ಬಿತ್ತನೆ ಬೀಜಕ್ಕಾಗಿ ಕಚೇರಿಗೆ ನುಗ್ಗಿ ಸಿಬ್ಬಂದಿಯನ್ನೇ ಥಳಿಸಿದ್ರು
Team Udayavani, Sep 19, 2017, 9:53 AM IST
ನಾಯಕನಹಟ್ಟಿ (ಚಿತ್ರದುರ್ಗ): ಕಡಲೆ ಬಿತ್ತನೆ ಬೀಜ ಅಸಮರ್ಪಕ ವಿತರಣೆ ಯಿಂದ ಆಕ್ರೋಶಗೊಂಡ ರೈತರು ಕೃಷಿ ಅಧಿಕಾರಿಯನ್ನು ಥಳಿಸಿರುವ ಘಟನೆ ತುರುವನೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಹಿಂಗಾರು ಹಂಗಾಮಿನ ಬಿತ್ತನೆಗಾಗಿ ಬೀಜ ಪಡೆಯಲು ತುರುವನೂರು ಹೋಬಳಿ ಸುತ್ತಮುತ್ತಲಿನ ಸುಮಾರು 500ಕ್ಕೂ ಹೆಚ್ಚು ರೈತರು ರೈತ ಸಂಪರ್ಕ ಕೇಂದ್ರಕ್ಕೆ ಆಗಮಿಸಿದ್ದರು. ಬೆಳಗ್ಗೆ ಐದು ಗಂಟೆಯಿಂದ ಸರದಿ ಸಾಲಿನಲ್ಲಿ ನಿಂತು ಬಿತ್ತನೆ ಬೀಜಕ್ಕಾಗಿ ಕಾದಿದ್ದಾರೆ. ಆದರೆ ಸರಿಯಾಗಿ ಬೀಜ ಸಿಗದಿದ್ದರಿಂದ ಆಕ್ರೋಶಗೊಂಡ ರೈತರು ಹಾಗೂ ರೈತ ಮಹಿಳೆಯರು ಕಚೇರಿ ಬಾಗಿಲು ತೆರೆದು ಒಳನುಗ್ಗಿದ್ದಾರೆ. ನಂತರ ಕೃಷಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಸಿಬ್ಬಂದಿಯನ್ನು ಪಾರು ಮಾಡಿದ್ದಾರೆ. ನಂತರ ಬಿತ್ತನೆ ಬೀಜ ವಿತರಣೆ ಸ್ಥಗಿತಗೊಳಿಸಿದ್ದಾರೆ.
ಸ್ಥಳೀಯ ತುರುವನೂರು ಸೇರಿ ಕಲ್ಲೇ ದೇವರಪುರ, ಚಿಕ್ಕಗೊಂಡನಹಳ್ಳಿ, ಮಾಡ ನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ರೈತರು ಬೀಜ ಪಡೆಯಲು ಬೆಳಗ್ಗೆಯಿಂದ ಕಾದಿದ್ದಾರೆ. ಆದರೆ ಇಲಾಖೆ ಸಿಬ್ಬಂದಿ ಮಧ್ಯಾಹ್ನ 12ಕ್ಕೆ ವಿತರಣೆ ಆರಂಭಿಸಿ ದ್ದಾರೆ. ಎಲ್ಲ ರೈತರ ಪಹಣಿ ಪರಿಶೀಲಿಸಿ ಟೋಕನ್ ನೀಡುವುದಕ್ಕೆ ವಿಳಂಬವಾಗಿದೆ. ಅಲ್ಲದೆ ಒಂದು ಎಕರೆಗೆ ಒಂದೇ ಪ್ಯಾಕೇಟ್ ಬೀಜ ನೀಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಇದರಿಂದ ರೈತರು ಗಲಾಟೆ ಆರಂಭಿಸಿದ್ದಾರೆ. ಸಿಬ್ಬಂದಿ ಹಾಗೂ ರೈತರ ಮಧ್ಯೆ ವಾಗ್ವಾದ ನಡೆದಿದೆ. ಸಿಬ್ಬಂದಿ ವರ್ತನೆಯಿಂದ ಆಕ್ರೋಶಗೊಂಡ ರೈತರು ಏಕಾಏಕಿ ಕಚೇರಿಯ ಒಳನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ರೈತರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ರೈತರು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದು ಸರಿಯಲ್ಲ. ರೈತರ ಎಲ್ಲ ಸಮಸ್ಯೆಗಳಿಗೆ ಇಲಾಖೆ ಸ್ಪಂದಿಸುತ್ತಿದೆ. ಆದರೆ ರೈತರೊಂದಿಗೆ ಇಲಾಖೆ
ಸಂಘರ್ಷಕ್ಕಿಳಿಯುವುದಿಲ್ಲ. ರೈತರು ತಾಳ್ಮೆಯಿಂದ ವರ್ತಿಸಬೇಕು. ಬಿತ್ತನೆ ಬೀಜ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಗ್ರಾಮದಲ್ಲಿ ಗೋದಾಮು ಸಮಸ್ಯೆ ಯಿದೆ. ಸರಕಾರದ ನಿಯಮ ಗಳಂತೆ ಬಿತ್ತನೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು
ವೆಂಕಟೇಶ್, ಚಿತ್ರದುರ್ಗ ತಾಲೂಕು ಸಹಾಯಕ ಕೃಷಿ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.