬಿರುಗಾಳಿಯಿಂದ ಹಾಳಾಗಿದೆ. ಮತ್ತೂಂದು ಬಾಳೆ ತೋಟದಲ್ಲಿನ ಬಾಳೆ ಗಿಡಗಳು ಬಿರುಗಾಳಿಗೆ ಸಿಲುಕಿ ನೆಲಕ್ಕುರುಳಿವೆ. ಸ್ಥಳಕ್ಕೆ ತಹಶೀಲ್ದಾರ್‌ ಎನ್‌. ರಘಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೈಸರ್ಗಿಕ ವಿಕೋಪದಿಂದ ತಾಲೂಕಿನಲ್ಲಿ ಉಂಟಾಗಿರುವ ಹಾನಿಯ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶೀಘ್ರದಲ್ಲಿ ಈ ಬಗ್ಗೆ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಹೆದ್ದಾರಿ ಬಂದ್‌

ನಾಯಕನಹಟ್ಟಿ-ನೇರಲಗುಂಟೆ ನಡುವಿನ ರಾಜ್ಯ ಹೆದ್ದಾರಿ 45 ರಲ್ಲಿ 20ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಉರುಳಿವೆ. ಬಹುತೇಕ ಕಂಬಗಳು ರಸ್ತೆ ಬದಿಯಲ್ಲಿವೆ. ಈ ಎಲ್ಲ ಕಂಬಗಳು ರಸ್ತೆಗೆ ಅಡ್ಡಲಾಗಿ ಉರುಳಿವೆ. ಹೀಗಾಗಿ ರಾಜ್ಯ ಹೆದ್ದಾರಿಯಲ್ಲಿ ನಾಲ್ಕು ತಾಸು ಸಂಚಾರ ಸ್ಥಗಿತಗೊಂಡಿತ್ತು.

ಹೋಬಳಿಯಲ್ಲಿ ಭಾರೀ ಪ್ರಮಾಣದಲ್ಲಿ ವಿದ್ಯುತ್‌ ಕಂಬಗಳು, ಉರುಳಿರುವುದು ಬೆಸ್ಕಾಂಗೆ ದೊಡ್ಡ ಸಮಸ್ಯೆಯಾಗಿದೆ. ಇಡೀ ರಾತ್ರಿ ಹಾಗೂ ಸೋಮವಾರ ದಿನವಿಡೀ ಕಂಬಗಳನ್ನು ಪುನರ್‌ ಸ್ಥಾಪಿಸುವ ಕಾರ್ಯ ಭರದಿಂದ ಸಾಗಿತು. ಹೀಗಿದ್ದರೂ ಎರಡು ಗ್ರಾಮಗಳಲ್ಲಿ ಇಡೀ ದಿನ ಹಾಗೂ ರಾತ್ರಿ ವಿದ್ಯುತ್‌ ಸಂಪರ್ಕ ನೀಡಲಾಗುತ್ತಿಲ್ಲ. ಬಿದ್ದಿರುವ ಕಂಬಗಳ ಜಾಗದಲ್ಲಿ ಹೊಸ ಕಂಬಗಳನ್ನು ಹಾಕಲಾಗುತ್ತಿದೆ. 12 ವಿದ್ಯುತ್‌ ಪರಿವರ್ತಕಗಳು ಹಾಳಾಗಿವೆ. 3 ವಿದ್ಯುತ್‌ ಪರಿವರ್ತಕಗಳು ಬೀಸಿದ ಗಾಳಿಯ ರಭಸಕ್ಕೆ ಧರೆಗುರುಳಿವೆ. ಹಾಳಾಗಿರುವ ವಿದ್ಯುತ್‌ ಪರಿವರ್ತಕಗಳನ್ನು ಬದಲಿಸುವ ಕಾರ್ಯ ನಡೆಯಿತು.

43 ವಿದ್ಯುತ್‌ ಕಂಬಗಳು ನೆಲಕ್ಕುರುಳಿದ್ದು, ಆದ್ಯತೆಯ ಮೇಲೆ ಅವುಗಳನ್ನು ಪುನರ್‌ ನೀಡಲಾಗಿದೆ ಎಂದು ತಿಳಿಸಿದರು. ಸ್ಥಾಪಿಸಲಾಗುತ್ತಿದೆ. ಇಲಾಖೆಯ ಸಿಬ್ಬಂದಿ ಇಡೀ ದಿನ ಮತ್ತು ರಾತ್ರಿ ಬಿದ್ದಿರುವ ಕಂಬ, ಪರಿವರ್ತಕಗಳನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸಿಬ್ಬಂದಿಯ ಕೊರತೆಯ ನಡುವೆ ವಿದ್ಯುತ್‌ ಸಂಪರ್ಕ ಪುನರ್‌ ಸ್ಥಾಪಿಸುವ ಕಾರ್ಯ ನಡೆದಿದೆ. ಎರಡು ಗ್ರಾಮಗಳನ್ನು ಹೊರತುಪಡಿಸಿ ಉಳಿದೆಲ್ಲ ಪ್ರದೇಶಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. -ಎನ್‌.ಬಿ. ಬೋರಣ್ಣ, ಸೆಕ್ಷನ್‌ ಆಫೀಸರ್‌, ನಾಯಕನಹಟ್ಟಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.