ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Team Udayavani, Oct 25, 2024, 2:34 PM IST
ಚಿತ್ರದುರ್ಗ: ಬಿಜೆಪಿ – ಜೆಡಿಎಸ್ ನಾಯಕರಿಗೆ ರಾಜ್ಯದ ರೈತರ ಪರ ನಿಜವಾದ ಕಾಳಜಿ ಇದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಳ ಮಾಡಿಸಲಿ. ಓಬಿರಾಯನ ಮಾನದಂಡ ಇಟ್ಟುಕೊಂಡು ಬಿಡಿಗಾಸು ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಅಸಮಧಾನ ವ್ಯಕ್ತಪಡಿಸಿದರು.
ಶುಕ್ರವಾರ (ಅ.25) ಚಿತ್ರದುರ್ಗ ಜಿಲ್ಲೆಗೆ ಮಳೆಯಿಂದ ಹಾನಿಗೊಳಗಾದ ಬೆಳೆ ಸಮೀಕ್ಷೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದರು.
ರಾಜ್ಯ ಸರ್ಕಾರ ರೈತರ ಪರವಾಗಿಲ್ಲ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇಂತಹ ಉಡಾಫೆ ಮಾತುಗಳನ್ನು ಬಿಟ್ಟು, ಮಧ್ಯ ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 5300 ಕೋಟಿ ರೂ.ಗಳಲ್ಲಿ ಈವರೆಗೆ 53 ಪೈಸೆಯನ್ನೂ ಕೊಟ್ಟಿಲ್ಲ. ಇವರೆಲ್ಲಾ ಹೋಗಿ ಮೊದಲು ಅನುದಾನ ತರಲಿ ಎಂದರು.
ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂ ಛಲವಾದ ನಾರಾಯಣ ಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯ ಎಂಟು ಜನ ಶಾಸಕರು ಕಾಂಗ್ರೆಸ್ಸಿಗೆ ಬರಲು ತಯಾರಿದ್ದಾರೆ ಎಂದು ಅವರ ಪಕ್ಷದವರೇ ಹೇಳಿದ್ದಾರೆ. ಮೊದಲು ಇದಕ್ಕೆ ಪ್ರತಿಕ್ರಿಯೆ ಕೊಡಲಿ ಎಂದರು.
ಬಿಜೆಪಿ ನಾಯಕರಿಗೆ ಗ್ಯಾರೆಂಟಿ ಯೋಜನೆಗಳನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಜನ ಸಾಮಾನ್ಯರಿಗೆ ದುಡ್ಡು ಕೊಡುವುದನ್ನು ಅವರಿಂದ ಸಹಿಸಲು ಆಗುತ್ತಿಲ್ಲ. ಅಂಬಾನಿ, ಅದಾನಿಗೆ ಕೊಟ್ಟಿದ್ದರೆ ಸುಮ್ಮನಿರುತ್ತಿದ್ದರು ಎಂದು ಹೇಳಿದರು.
ಗ್ಯಾರೆಂಟಿ ಬಂದ್ ಮಾಡಿಸಬೇಕು, ಸರ್ಕಾರ ಉರುಳಿಸಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಸಿಎಂ ಆಗುವ ಬಯಕೆಯಲ್ಲಿದ್ದಾರೆ. ಇತ್ತ ಕಡೆಯಿಂದ ವಿಜಯೇಂದ್ರಣ್ಣ ಕೂಡಾ ಮುಖ್ಯಮಂತ್ರಿ ಆಗಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಷಿ ಕೂಡಾ ಇದ್ದಾರೆ. ಕುಮಾರಸ್ವಾಮಿ ಸಿಎಂ ಆದರೆ ಬಿಜೆಪಿಯಲ್ಲಿರುವ ಒಕ್ಕಲಿಗರು ಏನು ಮಾಡಬೇಕು ಎಂಬ ಚಿಂತೆಯಲ್ಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್ ಆರೋಪ
ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ
Darshan & ಗ್ಯಾಂಗ್ ನಿಂದ ಹ*ತ್ಯೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಮಗು ಜನನ
MUST WATCH
ಹೊಸ ಸೇರ್ಪಡೆ
ಮುಧೋಳ: 36 ಹಳ್ಳಿಗಳಿಗೆ ಒಂದೇ ಒಂದು ಪೊಲೀಸ್ ಠಾಣೆ
One Day Cup: ಕೇವಲ 1 ರನ್ ಅಂತರದಲ್ಲಿ 8 ವಿಕೆಟ್ ಕಳೆದುಕೊಂಡ ವೆಸ್ಟರ್ನ್ ಆಸ್ಟ್ರೇಲಿಯಾ
First Look:ವಂದೇ ಭಾರತ್ ಸ್ಲೀಪರ್ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!
By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು
Tour Circle: ತಿರುಮಲನ ದರ್ಶನಕ್ಕೊಂದು ಪ್ರವಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.