ಪೊಲೀಸರ ನೈತಿಕತೆ ಕುಗ್ಗಿಸುವುದು ಶೋಭೆಯಲ್ಲ: ಸಂಸದ ನಾರಾಯಣಸ್ವಾಮಿ


Team Udayavani, Jan 23, 2020, 3:17 PM IST

narayasw

ಚಿತ್ರದುರ್ಗ: ಮಂಗಳೂರು ಬಾಂಬ್ ಪ್ರಕರಣವನ್ನು ಪೊಲೀಸರ ನೈತಿಕತೆ ಕುಸಿಯುವಂತೆ ಮಾತನಾಡುವುದು ಶೋಚನೀಯ ಎಂದು ಸಂಸದ ಎ. ನಾರಾಯಣಸ್ವಾಮಿ ಹೇಳಿದರು.

ಚಿತ್ರದುರ್ಗದಲ್ಲಿ ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪೊಲೀಸರು ಕಾನೂನು ಚೌಕಟ್ಟಿನಡಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಸ್ವತಂತ್ರವಾಗಿ ಬಿಡಬೇಕು. ಬದಲಾಗಿ ಬಾಂಬ್ ಪ್ರಕರಣ ಇಟ್ಟುಕೊಂಡು ಟೀಕೆ ಮಾಡುವ ಮೂಲಕ ಅವರ ನೈತಿಕತೆ ಕುಗ್ಗಿಸುವ ಕೆಲಸ ಮಾಡುವುದು ಸರಿಯಲ್ಲ. ಇದು ಯಾವುದೇ ರಾಜಕಾರಣಿಗಳಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.

ಮಂಗಳೂರು ಪೊಲೀಸ್ ಆಯುಕ್ತರು ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಆದರೂ ಎರಡು ಸಲ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು ಹೀಗೆ ಪೊಲೀಸರ ವಿರುದ್ಧ ಮಾತನಾಡುತ್ತಿರುವುದು ನೋವಿನ ಸಂಗತಿ ಎಂದರು.

ಪ್ರಕರಣ ನಡೆದು ಮೂರ‍್ನಾಲ್ಕು ದಿನದಲ್ಲೇ ಅಪರಾಧಿಯನ್ನು ಪೊಲೀಸರು ಹಿಡಿದಿದ್ದಾರೆ. ಇದು ಕರ್ನಾಟಕ ಪೊಲೀಸರು ಪ್ರಬುದ್ಧರು ಎನ್ನುವುದಕ್ಕೆ ಸಾಕ್ಷಿಯಾಗಿದೆ. ಬಾಂಬ್ ಪ್ರಕರಣದ ಆರೋಪಿ ಮಾನಸಿಕ ಅಸ್ವಸ್ಥ ಎನ್ನುವುದನ್ನು ಪೊಲೀಸರು ಅಧಿಕೃತವಾಗಿ ಹೇಳಿಲ್ಲ. ವೈದ್ಯಕೀಯ ವರದಿ ಕೂಡಾ ಬಂದಿಲ್ಲ. ಸಂಪೂರ್ಣ ವರದಿ ಬಂದ ನಂತರ ಈ ಬಗ್ಗೆ ಮಾತನಾಡುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

ಸರ್ಕಾರವೇ ಬಾಂಬ್ ಪ್ರಕರಣ ಮಾಡಿಸಿರಬಹುದು ಎಂಬ ಟೀಕೆಗೆ ಪ್ರತಿಕ್ರಿಯಿಸಿ, ವಿರೋಧ ಪಕ್ಷದವರೇ ಯಾಕೆ ಮಾಡಿಸಿರಬಾರದು. ಸಿಎಎ ವಿರೋಧಿಸಿ ಪ್ರತಿಭಟನೆ ಸಂದರ್ಭದಲ್ಲಿ ಕೇರಳದಿಂದ ಕೂಲಿ ಕೊಟ್ಟು ಗಲಾಟೆ ಮಾಡುವವರನ್ನು ಕರೆಯಿಸಿದ್ದರು. ಈಗ ಇದನ್ನೂ ಅವರೇ ಮಾಡಿರಬಹುದು ಎಂದು ತಿರುಗೇಟು ನೀಡಿದರು.

