![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 17, 2020, 9:08 AM IST
ಹೊಸದುರ್ಗ: ತಾಲೂಕಿನ ಕೆಲವು ಕೆರೆ ಕಟ್ಟೆ, ಹಳ್ಳಗಳ ಪುನಶ್ಚೇತನಕ್ಕೆ ಜಿಲ್ಲಾ ಖನಿಜ ಪ್ರತಿಷ್ಠಾನ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲು ಸೂಚಿಸಲಾಗಿದೆ ಎಂದು ಶಾಸಕ ಗೂಳಿಹಟ್ಟಿ ಶೇಖರ್ ತಿಳಿಸಿದರು.
ತಾಲೂಕಿನ ದೇವಪುರ ಸಮೀಪದ ಹಿರೇಹಳ್ಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ಎಲ್ಲ ಹೋಬಳಿಗಳಲ್ಲೂ ಹಳ್ಳಗಳನ್ನು ಗುರುತಿಸಿ ಪುನಶ್ಚೇತನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ಸುಮಾರು 15 ಕಿಮೀ ಉದ್ದದ ಹಿರೇಹಳ್ಳದಲ್ಲಿದ್ದ ಕಲ್ಲು ಮುಳ್ಳು ತೆಗೆಸಿ ಜೆಸಿಬಿ ಬಳಸಿ ದುರಸ್ತಿ ಮಾಡಿಸಿದ್ದರಿಂದ ಕಾಲುವೆಯ ಸ್ಪಷ್ಟ ಚಿತ್ರಣ ಕಂಡು ಬಂದಿದೆ. ಮುಂದೆ ಹಳ್ಳದ ಹೂಳೆತ್ತುವ, ಎರಡು ಬದುಗಳ ನಿರ್ಮಾಣ, ಕಲ್ಲು ಪಿಚ್ಚಿಂಗ್ ಸೇರಿದಂತೆ ಸುಮಾರು 10 ಚೆಕ್ ಡ್ಯಾಂಗಳ ನಿರ್ಮಾಣ ಕಾಮಗಾರಿಯನ್ನು ವಿವಿಧ ಇಲಾಖೆ ಹಾಗೂ ಉದ್ಯೋಗ ಖಾತ್ರಿ ಅಡಿಯಲ್ಲಿ ಕೈಗೊಳ್ಳಲಾಗುವುದು ಎಂದರು.
ದೇವರಹಟ್ಟಿ ಸಮೀಪದ ನೇರಲ ಹಳ್ಳ, ಬಾಗೂರು ಸಮೀಪದ ನ್ಯಾಕಿಕೆರೆ (ಶೃಂಗೇರಿ ಹಳ್ಳ), ಮಾಡದಕೆರೆ ಹೋಬಳಿಯ ಹಳ್ಳಗಳ ಪುನಶ್ಚೇತನ ಮಾಡಲಾಗುತ್ತಿದೆ. ಹಳ್ಳಗಳ ಪುನಶ್ಚೇತನದಿಂದ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಹರಿಯುವ ಭದ್ರಾ ನೀರಿನಿಂದ ಕೆರೆ ಕಟ್ಟೆ ತುಂಬಿಸಲು ಹಾಗೂ ಅಂತರ್ಜಲ ವೃದ್ಧಿಗೆ ಸಹಕಾರಿ. ಭದ್ರಾ ಮೇಲ್ದಂಡೆ ಕಾಲುವೆಯ ಬಲ ಭಾಗದ ರೈತರಿಗೆ ಭದ್ರಾ ಯೋಜನೆಯ ಫಲ ಸಿಗಲಿದ್ದು, ಹಳ್ಳಗಳಲ್ಲಿ ನಿರ್ಮಿಸುವ ಚೆಕ್ಡ್ಯಾಂಗಳಲ್ಲಿ ನೀರು ಸಂಗ್ರಹಿಸಿ ಭದ್ರಾ ಮೇಲ್ದಂಡೆ ಕಾಲುವೆಯ ಎಡ ಭಾಗದಲ್ಲಿರುವ ಕೆರೆ ಕಟ್ಟೆ, ಚೆಕ್ ಡ್ಯಾಂಗಳಿಗೆ ಲಿಫ್ಟ್ ಮೂಲಕ ನೀರುಣಿಸಲು ಯೋಜನೆ ರೂಪಿಸಲಾಗುವುದು. ಆ ಮೂಲಕ ಭದ್ರಾ ನೀರು ವಂಚಿತ ಗ್ರಾಮಗಳಿಗೆ ನೀರು ತಲುಪಿಸಲಾಗುವುದು ಎಂದರು.
ಮಹಾರಾಷ್ಟ್ರ ಸೇರಿದಂತೆ ಅನ್ಯರಾಜ್ಯಗಳಿಗೆ ವಲಸೆ ಹೋಗಿದ್ದ ಸ್ಥಳೀಯರು ವಾಪಸಾಗಿದ್ದು, ಎಲ್ಲರಿಗೂ ಉದ್ಯೋಗಕೊಡಲು ಕಡ್ಡಾಯವಾಗಿ ಜಾಬ್ಕಾರ್ಡ್ ನೀಡುವಂತೆ ಸೂಚಿಸಲಾಗಿದೆ ಎಂದ ಗೂಳಿಹಟ್ಟಿ, ಹಿರೇಹಳ್ಳ ಕಾಮಗಾರಿಯನ್ನು ಯಂತ್ರ ಬಳಸಿ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕರು ವಿನಾಕಾರಣ ಆರೋಪಿಸಿದ್ದರು. ಈಗ ಅವರೇ ಬಂದು ಖಾತ್ರಿ ಕಾಮಗಾರಿಯನ್ನು ವೀಕ್ಷಿಸಬಹುದು ಎಂದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.