ಆರೆಸ್ಸೆಸ್‌ಗೆ ರಾಜಕೀಯ ಹೊಂದಾಣಿಕೆ ಆಗಲ್ಲ: ಭಾಗವತ್‌

ಆಧ್ಯಾತ್ಮಿಕತೆ ನಮ್ಮ ಆದ್ಯತೆ : ಸ್ವಾಮೀಜಿಗಳ ಭೇಟಿಯಿಂದ ಸಮಾಜ ಸುಧಾರಣೆ

Team Udayavani, Jul 13, 2022, 12:18 AM IST

ಆರೆಸ್ಸೆಸ್‌ಗೆ ರಾಜಕೀಯ ಹೊಂದಾಣಿಕೆ ಆಗಲ್ಲ: ಭಾಗವತ್‌

ಚಿತ್ರದುರ್ಗ: ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ರಾಜಕೀಯ ಅಲ್ಲ. ಧಾರ್ಮಿಕತೆ ಮತ್ತು ಆಧ್ಯಾ ತ್ಮಿಕತೆ ಹೆಚ್ಚು ಹೊಂದಾ ಣಿಕೆಯಾಗುತ್ತದೆ. ಹಾಗಾಗಿ ಸಂಘಕ್ಕೆ ರಾಜಕೀಯದವರಿಗಿಂತ ಸ್ವಾಮೀಜಿ ಗಳೇ ಹೆಚ್ಚು ಹತ್ತಿರವಾಗುತ್ತಾರೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್‌ ಭಾಗವತ್‌ ಹೇಳಿದರು.

ನಗರದ ಶಿವಶರಣ ಮಾದಾರ ಚನ್ನಯ್ಯ ಗುರು ಪೀಠದಲ್ಲಿ ಮಂಗಳ ವಾರ ದಲಿತ, ಹಿಂದುಳಿದ ವರ್ಗಗಳ 21 ಮಠಾಧಿಧೀಶರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾ ಡಿದ ಅವರು, ನಮ್ಮ ಸಮಾಜದಲ್ಲಿ ಕೆಲವು ಭಾಗ ಹಿಂದುಳಿಯಿತು. ಕಾರಣ ಸಂಪರ್ಕ ಕಡಿದು ಹೋಯಿತು.

ಹಿಂದೂ ಸಮಾಜದ ಎಲ್ಲ ಅಂಗಗಳನ್ನು ಸುಸ್ಥಿತಿಯಲ್ಲಿಡುವುದು ನಮ್ಮ ಕರ್ತವ್ಯ. ಮತ್ತೆ ಮತ್ತೆ ಸೇರುವುದರಿಂದ ಇದು ಸರಿ ಆಗುತ್ತದೆ. ಅದೇ ಸಮರಸ. ಸಂಘ ಇದೇ ಪ್ರಯತ್ನ ಮಾಡುತ್ತಿದೆ. ಸಮಾಜದ ಎಲ್ಲ ಅಂಗಗಳ ಬಗ್ಗೆ ಸಂವೇದನೆ ಇರಬೇಕು. ಆಗಾಗ ಸೇರುವುದರಿಂದ ನಮಗೆ ಪರಸ್ಪರರ ಬಗ್ಗೆ ಅರಿವು ಹೆಚ್ಚಾಗುತ್ತದೆ. ಅರಿವು ಹೆಚ್ಚಾದಾಗ ಸಂಶಯಗಳು, ಅಪನಂಬಿಕೆ ಗಳು ದೂರ ಆಗುತ್ತವೆ. ಆಗ ಮನಸ್ಸುಗಳು ಒಂದಾಗುತ್ತವೆ. ಆರೆಸ್ಸೆಸ್‌ ಹಾಗೂ ಸ್ವಾಮೀಜಿಗಳು ಮತ್ತೆ ಮತ್ತೆ ಭೇಟಿ ಮಾಡುತ್ತಿರಬೇಕು ಎಂದರು.

ಎಲ್ಲ ಮಠಾ ಧೀಶರು ಮಾಡುತ್ತಿರುವ ಪ್ರಯತ್ನ ಬೀಜ ರೂಪದಲ್ಲಿದೆ. ಇದು ಖಂಡಿತವಾಗಿ ಹೆಮ್ಮರ ವಾಗಿ ಬೆಳೆಯುತ್ತದೆ. ಫಲವನ್ನೂ, ನೆರಳನ್ನೂ ನೀಡುತ್ತದೆ. ಮಾತ್ರವಲ್ಲ, ಸಾವಿರಾರು ಬೀಜಗಳನ್ನು ಸೃಷ್ಟಿಸಿ ಅವು ಭೂಮಿಗೆ ತಾಗಿ ಸಸಿಗಳಾಗಿ ಬೆಳೆದು ಹೆಮ್ಮರವಾಗಿ ನಿಂತು ಫಲಗಳನ್ನೂ ನೀಡುವಂತೆ ಖಂಡಿತವಾಗಿ ಬೆಳೆದೇ ಬೆಳೆಯುತ್ತವೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸದಾ ಸ್ವಾಮೀಜಿಗಳ ಜತೆ ಇದೆ. ಸಂಘದ ರೀತಿ ಅತ್ಯಂತ ಪ್ರಾಕೃತಿಕವಾಗಿದೆಯಲ್ಲದೇ ಸಂಘದ ಗತಿ ನಿಧಾನ ಗತಿ. ನಿಮ್ಮ ಜತೆ ಇದ್ದೇವೆ ಮತ್ತು ಇರುತ್ತೇವೆ. ನಾವು ದೊಡ್ಡವರು ಎಂಬ ಕಾರಣಕ್ಕಾಗಿ ಅಲ್ಲ. ಬದಲಾಗಿ ಇದು ನಮ್ಮ ಕರ್ತವ್ಯ. ಹಾಗಾಗಿ ನೀವು ಸಂಘದ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮಾಡಿ ಎಂದರು.