ಸಿಎಎ ವಿಚಾರದಲ್ಲಿ ವಿರೋಧ ಪಕ್ಷದವರು ಪಾಕಿಸ್ಥಾನದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ವಿರೋಧ ಪಕ್ಷಗಳಿಗೆ ಅಷ್ಟು ವಿಶ್ವಾಸ ಇದ್ದರೆ ಭಯೋತ್ಪಾಧಕರು ಮುಸ್ಲಿಮರಲ್ಲ ಎಂದು ಹೇಳಲಿ ಎಂದರು.

ಬಾಂಬ್ ಪ್ರಕರಣದ ಆರೋಪಿ ಆರೆಸ್ಸೆಸ್ಸ್ ಮುಖಂಡರ ಜತೆ ಪೊಟೊ ತೆಗೆಸಿಕೊಂಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಭಯೋತ್ಪಾಧಕರು, ನಕ್ಸಲರು ಇದನ್ನೇ ಮಾಡುವುದು. ಯಾವಾಗ ಯಾರ ಜತೆ ಯಾವ ವೇಷ ಧರಿಸಿ ಕಾಣಿಸಿಕೊಳ್ಳಬೇಕು. ಪೊಟೊ ತೆಗೆಸಿಕೊಳ್ಳಬೇಕು ಎಂದು ಆಲೋಚಿಸುತ್ತಾರೆ. ಬಿಜೆಪಿ, ಕಾಂಗ್ರೆಸ್ ಶಾಸಕರ ಜತೆಗೂ ಕಾಣಿಸಿಕೊಳ್ಳುತ್ತಾರೆ. ಈ ಬಗ್ಗೆ ಜವಾಬ್ದಾರಿಯಿಂದ ಮಾತನಾಡಬೇಕು ಎಂದು ನಾರಾಯಣಸ್ವಾಮಿ ಹೇಳಿದರು.

 ಅಖಂಡ ಭಾರತ ಬಿಜೆಪಿ ಕನಸು:

ಫ್ರೀ ಕಾಶ್ಮೀರ್ ಮಾಡಿ ಮತ್ತೊಂದು ಪಾಕಿಸ್ಥಾನ ಮಾಡಬೇಕು ಎಂದು ಈ ದೇಶದ ಪ್ರಜ್ಞಾವಂತರು ಕೇಳಿದ್ದಾರಾ ಅಥವಾ ಕಾಂಗ್ರೆಸ್ಸಿನವರೇ ತೀರ್ಮಾನಿಸಿದ್ದಾರಾ. ಫ್ರೀ ಕಾಶ್ಮೀರ ಎಂದರೆ ಏನರ್ಥ ಎಂದು ಸಂಸದರು ಗಂಭಿರವಾಗಿ ಪ್ರಶ್ನಿಸಿದರು.

ಈ ದೇಶದ ಒಂದಿಂಚು ನೆಲವನ್ನೂ ಬೇರೆಯವರಿಗೆ ಕೊಡುವುದಿಲ್ಲ. ಇದೇ ಬಿಜೆಪಿ ಅಜೆಂಡಾ. ನಾನೊಬ್ಬ ಸಂಸದನಾಗಿ ಹೇಳುತ್ತಿದ್ದೇನೆ. ಬೇಕಾದರೆ ಪಾಕಿಸ್ಥಾನ, ಬಾಂಗ್ಲಾ ದೇಶಗಳನ್ನು ಸೇರಿಸಿಕೊಂಡು ಅಖಂಡ ಭಾರತ ಮಾಡುವ ಕಡೆಗೆ ಆಲೋಚನೆ ಮಾಡುತ್ತೇವೆ. ಇದೇ ದೇಶಭಕ್ತನ ಕನಸು ಎಂದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.