ಡಯಾಲಿಸಿಸ್‌ ಕೇಂದ್ರಕ್ಕೆ ಎಂಎಲ್ಸಿ ದಿಢೀರ್‌ ಭೇಟಿ

ರೋಗಿಗಳು-ಸಂಬಂಧಿಕರಿಂದ ದೂರುಗಳ ಸುರಿಮಳೆ

Team Udayavani, May 24, 2022, 5:00 PM IST

dialysis

ಚಿತ್ರದುರ್ಗ: ವಿಧಾನ ಪರಿಷತ್‌ ಸದಸ್ಯ ಕೆ.ಎಸ್. ನವೀನ್‌ ಸೋಮವಾರ ಜಿಲ್ಲಾಸ್ಪತ್ರೆಯಲ್ಲಿರುವ ಡಯಾಲಿಸಿಸ್‌ ಕೇಂದ್ರಕ್ಕೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಡಯಾಲಿಸಿಸ್‌ ಕೇಂದ್ರದ ಅವ್ಯವಸ್ಥೆ ಬಗ್ಗೆ ದಿನವೂ ಹತ್ತಾರು ದೂರುಗಳು ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ ನವೀನ್‌ ಯಾವುದೇ ಮುನ್ಸೂಚನೆ ನೀಡದೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಈ ವೇಳೆ ಡಯಾಲಿಸಿಸ್‌ಗೆ ಒಳಗಾಗಿದ್ದ ರೋಗಿಗಳು, ಅವರ ಸಂಬಂಧಿಕರು ಹಾಗೂ ಸಾರ್ವಜನಿಕರು ದೂರುಗಳ ಸುರಿಮಳೆಗೈದರು.

ಡಯಾಲಿಸಿಸ್‌ ರೋಗಿಗಳಿಗೆ ಸರಬರಾಜಾಗಬೇಕಿದ್ದ ಇಂಜೆಕ್ಷನ್‌ಗಳು ಕಳೆದ ಎರಡು ತಿಂಗಳಿನಿಂದ ನಿಂತಿದೆ. ಇಲ್ಲಿನ ಶೌಚಾಲಯ ವ್ಯವಸ್ಥೆ ಸರಿಯಾಗಿಲ್ಲ. ಬೆಡ್‌ಗಳ ಮೇಲಿನ ಬೆಡ್‌ಶೀಟ್‌ಗಳನ್ನು ಪ್ರತಿ ದಿನ ಬದಲಾಯಿಸುತ್ತಿಲ್ಲ ಎಂದು ದೂರಿದರು. ಡಯಾಲಿಸ್‌ ಕೇಂದ್ರದಲ್ಲಿ ಪ್ರತಿ ತಿಂಗಳು 100-150 ಮಂದಿ ಡಯಾಲಿಸಿಸ್‌ಗೆ ಒಳಗಾಗುತ್ತಾರೆ. ಇಲ್ಲಿಗೆ 12 ಯಂತ್ರಗಳನ್ನು ನೀಡಿದ್ದು, ಇದರಲ್ಲಿ 9 ಮಾತ್ರ ಕಾರ್ಯನಿರ್ವಹಿಸುತ್ತಿವೆ. 3 ಯಂತ್ರಗಳು ಕೆಟ್ಟಿದ್ದರೂ ರಿಪೇರಿ ಮಾಡಿಸಿಲ್ಲ ಎಂದು ಸಾರ್ವಜನಿಕರು ಗಮನಕ್ಕೆ ತಂದರು. ಎಲ್ಲ ಸಮಸ್ಯೆಗಳನ್ನು ಆಲಿಸಿದ ಕೆ.ಎಸ್. ನವೀನ್‌ ಸ್ಥಳದಲ್ಲಿದ್ದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜಪ್ಪ ಅವರಿಗೆ ಡಯಾಲಿಸಿಸ್‌ ಕೇಂದ್ರ ಹಾಗೂ ಆಸ್ಪತ್ರೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಒಂದು ವಾರದೊಳಗೆ ಸಭೆ ಕರೆಯಿರಿ. ಅಲ್ಲಿ ವಿವರವಾಗಿ ಚರ್ಚಿಸಿ ಪರಿಹಾರ ಕಂಡು ಹಿಡಿಯೋಣ. ಈ ಸಭೆಯಲ್ಲಿ ಡಯಾಲಿಸಿಸ್‌ ಕೇಂದ್ರದ ಗುತ್ತಿಗೆದಾರರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಎಲ್ಲರೂ ಹಾಜರಿರಬೇಕು ಎಂದು ಸೂಚಿಸಿದರು.

ಸರ್ಕಾರಿ ಆಸ್ಪತ್ರೆ, ಎಲ್ಲ ವ್ಯವಸ್ಥೆಯೂ ಇದೆ ಎನ್ನುವ ಕಾರಣಕ್ಕೆ ಬಡವರು ಆಸ್ಪತ್ರೆಗೆ ಬರುತ್ತಾರೆ. ಅವರಿಗೆ ಇಲ್ಲಿ ಎಲ್ಲ ಚಿಕಿತ್ಸೆ ಸಿಗಬೇಕು. ಯಾವುದೇ ಅವ್ಯವಸ್ಥೆಗಳು ಆಗಬಾರದು. ಇದೆಲ್ಲವನ್ನೂ ಸರಿಯಾಗಿ ನಿಭಾಯಿಸಿಕೊಂಡು ಹೋಗುವುದು ಜಿಲ್ಲಾ ಶಸ್ತ್ರಚಿಕಿತ್ಸಕರ ಹೊಣೆಯಾಗಿದೆ. ನಿಮಗೆ ಬೇಕಾದ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತದೆ ಎಂದು ಹೇಳಿದರು.

ಜಿಲ್ಲಾ ಆಸ್ಪತ್ರೆಯ ಡಯಾಲಿಸಿಸ್‌ ಕೇಂದ್ರದಲ್ಲಿ ಎಲ್ಲವೂ ಸರಿಯಿದೆ ಎನ್ನುವಂತಿಲ್ಲ. ಸಾಕಷ್ಟು ಅವ್ಯವಸ್ಥೆ, ಕೊರತೆಗಳಿವೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರ ಸಭೆ ನಡೆಸಬೇಕು. ಡಿಎಚ್‌ಒ, ಡಯಾಲಿಸಿಸ್‌ ಟೆಂಡರ್‌ದಾರರು ಹಾಜರಿದ್ದು ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು. ಚಿತ್ರದುರ್ಗ ಐತಿಹಾಸಿಕ ಜಿಲ್ಲೆ. ಜಿಲ್ಲಾ ಕೇಂದ್ರದಲ್ಲಿರುವ ಆಸ್ಪತ್ರೆಯಲ್ಲಿ ಎಲ್ಲ ಸೌಲಭ್ಯಗಳು, ಎಲ್ಲ ರೋಗಗಳಿಗೂ ಚಿಕಿತ್ಸೆ ಸಿಗಬೇಕು. ಇಲ್ಲಿಂದ ಮತ್ತೂಂದು ಆಸ್ಪತ್ರೆಗೆ ಹೋಗಿ ಎಂಬ ಮಾತುಗಳು ಬರಬಾರದು ಎಂದು ತಿಳಿಸಿದರು.

ಟಾಪ್ ನ್ಯೂಸ್

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

1-wqewqewq

Bharamasagara;ಕಳ್ಳತನಕ್ಕೆ ಬಂದು ಆಟೋ ಮತ್ತು ಬೈಕ್ ಬಿಟ್ಟು ಪರಾರಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.