ಕಲುಷಿತ ನೀರಿನ ಪ್ರಕರಣ: ಕಾವಾಡಿಗರಹಟ್ಟಿಯಲ್ಲಿ ಬಿಗುವಿನ ವಾತಾವರಣ


Team Udayavani, Aug 2, 2023, 12:49 PM IST

ಕಲುಷಿತ ನೀರಿನ ಪ್ರಕರಣ: ಕಾವಾಡಿಗರಹಟ್ಟಿಯಲ್ಲಿ ಬಿಗುವಿನ ವಾತಾವರಣ

ಚಿತ್ರದುರ್ಗ: ಕಲುಷಿತ ನೀರು ಸೇವಿಸಿದ ಪ್ರಕರಣದಲ್ಲಿ ನಗರದ 16ನೇ ವಾರ್ಡ್ ವ್ಯಾಪ್ತಿಯ ಕಾವಾಡಿಗರಹಟ್ಟಿಯಲ್ಲಿ ಅಸ್ವಸ್ಥರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ.

ನಗರದ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಒಟ್ಟು 60 ಜನ ದಾಖಲಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ 18 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸವೇಶ್ವರ ಆಸ್ಪತ್ರೆಯಲ್ಲಿರುವ ಐವರ ಸ್ಥಿತಿ ಚಿಂತಾಜನಕವಾಗಿದೆ.

ಮಂಗಳವಾರ ಮೃತಪಟ್ಟಿದ್ದ ಮಂಜುಳಾ ಮೃತದೇಹವನ್ನು ಸಂಬಂಧಿಕರು ಹಾಗೂ ಗ್ರಾಮಸ್ಥರು ಅಂತ್ಯಕ್ರಿಯೆ ಮಾಡದೆ ಮನೆಯ ಮುಂದೆ ಇಟ್ಟುಕೊಂಡು ಪರಿಹಾರಕ್ಕೆ ಪಟ್ಟು ಹಿಡಿದಿದ್ದಾರೆ.

ಮೃತ ಮಹಿಳೆ ಮಂಜುಳಾ ಅವರ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕವಾಡಿಗರಹಟ್ಟಿಗೆ ತರಲಾಗಿದೆ. ಮೃತ ಮಹಿಳೆಯ ಸಂಬಂಧಿಕರು, ಬಡಾವಣೆಯ ಜನರ ಆಕ್ರೋಶ ಕಟ್ಟೆಯೊಡೆದಿದ್ದು. ಸಾವಿಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಪಟ್ಟುಹಿಡಿದು ಬುಧವಾರ ಪ್ರತಿಭಟನೆ ಆರಂಭಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದಂತೆ ಪರಿಹಾರವನ್ನು ಕೂಡಲೇ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಹೊಳಲ್ಕೆರೆ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗವನ್ನು ತಡೆದು ಪ್ರತಿಭಟನೆ ನಡೆಸಲು ಮುಂದಾದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಕಾರರ ಮನವೊಲಿಸಿದರು.

ಬೆಂಗಳೂರಿನಲ್ಲಿ ವಾಂತಿ-ಭೇದಿ ಕಾಣಿಸಿಕೊಂಡು‌ ಮೃತಪಟ್ಟಿರುವ ರಘು ಎಂಬುವರ ಮೃತದೇಹದ ಮರಣೋತ್ತರ ಪರೀಕ್ಷೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

ಮೃತದೇಹವನ್ನು ಚಿತ್ರದುರ್ಗಕ್ಕೆ ತರಲಾಗುತ್ತಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಅಂಬ್ಯುಲೆನ್ಸ್ ಓಡಾಟ ನಿರಂತರ:

ಕವಾಡಿಗರಹಟ್ಟಿಯ ಪರಿಶಿಷ್ಟ ಜಾತಿ ಕಾಲೊನಿ ಬಳಿ ವೈದ್ಯರು ಪೊಲೀಸರ ತಂಡವೇ ಬೀಡುಬಿಟ್ಟಿದ್ದು,  ಬುಧವಾರ ಹಲವರು ಅಸ್ವಸ್ಥರಾಗಿದ್ದಾರೆ. ಬುಧವಾರ ನಸುಕಿನಿಂದ ಬೆಳಿಗ್ಗೆ 11 ಗಂಟೆಯ ಹೊತ್ತಿಗೆ 20 ಕ್ಕೂ ಹೆಚ್ಚು ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಟ್ಟಿಯಲ್ಲಿ ಅಸ್ವಸ್ಥರಾದವರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ.

ನಗರಸಭೆಯಿಂದ ಟ್ಯಾಂಕರ್ ನೀರು ಪೂರೈಕೆ:

ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾಗಿರುವುದರಿಂದ ಕವಾಡಿಗರಹಟ್ಟಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಮನೆಯಲ್ಲಿದ್ದ ಹಳೆಯ ನೀರನ್ನೆಲ್ಲಾ ಚೆಲ್ಲಿದ್ದು,

ಕೊಳವೆ ಭಾವಿ ನೀರನ್ನು ಮನೆ-ಮನೆಗೂ ಸರಬರಾಜು ಮಾಡಲಾಗುತ್ತಿದೆ. ಬಡಾವಣೆಯಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.

ಕವಾಡಿಗರಹಟ್ಟಿಯಲ್ಲಿ ಇರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮಂಗಳವಾರ ರಾತ್ರಿ ಕಲ್ಲು ಬೀಸಲಾಗಿದೆ. ಘಟಕದ ಗಾಜು ಪುಡಿಯಾಗಿದ್ದು, ಆಕ್ರೋಶಗೊಂಡ ಸ್ಥಳೀಯರು ಗಾಜು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

CTD-Vanivilasa

Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.