ಭ್ರೂಣ ಪತ್ತೆ ಶಿಕ್ಷಾರ್ಹ ಅಪರಾಧ: ಡಾ| ಫಾಲಾಕ್ಷ


Team Udayavani, Feb 26, 2019, 8:41 AM IST

chikk.jpg

ಚಿತ್ರದುರ್ಗ: ಭ್ರೂಣ ಪತ್ತೆ ಮಾಡುವುದು ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೆ ಶಿಕ್ಷಾರ್ಹ ಅಪರಾಧ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಸಿ.ಎಲ್‌. ಫಾಲಾಕ್ಷ ಎಚ್ಚರಿಸಿದರು. ಇಲ್ಲಿನ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಚಿತ್ರದುರ್ಗ ತಾಲೂಕಿನ ಆಯ್ದ ಶಿಕ್ಷಕರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ಜಾಗೃತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೆಣ್ಣು ತಾಯಿಯಾಗಿ, ಬಾಳಸಂಗಾತಿಯಾಗಿ ಬೇಕು. ಆದರೆ ಮಗಳಾಗಿ ಏಕೆ ಬೇಡ ಎಂದು ಪ್ರಶ್ನಿಸಿದರು. ಮಹಿಳಾ ಸಮಾನತೆ ಮತ್ತು ಸಾರ್ವಭೌಮತ್ವಕ್ಕೆ ಸಮಾಜ ಸಜ್ಜಾಗ ಬೇಕಿದೆ. ಭ್ರೂಣಲಿಂಗ ಪತ್ತೆ ಮಾಡಿ ಜೈಲು ಸೇರಬೇಡಿ ಎಂದರು. 

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎನ್‌. ಎಸ್‌. ಮಂಜುನಾಥ ಮಾತನಾಡಿ, ಒಲಂಪಿಕ್‌ ಕ್ರೀಡಾಕೂಟದಲ್ಲಿ ನಮ್ಮ ದೇಶದ ಕೀರ್ತಿ ಪತಾಕೆ ಹಾರಿಸಿದ ಸಾಕ್ಷಿ ಮಲ್ಲಿಕ್‌, ಪಿ.ಎನ್‌. ಸಿಂಧು ನಮ್ಮ ದೇಶದ ಹೆಣ್ಣುಮಕ್ಕಳು. ಪ್ರತಿಯೊಬ್ಬರೂ ಸ್ತ್ರೀ ಸಮಾನತೆಗೆ ಧ್ವನಿ ಎತ್ತಿ ಹೋರಾಡಬೇಕು. ಈ ಬಗ್ಗೆ ಪ್ರತಿ
ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಶಾಲೆಗಳ ಆಸುಪಾಸಿನಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ತಾಯಂದಿರ ಸಭೆಗಳಲ್ಲಿ ಅರಿವು ಮೂಡಿಸಬೇಕು.

ಹೊರುವುದು, ಹೆರುವುದು, ಹಾಲುಣಿಸುವುದು ಹೆಣ್ಣು. ಆದರೆ ನಮ್ಮ ಸಮಾಜವೇ ಹೆಣ್ಣಿನ ಶತ್ರುವಾಗಿದೆ. ಒಲವಿನಿಂದ ಹುಟ್ಟಿದ ಭ್ರೂಣವನ್ನು ಚಾಕುವಿನಿಂದ ಹತ್ಯೆ ಮಾಡುವುದು ಸರ್ವಥಾ ಸರಿಯಲ್ಲ ಎಂದು ಆಕ್ಷೇಪಿಸಿದರು.

ವಿದ್ಯಾವಂತರು ಮತ್ತು ತಿಳಿದವರಾಗಿರುವ ವೈದ್ಯರು ಭ್ರೂಣ ಪತ್ತೆ ಮಾಡುವ ಕಾರ್ಯಕ್ಕೆ ಕೈ ಹಾಕಬಾರದು. ಯಾವುದೇ ಶಾಸನದಲ್ಲಿ ಲಿಂಗ ಪತ್ತೆ ಮಾಡುವ ಕಾನೂನಿಲ್ಲ ಎಂದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮಾತನಾಡಿದರು. ಕಾರ್ಯಾಗಾರದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವ್ಯವಸ್ಥಾಪಕ ಅಲಿ, ನಾಗವೇಣಿ, ಹಬೀಬುಲ್ಲಾ ಅನ್ಸಾರಿ, ಗೋಣಪ್ಪ, ಇಮ್ರಾನಾ, ಜಿಲ್ಲಾ ಎಂಐಎಸ್‌ ಮ್ಯಾನೇಜರ್‌ ಕುಮಾರ್‌, 20 ಶಿಕ್ಷಕರು, 20 ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

8-Holalkere

Holalkere: ತಾಲೂಕಿನಾದ್ಯಾಂತ ರಣಭೀಕರ ಮಳೆ; ರೈತರ ಮುಖದಲ್ಲಿ ಮಂದಹಾಸ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.