![1-dee](https://www.udayavani.com/wp-content/uploads/2025/02/1-dee-1-415x221.jpg)
![1-dee](https://www.udayavani.com/wp-content/uploads/2025/02/1-dee-1-415x221.jpg)
Team Udayavani, Feb 5, 2020, 5:39 PM IST
ಪರಶುರಾಂಪುರ: ಸಮೀಪದ ನಾಗಗೊಂಡನಹಳ್ಳಿ ಗ್ರಾಮದ ಬಳಿಯ ವೇದಾವತಿ ನದಿ ದಡದಲ್ಲಿನ ಶ್ರೀ ಚಿಲುಮೆ ರುದ್ರಸ್ವಾಮಿ ಮಠದಲ್ಲಿ ಮಂಗಳವಾರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಸಾನ್ನಿಧ್ಯ ವಹಿಸಿದ್ದರು. ಗದ್ದುಗೆ ಮಠದ ಚರಮೂರ್ತಿಗಳಾದ ಶ್ರೀ ಬಸವಕಿರಣ ಸ್ವಾಮೀಜಿ ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ರಥೋತ್ಸವಕ್ಕೆ ಚಾಲನೆ ನೀಡಿದರು.
ನಾಗಗೊಂಡನಹಳ್ಳಿಯ ಹನ್ನೆರಡು ಕೈವಾಡಸ್ಥರು, ರೈತ ಮುಖಂಡ ಕೆ.ಪಿ. ಭೂತಯ್ಯ, ತಾಪಂ ಮಾಜಿ ಅಧ್ಯಕ್ಷ ಜಿ. ವೀರೇಶ್, ಶ್ರೀ ಗುರು ಚಿಲುಮೆ ರುದ್ರಸ್ವಾಮಿ ಗದ್ದುಗೆ ಮಠ ಸಮಿತಿ ಉಪಾಧ್ಯಕ್ಷ ಎಚ್. ಓಬಳೇಶಪ್ಪ, ಕಾರ್ಯದರ್ಶಿ ಜೆ.ಎಚ್. ಬೊಮ್ಮಯ್ಯ, ಸಹ ಕಾರ್ಯದರ್ಶಿ ಜಿ.ಟಿ. ರವಿಕುಮಾರ್, ಎಂ. ಉಮಾಮಹೇಶ್ವರಯ್ಯ, ರವಿಚಂದ್ರ, ಬಸವರಾಜು, ಪಾಲನೇತ್ರಪ್ಪ, ನರಸಿಂಹಪ್ಪ ಮೊದಲಾದವರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ರಥವನ್ನು ವಿವಿಧ ಹೂವುಗಳು, ಬಾಳೆಗೊನೆ, ಎಳನೀರಿನ ಗೊಂಚಲಿನಿಂದ ಅಲಂಕರಿಸಲಾಗಿತ್ತು. ರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ರಥಕ್ಕೆ ಹಣ್ಣು-ಕಾಯಿ ಸಮರ್ಪಿಸಿ ಭಕ್ತರು ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು. ರಥೋತ್ಸವಕ್ಕೂ ಮುನ್ನ ಮುಕ್ತಿ ಬಾವುಟ ಹರಾಜು ನಡೆಯಿತು. ಮೂರನೇ ಬಾರಿಯೂ ಜಾಜೂರು ಗ್ರಾಪಂ ಅಧ್ಯಕ್ಷೆ ಭೀಮಕ್ಕ 21 ಸಾವಿರ ರೂ.ಗಳಿಗೆ ಮುಕ್ತಿ ಬಾವುಟವನ್ನು ತಮ್ಮದಾಗಿಸಿಕೊಂಡರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
You seem to have an Ad Blocker on.
To continue reading, please turn it off or whitelist Udayavani.