ಸಮಾಜ ಕಟ್ಟೋಣ
ದೊಡ್ಡವರಿಗೆ ಗೌರವ ಕೊಡುವುದು, ನಮ್ಮ ಮಾತೆಯರು, ಸೋದರಿ ಯರ ಜತೆ ಹೇಗೆ ನಡೆದುಕೊಳ್ಳಬೇಕು ಎನ್ನುವ ಸಂಸ್ಕಾರವನ್ನು ಸಮಾಜದ ನವ ಪೀಳಿಗೆಗಳಿಗೆ ಹೇಳಿಕೊಡಬೇಕಿದೆ. ಆಧುನಿಕ ವಿದ್ಯಾಭ್ಯಾಸದೊಂದಿಗೆ ಶಿಕ್ಷಣ ಸಿಗುತ್ತಿದೆ. ಆದರೆ ಸಂಸ್ಕಾರ ಸ್ವಲ್ಪ ದೂರ ಆಗುತ್ತಿದೆ. ಸಂಸ್ಕಾರ, ನಿಷ್ಠೆ ದೃಢವಾಗಬೇಕಾದರೆ ಏನಾದರೂ ಒಂದು ರೀತಿಯ ಉಪಾಸನೆಯನ್ನು ಜೋಡಿಸಿಕೊಳ್ಳ ಬೇಕು. ಸ್ವಾಮೀಜಿ ಗಳು ಸಾಧನೆ, ನಿಯಮಿತ ತಪಸ್ಸು ಮಾಡುವವರು. ಸೇವೆ ಮತ್ತು ಸಂಸ್ಕಾರದ ಮೂಲಕ ನಾವು ಸಮಾಜವನ್ನು ಕಟ್ಟಿ ಬೆಳೆಸಬೇಕಿದೆ. ಸತ್ಯದ ಸಾಧನೆ ಮಾಡುತ್ತಾ ಸರ್ವರ ಸೇವೆ ಮಾಡಬೇಕಿದೆ ಎಂದರು.

ಆರೆಸ್ಸೆಸ್‌ ಸಹ ಸರಕಾರ್ಯವಾಹ ಮುಕುಂದ್‌, ಕ್ಷೇತ್ರೀಯ ಪ್ರಚಾರಕ ಸುಧೀರ್‌, ಕ್ಷೇತ್ರೀಯ ಕಾರ್ಯ ವಾಹ ನ. ತಿಪ್ಪೇಸ್ವಾಮಿ, ಸಂಘದ ಪ್ರಮು ಖರಾದ ಪಟ್ಟಾಭಿರಾಮ, ಗುರುಪ್ರಸಾದ, ನಂದೀಶ, ಸಾಮರಸ್ಯ ವೇದಿಕೆಯ ವಾದಿರಾಜ, ವಿಎಚ್‌ಪಿ ಪ್ರಮುಖರಾದ ಬಸವರಾಜ ಸಂವಾದದಲ್ಲಿ ಭಾಗವಹಿಸಿದ್ದರು. ರವಿ ಮಲ್ಲಾಪುರ ವಂದಿಸಿದರು.

ಈಗ ಕಾಲ ಕೂಡಿ ಬಂದಿದೆ: ಶ್ರೀ
ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಅವರನ್ನು ಈ ಹಿಂದೆ ಮಠಕ್ಕೆ ಆಹ್ವಾನಿಸಿದ್ದೆವು. ಕೋವಿಡ್‌ ಕಾರಣಕ್ಕೆ ಆಗಿರಲಿಲ್ಲ. ಈಗ ಸಂದರ್ಭ ಒದಗಿ ಬಂದಿದ್ದು, ದಲಿತ, ಹಿಂದುಳಿದ ಮಠಾಧಿಧೀಶರ ಜತೆಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಮತಾಂತರ, ಅಸ್ಪೃಶ್ಯತೆ, ಮೀಸಲಾತಿ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಮೀಸಲಾತಿ ಕುರಿತು ಮಾತನಾಡಿದ ಮೋಹನ್‌ ಭಾಗವತ್‌ ಅವರು, ಸರ್ಕಾರಗಳು ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು. ಎಲ್ಲರಿಗೂ ನ್ಯಾಯ ಒದಗಿಸಬೇಕು ಎಂದು ಧ್ವನಿಗೂಡಿಸಿದರು ಎಂದು ಶ್ರೀ ಬಸವ ಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.

ಭಾಗಿಯಾಗಿದ್ದ ಮಠಾಧೀಶರು
ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಅವರ ಜತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಡಾ| ಶಾಂತವೀರ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಶ್ರೀ ಬಸವಕುಂಬಾರ ಗುಂಡಯ್ಯ ಸ್ವಾಮೀಜಿ, ಜಗದ್ಗುರು ಶ್ರೀ ರೇಣುಕಾನಂದ ಸ್ವಾಮೀಜಿ, ಶ್ರೀ ವೇಮನಾನಂದ ಸ್ವಾಮೀಜಿ, ಶ್ರೀ ಶಾಂತಭೀಷ್ಮ ಅಂಬಿಗರ ಚೌಡಯ್ಯ ಸ್ವಾಮೀಜಿ, ಶ್ರೀ ಬಸವ ಭೃಂಗೀಶ್ವರ ಸ್ವಾಮೀಜಿ, ಡಾ| ಬಸವಕುಮಾರ ಸ್ವಾಮೀಜಿ, ಶ್ರೀ ದಯಾನಂದಪುರಿ ಸ್ವಾಮೀಜಿ, ಶ್ರೀ ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಶ್ರೀ ಬಸವನಾಗಿದೇವ ಸ್ವಾಮೀಜಿ, ಶ್ರೀ ಜ್ಞಾನಾನಂದಪುರಿ ಸ್ವಾಮೀಜಿ, ಶ್ರೀ ಮಾತಾ ಬಿಸuದೇವಿ, ಶ್ರೀ ಬಸವ ಹರಳಯ್ಯ ಸ್ವಾಮೀಜಿ, ಶ್ರೀ ಪೂರ್ಣಾನಂದ ಭಾರತೀ ಸ್ವಾಮೀಜಿ, ಶ್ರೀ ಶ್ರೀಧರಾನಂದ ಸ್ವಾಮೀಜಿ ಭಾಗವಹಿಸಿದ್ದರು. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಮತಾಂತರ ತಡೆಗಟ್ಟುವ ಪ್ರಯತ್ನ ಆಗಲಿ
ಭಾರತ ಭಾರತವಾಗಿ ಉಳಿಯಬೇಕಾದರೆ ನಾವು ನಾವಾಗಿ ಉಳಿಯಬೇಕು. ಇಲ್ಲದಿದ್ದರೆ ಭಾರತ ಭಾರತವಾಗಿ ಉಳಿಯುವುದಿಲ್ಲ. ಮತಾಂತರ ನಮ್ಮಲ್ಲಿ ಪ್ರತ್ಯೇಕತೆ ತರುತ್ತದೆ. ಧರ್ಮ ಎಲ್ಲಾ ಕಡೆಗಳಲ್ಲಿ ಓತಪ್ರೋತವಾಗಿರುವಂತೆ ನೋಡಿಕೊಳ್ಳುವ ಅಗತ್ಯವಿದೆ. ಮೂಲ ಅಥವಾ ಬೇರಿನಿಂದ ಯಾರೂ ಕೂಡ ದೂರವಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಮತಾಂತರ ತಡೆಯುವ ಪ್ರಯತ್ನ ಮಾಡಬೇಕು. ಹಿಂದೂ ಸಮಾಜದ ಪ್ರಮುಖ ಸಮಸ್ಯೆಗಳಾದ ಅಸ್ಪೃಶ್ಯತೆ, ವಿಷಮತೆ, ಅಸಮಾನತೆ ಮುಖ್ಯವಾಗಿರುವುದು ನಮ್ಮ ಮನಸ್ಸಿನಲ್ಲಿ. ಶಾಸ್ತ್ರಗಳಲ್ಲಿ ಈ ಸಮಸ್ಯೆ ಇಲ್ಲ. ಈ ಸಮಸ್ಯೆಗಳು ಹಲವು ಶತಮಾನಗಳಿಂದ ನಮ್ಮ ಮನಸ್ಸಿನಲ್ಲಿ ಉಳಿದಿವೆ. ಹಾಗಾಗಿ ಇದರ ಪರಿಹಾರಕ್ಕೆ ಸಮಯ ಬೇಕು. ಮನಸ್ಸಿನಿಂದ ತೆಗೆಯುವ ಕೆಲಸವಾಗಬೇಕಿದೆ. ಅಲ್ಲಿಯವರೆಗೂ ಸಹನೆ ಮತ್ತು ಧೈರ್ಯವನ್ನು ನಾವು ಹೊಂದಬೇಕು. ಅದು ಆಗಿಯೇ ಆಗುತ್ತದೆ ಮತ್ತು ಆ ಕಾರ್ಯದಲ್ಲಿ ನಾವು ನಿರತರಾಗಿದ್ದೇವೆ ಎಂದು ಮೋಹನ್‌ ಭಾಗವತ್‌ ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.